AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಟ್ಟು ವಿಮರ್ಶೆ ಖರೀದಿಸಿದ್ದಾರೆ ಎಂದವಗೆ ಖಡಕ್ ಉತ್ತರ ನೀಡಿದ ‘ಹೊಯ್ಸಳ’ ನಿರ್ಮಾಪಕ

ಹಣ ಚೆಲ್ಲಿ ಹೊಯ್ಸಳ ಸಿನಿಮಾದ ಪರ ವಿಮರ್ಶೆ ಕೊಡಿಸಲಾಗಿದೆ ಎಂದವರಿಗೆ ಖಡಕ್ ಪ್ರತ್ಯುತ್ತರ ನೀಡಿದ್ದಾರೆ ಸಿನಿಮಾದ ನಿರ್ಮಾಪಕ ಕಾರ್ತಿಕ್ ಗೌಡ.

ಹಣ ಕೊಟ್ಟು ವಿಮರ್ಶೆ ಖರೀದಿಸಿದ್ದಾರೆ ಎಂದವಗೆ ಖಡಕ್ ಉತ್ತರ ನೀಡಿದ 'ಹೊಯ್ಸಳ' ನಿರ್ಮಾಪಕ
ಹೊಯ್ಸಳ ನಿರ್ಮಾಪಕ ಕಾರ್ತಿಕ್ ಗೌಡ
ಮಂಜುನಾಥ ಸಿ.
|

Updated on:Mar 31, 2023 | 10:23 PM

Share

ಡಾಲಿ ಧನಂಜಯ್ (Daali Dhananjay) ನಟನೆಯ ಹೊಯ್ಸಳ (Hoysala) ಸಿನಿಮಾ ನಿನ್ನೆಯಷ್ಟೆ (ಮಾರ್ಚ್ 31) ಬಿಡುಗಡೆ ಆಗಿದ್ದು, ಮೊದಲ ದಿನ ಒಳ್ಳೆಯ ಪ್ರತಿಕ್ರಿಯೆಯನ್ನು ಪ್ರೇಕ್ಷಕರಿಂದ, ವಿಮರ್ಶಕರಿಂದ ಪಡೆದುಕೊಂಡಿದೆ. ಖಡಕ್ ಪೊಲೀಸ್ ಅಧಿಕಾರಿಯ ಕತೆಯುಳ್ಳ ಈ ಸಿನಿಮಾವನ್ನು ಹೊಂಬಾಳೆಯ ಸಹೋದರ ಸಂಸ್ಥೆಯಾದ ಕೆಆರ್​ಜಿ ಸ್ಟುಡಿಯೋಸ್ ನಿರ್ಮಿಸಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಗೌಡ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ, ಆದರೆ ಬೆರಳಿಣೆಯಷ್ಟು ಮಂದಿ ಸಿನಿಮಾದ ಬಗ್ಗೆ ನಕಾರಾತ್ಮಕವಾಗಿಯೂ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ಫ್ಲಾಪ್ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಗುಲ್ಲು ಎಬ್ಬಿಸಿದ್ದು, ಅಂಥಹವರಿಗೆ ನಿರ್ಮಾಪಕ ಕಾರ್ತಿಕ್ ಗೌಡ (Karthik Gowda) ಖಡಕ್ ಉತ್ತರ ಕೊಟ್ಟಿದ್ದಾರೆ.

ಮಸಾಲೆ ದೋಸೆ ಎಂಬ ಹೆಸರುಳ್ಳ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿರುವ ವ್ಯಕ್ತಿಯೊಬ್ಬರು, ಟ್ವಿಟ್ಟರ್​ನಲ್ಲಿ ಹೊಯ್ಸಳ ಸಿನಿಮಾ ಸೂಪರ್, ಬ್ಲಾಕ್​ ಬಸ್ಟರ್, ಚಿಂದಿ ಚಿತ್ರಾನ್ನ ಎಂದು ಹೊಗಳುತ್ತಿದ್ದಾರೆ. ಆದರೆ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಸೋತಿದೆ. ನೀವು ಜನಗರ ಅಭಿಪ್ರಾಯವನ್ನು ಖರೀದಿ ಮಾಡಲಾರಿರಿ” ಎಂದು ಪೋಸ್ಟ್ ಹಂಚಿಕೊಂಡಿದ್ದರು, ಹೊಯ್ಸಳ ಸಿನಿಮಾದಂತೆ ಬಿಡುಗಡೆ ಆದ ದಸರಾ ಸಿನಿಮಾದ ನಾಯಕಿ ಅಳುತ್ತಿರುವ ಪೋಸ್ಟ್ ಅನ್ನು ಅನ್ನು ಜೊತೆಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ಮಸಾಲೆ ದೋಸೆ ಖಾತೆಯಿಂದ ಮಾಡಲಾದ ಟ್ವೀಟ್​ಗೆ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡಿರುವ ಕಾರ್ತಿಕ್ ಗೌಡ, ನಾವು ಯಾರೂ ಸಹ ವಿಮರ್ಶಕರನ್ನು ಖರೀದಿಸಿಲ್ಲ, ವಿಮರ್ಶೆಗಳ ಮೇಲೆ ಪ್ರಭಾವ ಸಹ ಬೀರಿಲ್ಲ. ಜನಪ್ರಿಯತೆ ಗಳಿಸಲೋ ಅಥವಾ ನಿನ್ನ ಖಾಸಗಿ ಉದ್ದೇಶದಿಂದಲೋ ಏನೋ, ನೀನು, ನಮ್ಮ ಸಿನಿಮಾದ ಬಗ್ಗೆ ಕೆಲ ದಿನಗಳಿಂದಲೂ ಋಣಾತ್ಮಕವಾಗಿಯೇ ಮಾತನಾಡುತ್ತಿದ್ದೀಯ. ನಿಮಗೆ ಸಿನಿಮಾ ಮಾಡಲು ಬರದಿದ್ದರೆ, ಸಿನಿಮಾವನ್ನು ಮುರಿಯುವ ಪ್ರಯತ್ನವನ್ನೂ ಮಾಡಬೇಡಿ. ಹೊಯ್ಸಳ ಸಿನಿಮಾದ ಬಗ್ಗೆ ಪ್ರಕಟವಾಗಿರುವ ಎಲ್ಲ ವಿಮರ್ಶೆಗಳು ನೈಜ ವಿಮರ್ಶೆಗಳು. ಮತ್ತು ನಮ್ಮ ಸಿನಿಮಾ ಸಹ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ಕಲೆಕ್ಷನ್ ಏರುಗತಿಯಲ್ಲಿದೆ ಎಂದಿದ್ದಾರೆ.

ಹೊಯ್ಸಳ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿರುವ ಕಾರಣ ನಿರ್ಮಾಪಕ ಕಾರ್ತಿಕ್ ಗೌಡ, ನಟ ಡಾಲಿ ಧನಂಜಯ್​ಗೆ ಒಂದು ಕೋಟಿ ಬೆಲೆಯ ಟೊಯೊಟಾ ವಿಲ್​ಫೈರ್ ಹೆಸರಿನ ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಚಿತ್ರವನ್ನು ನಟ ಡಾಲಿ ಧನಂಜಯ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹೊಯ್ಸಳ ಸಿನಿಮಾವು ಡಾಲಿ ಧನಂಜಯ್​ರ 25ನೇ ಸಿನಿಮಾ ಆಗಿದ್ದು, ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಡಾಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಅಮೃತಾ ಐಯ್ಯಂಗಾರ್ ನಾಯಕಿಯಾಗಿ ನಟಿಸಿದ್ದಾರೆ. ವಿಜಯ್ ನಿರ್ದೇಶನದ ಈ ಸಿನಿಮಾದಲ್ಲಿ ಗುಲ್ಟು ನವೀನ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ರಾಜೇಶ್ ನಟರಂಗ ಕೆಜಿಎಫ್ ಖ್ಯಾತಿಯ ವಿಲನ್ ಆಂಡ್ರ್ಯೂ ಸಹ ನಟಿಸಿದ್ದಾರೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Fri, 31 March 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ