AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾದಿಯಲ್ಲಿ ಹೋಗುವವರೆಲ್ಲ ಸಿನಿಮಾ ಮಾಡದಂತೆ ನಿಯಮ ತರಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಿರ್ಮಾಪಕ ಕೆ.ಮಂಜು

ಇಂದು ಮಂಜು ಅವರು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಮಾಧ್ಯಮದ ಜತೆ ಅವರು ಮಾತನಾಡಿದ್ದಾರೆ.

‘ಹಾದಿಯಲ್ಲಿ ಹೋಗುವವರೆಲ್ಲ ಸಿನಿಮಾ ಮಾಡದಂತೆ ನಿಯಮ ತರಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಿರ್ಮಾಪಕ ಕೆ.ಮಂಜು
‘ಹಾದಿಯಲ್ಲಿ ಹೋಗುವವರೆಲ್ಲ ಸಿನಿಮಾ ಮಾಡದಂತೆ ನಿಯಮ ತರಬೇಕು’; ವಿವಾದಾತ್ಮಕ ಹೇಳಿಕೆ ನೀಡಿದ ನಿರ್ಮಾಪಕ ಕೆ.ಮಂಜು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 11, 2021 | 7:20 PM

Share

‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡ ಸ್ಯಾಂಡಲ್​ವುಡ್​ಗೆ ಶಾಕ್​ ನೀಡಿದೆ. ಸಿನಿಮಾ ಶೂಟಿಂಗ್​ ವೇಳೆ ಸಾಕಷ್ಟು ಎಚ್ಚರಿಕೆ ವಹಿಸಬೇಕು ಎನ್ನುವ ಕೂಗು ಎಲ್ಲ ಕಡೆಗಳಲ್ಲೂ ಕೇಳಿ ಬರುತ್ತಿದೆ. ಹೀಗಿರುವಾಗಲೇ ನಿರ್ಮಾಪಕ ಕೆ.ಮಂಜು ಮಾತಿನ ಭರದಲ್ಲಿ ‘ಹಾದಿಯಲ್ಲಿ ಹೋಗುವವರು ಸಿನಿಮಾ ಮಾಡಿದ್ರೆ ಹೀಗಾಗುತ್ತೆ’ ಎನ್ನುವಂತಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇಂದು ಮಂಜು ಅವರು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಮಾಧ್ಯಮದ ಜತೆ ಅವರು ಮಾತನಾಡಿದ್ದಾರೆ. ‘ಹಾದಿಯಲ್ಲಿ ಹೋಗುವವರೆಲ್ಲ ಸಿನಿಮಾ ಮಾಡಿದ್ರೆ ಹೀಗೇ ಆಗುತ್ತೆ. ಅಂತಹವರು ಸಿನಿಮಾ ಮಾಡದಂತೆ ನಿಯಮವನ್ನು ತರಬೇಕು. ದುರ್ಘಟನೆ ಆಗದಂತೆ ಎಚ್ಚರ ವಹಿಸುವುದು ನಿಮ್ಮ ಕೆಲಸ. ಕಟ್ಟುನಿಟ್ಟಿನ ಕ್ರಮಕೈಗೊಳ್ಳದಿದ್ರೆ ಸರ್ಕಾರದಿಂದಲೇ ನಿಯಮ ಬರುತ್ತದೆ’ ಎಂದಿದ್ದಾರೆ ಮಂಜು.

‘ಸಿನಿಮಾ ಮಾಡುವುದಕ್ಕೆ ಒಂದು ತರಬೇತಿ ಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಂಡು ಸಿನಿಮಾ ಮಾಡಬೇಕು. ನೀವು ನಿಯಮ ಮಾಡಿಕೊಡಿ ಅದನ್ನ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ತುಂಬಾ ಬೇಸರದಲ್ಲಿ ಈ ಮಾತುಗಳನ್ನು ಅವರು ಹೇಳಿದ್ದಾರೆ’ ಎಂದಿದ್ದಾರೆ ಮಂಜು.

ಲವ್​​ ಯೂ ರಚ್ಚು ಚಿತ್ರದ ಶೂಟಿಂಗ್ ವೇಳೆ ದುರಂತ ಒಂದು ನಡೆದಿತ್ತು. ಫೈಟರ್​ ವಿವೇಕ್​ ಎಂಬುವವರು ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದರು. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದರು. ಚಿತ್ರತಂಡದ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ಎಲ್ಲಾ ಕಡೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Fighter Vivek Death: ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ, ಫೈಟರ್ ವಿವೇಕ್ ಸಾವು

Published On - 7:02 pm, Wed, 11 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!