Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಟ್ಟು ವಿಮರ್ಶೆ ಖರೀದಿಸಿದ್ದಾರೆ ಎಂದವಗೆ ಖಡಕ್ ಉತ್ತರ ನೀಡಿದ ‘ಹೊಯ್ಸಳ’ ನಿರ್ಮಾಪಕ

ಹಣ ಚೆಲ್ಲಿ ಹೊಯ್ಸಳ ಸಿನಿಮಾದ ಪರ ವಿಮರ್ಶೆ ಕೊಡಿಸಲಾಗಿದೆ ಎಂದವರಿಗೆ ಖಡಕ್ ಪ್ರತ್ಯುತ್ತರ ನೀಡಿದ್ದಾರೆ ಸಿನಿಮಾದ ನಿರ್ಮಾಪಕ ಕಾರ್ತಿಕ್ ಗೌಡ.

ಹಣ ಕೊಟ್ಟು ವಿಮರ್ಶೆ ಖರೀದಿಸಿದ್ದಾರೆ ಎಂದವಗೆ ಖಡಕ್ ಉತ್ತರ ನೀಡಿದ 'ಹೊಯ್ಸಳ' ನಿರ್ಮಾಪಕ
ಹೊಯ್ಸಳ ನಿರ್ಮಾಪಕ ಕಾರ್ತಿಕ್ ಗೌಡ
Follow us
ಮಂಜುನಾಥ ಸಿ.
|

Updated on:Mar 31, 2023 | 10:23 PM

ಡಾಲಿ ಧನಂಜಯ್ (Daali Dhananjay) ನಟನೆಯ ಹೊಯ್ಸಳ (Hoysala) ಸಿನಿಮಾ ನಿನ್ನೆಯಷ್ಟೆ (ಮಾರ್ಚ್ 31) ಬಿಡುಗಡೆ ಆಗಿದ್ದು, ಮೊದಲ ದಿನ ಒಳ್ಳೆಯ ಪ್ರತಿಕ್ರಿಯೆಯನ್ನು ಪ್ರೇಕ್ಷಕರಿಂದ, ವಿಮರ್ಶಕರಿಂದ ಪಡೆದುಕೊಂಡಿದೆ. ಖಡಕ್ ಪೊಲೀಸ್ ಅಧಿಕಾರಿಯ ಕತೆಯುಳ್ಳ ಈ ಸಿನಿಮಾವನ್ನು ಹೊಂಬಾಳೆಯ ಸಹೋದರ ಸಂಸ್ಥೆಯಾದ ಕೆಆರ್​ಜಿ ಸ್ಟುಡಿಯೋಸ್ ನಿರ್ಮಿಸಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಗೌಡ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ, ಆದರೆ ಬೆರಳಿಣೆಯಷ್ಟು ಮಂದಿ ಸಿನಿಮಾದ ಬಗ್ಗೆ ನಕಾರಾತ್ಮಕವಾಗಿಯೂ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ಫ್ಲಾಪ್ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಗುಲ್ಲು ಎಬ್ಬಿಸಿದ್ದು, ಅಂಥಹವರಿಗೆ ನಿರ್ಮಾಪಕ ಕಾರ್ತಿಕ್ ಗೌಡ (Karthik Gowda) ಖಡಕ್ ಉತ್ತರ ಕೊಟ್ಟಿದ್ದಾರೆ.

ಮಸಾಲೆ ದೋಸೆ ಎಂಬ ಹೆಸರುಳ್ಳ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿರುವ ವ್ಯಕ್ತಿಯೊಬ್ಬರು, ಟ್ವಿಟ್ಟರ್​ನಲ್ಲಿ ಹೊಯ್ಸಳ ಸಿನಿಮಾ ಸೂಪರ್, ಬ್ಲಾಕ್​ ಬಸ್ಟರ್, ಚಿಂದಿ ಚಿತ್ರಾನ್ನ ಎಂದು ಹೊಗಳುತ್ತಿದ್ದಾರೆ. ಆದರೆ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಸೋತಿದೆ. ನೀವು ಜನಗರ ಅಭಿಪ್ರಾಯವನ್ನು ಖರೀದಿ ಮಾಡಲಾರಿರಿ” ಎಂದು ಪೋಸ್ಟ್ ಹಂಚಿಕೊಂಡಿದ್ದರು, ಹೊಯ್ಸಳ ಸಿನಿಮಾದಂತೆ ಬಿಡುಗಡೆ ಆದ ದಸರಾ ಸಿನಿಮಾದ ನಾಯಕಿ ಅಳುತ್ತಿರುವ ಪೋಸ್ಟ್ ಅನ್ನು ಅನ್ನು ಜೊತೆಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ಮಸಾಲೆ ದೋಸೆ ಖಾತೆಯಿಂದ ಮಾಡಲಾದ ಟ್ವೀಟ್​ಗೆ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡಿರುವ ಕಾರ್ತಿಕ್ ಗೌಡ, ನಾವು ಯಾರೂ ಸಹ ವಿಮರ್ಶಕರನ್ನು ಖರೀದಿಸಿಲ್ಲ, ವಿಮರ್ಶೆಗಳ ಮೇಲೆ ಪ್ರಭಾವ ಸಹ ಬೀರಿಲ್ಲ. ಜನಪ್ರಿಯತೆ ಗಳಿಸಲೋ ಅಥವಾ ನಿನ್ನ ಖಾಸಗಿ ಉದ್ದೇಶದಿಂದಲೋ ಏನೋ, ನೀನು, ನಮ್ಮ ಸಿನಿಮಾದ ಬಗ್ಗೆ ಕೆಲ ದಿನಗಳಿಂದಲೂ ಋಣಾತ್ಮಕವಾಗಿಯೇ ಮಾತನಾಡುತ್ತಿದ್ದೀಯ. ನಿಮಗೆ ಸಿನಿಮಾ ಮಾಡಲು ಬರದಿದ್ದರೆ, ಸಿನಿಮಾವನ್ನು ಮುರಿಯುವ ಪ್ರಯತ್ನವನ್ನೂ ಮಾಡಬೇಡಿ. ಹೊಯ್ಸಳ ಸಿನಿಮಾದ ಬಗ್ಗೆ ಪ್ರಕಟವಾಗಿರುವ ಎಲ್ಲ ವಿಮರ್ಶೆಗಳು ನೈಜ ವಿಮರ್ಶೆಗಳು. ಮತ್ತು ನಮ್ಮ ಸಿನಿಮಾ ಸಹ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ಕಲೆಕ್ಷನ್ ಏರುಗತಿಯಲ್ಲಿದೆ ಎಂದಿದ್ದಾರೆ.

ಹೊಯ್ಸಳ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿರುವ ಕಾರಣ ನಿರ್ಮಾಪಕ ಕಾರ್ತಿಕ್ ಗೌಡ, ನಟ ಡಾಲಿ ಧನಂಜಯ್​ಗೆ ಒಂದು ಕೋಟಿ ಬೆಲೆಯ ಟೊಯೊಟಾ ವಿಲ್​ಫೈರ್ ಹೆಸರಿನ ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಚಿತ್ರವನ್ನು ನಟ ಡಾಲಿ ಧನಂಜಯ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹೊಯ್ಸಳ ಸಿನಿಮಾವು ಡಾಲಿ ಧನಂಜಯ್​ರ 25ನೇ ಸಿನಿಮಾ ಆಗಿದ್ದು, ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಡಾಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಅಮೃತಾ ಐಯ್ಯಂಗಾರ್ ನಾಯಕಿಯಾಗಿ ನಟಿಸಿದ್ದಾರೆ. ವಿಜಯ್ ನಿರ್ದೇಶನದ ಈ ಸಿನಿಮಾದಲ್ಲಿ ಗುಲ್ಟು ನವೀನ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ರಾಜೇಶ್ ನಟರಂಗ ಕೆಜಿಎಫ್ ಖ್ಯಾತಿಯ ವಿಲನ್ ಆಂಡ್ರ್ಯೂ ಸಹ ನಟಿಸಿದ್ದಾರೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Fri, 31 March 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !