AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಪೋಸ್ಟರ್ ಹರಿದ ರಕ್ಷಣಾ ವೇದಿಕೆ ಕಾರ್ಯಕರ್ತರು

Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಸಹ ಭಾರಿ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಬಿಡುಗಡೆ ಆಗಿದೆ. ಆದರೆ ‘ಹರಿ ಹರ ವೀರ ಮಲ್ಲು’ ಸಿನಿಮಾ ಕನ್ನಡಪರ ಹೋರಾಟಗಾರರ ವಿರೋಧ ಎದುರಿಸಿದೆ. ಕನ್ನಡಪರ ಹೋರಾಟಗಾರರು ಸಿನಿಮಾದ ಪೋಸ್ಟರ್ ಹರಿದಿದ್ದಾರೆ.

‘ಹರಿ ಹರ ವೀರ ಮಲ್ಲು’ ಪೋಸ್ಟರ್ ಹರಿದ ರಕ್ಷಣಾ ವೇದಿಕೆ ಕಾರ್ಯಕರ್ತರು
Hari Hara Veera Mallu
ಮಂಜುನಾಥ ಸಿ.
|

Updated on: Jul 24, 2025 | 5:16 PM

Share

ಪವನ್ ಕಲ್ಯಾಣ್ (Pawan Kalyan) ನಟನೆಯ ತೆಲುಗು ಸಿನಿಮಾ ‘ಹರಿ ಹರ ವೀರ ಮಲ್ಲು’ ಇಂದು (ಜುಲೈ 24) ಬಿಡುಗಡೆ ಆಗಿದೆ. ಆಂಧ್ರ, ತೆಲಂಗಾಣ ಸೇರಿದಂತೆ ಕರ್ನಾಟಕ, ತಮಿಳುನಾಡು, ಕೇರಳ, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಹಾಗೂ ವಿದೇಶಗಳಲ್ಲಿಯೂ ಸಹ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಗಿದೆ. ಕರ್ನಾಟಕದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳಿದ್ದು, ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಇಂದು ಬಿಡುಗಡೆ ಕಂಡಿದೆ.

ಆದರೆ ‘ಹರಿ ಹರ ವೀರ ಮಲ್ಲು’ ಸಿನಿಮಾ ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರರ ಆಕ್ರೋಶವನ್ನು ಎದುರುಗೊಂಡಿದೆ. ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಗಿದ್ದ ಬೆಂಗಳೂರಿನ ಚಿತ್ರಮಂದಿರದ ಒಂದರ ಮೇಲೆ ದಾಳಿ ಮಾಡಿದ್ದ ಕನ್ನಡ ಪರ ಹೋರಾಟಗಾರರು, ಸಿನಿಮಾದ ಪೋಸ್ಟರ್ ಹರಿದು ಹಾಕಿದ್ದಾರೆ. ಸಿನಿಮಾದ ಪೋಸ್ಟರ್ ತೆಲುಗಿನಲ್ಲಿದೆಯೆಂದು, ಸಿನಿಮಾದ ಯಾವುದೇ ಪೋಸ್ಟರ್​​ ಕನ್ನಡದಲ್ಲಿ ಇಲ್ಲವೆಂದು ಚಿತ್ರಮಂದಿರದವರ ಜೊತೆಗೆ ವಾಗ್ವಾದ ಮಾಡಿದ್ದು, ಪವನ್ ಕಲ್ಯಾಣ್ ಅವರ ದೊಡ್ಡ ಪೋಸ್ಟರ್ ಒಂದನ್ನು ಹರಿದು ಹಾಕಿದ್ದಾರೆ.

ಪವನ್ ಕಲ್ಯಾಣ್ ಪೋಸ್ಟರ್ ಹರಿಯುವ ವೇಳೆ ಅಲ್ಲಿಯೇ ಇದ್ದ ಕೆಲ ಪವನ್ ಕಲ್ಯಾಣ್ ಅಭಿಮಾನಿಗಳು ವಿರೋಧಿಸಿದ್ದು, ಅವರೊಟ್ಟಿಗೆ ಕನ್ನಡಪರ ಹೋರಾಟಗಾರರು ವಾಗ್ವಾದ ಮಾಡಿದ್ದಾರೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಯಾವ ಚಿತ್ರಮಂದಿರದ ಬಳಿಕ ಹೀಗೊಂದು ಘಟನೆ ನಡೆದಿದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ ಕನ್ನಡಪರ ಹೋರಾಟಗಾರರ ಪೋಸ್ಟರ್ ಹರಿದಿರುವ ವಿಡಿಯೋ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:‘ಹರಿ ಹರ ವೀರ ಮಲ್ಲು’ ಫಸ್ಟ್​ ಹಾಫ್ ವಿಮರ್ಶೆ

‘ಹರಿ ಹರ ವೀರ ಮಲ್ಲು’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡದಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ. ಆದರೆ ಬೆಂಗಳೂರಿನಲ್ಲಿ ಸಿನಿಮಾದ ಕನ್ನಡ ಆವೃತ್ತಿಗೆ ಸಿಕ್ಕಿರುವುದು ಎರಡು ಚಿತ್ರಮಂದಿರ ಮತ್ತು ಆರು ಶೋಗಳು ಮಾತ್ರವೇ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸಿನಿಮಾ ಬಿಡುಗಡೆ ಆಗಿದ್ದು, ಬಹುತೇಕ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್​ಗಳು ತೆಲುಗು ಭಾಷೆಯಲ್ಲಿಯೇ ಸಿನಿಮಾ ಬಿಡುಗಡೆ ಮಾಡಿವೆ. ಸಿನಿಮಾದ ಪ್ರಚಾರದ ಪೋಸ್ಟರ್​ಗಳು ಸಹ ತೆಲುಗಿನಲ್ಲೆಯೇ ಇವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ