AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಮೆ ಕೇಳಲ್ಲ, ಕಾನೂನು ಹೋರಾಟ ಮಾಡ್ತೀನಿ: ಸುದೀಪ್ ಸಮನ್ಸ್​ಗೆ ಸುರೇಶ್ ಪ್ರತಿಕ್ರಿಯೆ

Sudeep v/s Kumar: ನಟ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ಜಾರಿ ಆಗಿರುವ ಕುರಿತು ನಿರ್ಮಾಪಕ ಎಂಎನ್ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಕ್ಷಮೆ ಕೇಳಲ್ಲ, ಕಾನೂನು ಹೋರಾಟ ಮಾಡ್ತೀನಿ: ಸುದೀಪ್ ಸಮನ್ಸ್​ಗೆ ಸುರೇಶ್ ಪ್ರತಿಕ್ರಿಯೆ
ಸುದೀಪ್-ಕುಮಾರ್
Follow us
Mangala RR
| Updated By: ಮಂಜುನಾಥ ಸಿ.

Updated on:Aug 12, 2023 | 11:22 PM

ನಟ ಸುದೀಪ್ (Sudeep), ತಮ್ಮ ವಿರುದ್ಧ ಆರೋಪ ಮಾಡಿದ ಇಬ್ಬರು ನಿರ್ಮಾಪಕರ (Producer) ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು, ಸುದೀಪ್ ಹೇಳಿಕೆ ದಾಖಲಿಸಿಕೊಂಡಿರುವ ನ್ಯಾಯಾಲಯ ನಿರ್ಮಾಪಕರಾದ ಎಂಎನ್ ಕುಮಾರ್ ಹಾಗೂ ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಈ ಬಗ್ಗೆ ನಿರ್ಮಾಪಕ ಎಂಎನ್ ಸುರೇಶ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ‘ಕ್ಷಮೆ ಕೇಳುವುದಿಲ್ಲ, ಹೋರಾಟ ಮಾಡುತ್ತೇನೆ’ ಎಂದಿದ್ದಾರೆ.

ನ್ಯಾಯಾಲಯದ ಸಮನ್ಸ್ ಇನ್ನೂ ನನ್ನ ಕೈಸೇರಿಲ್ಲ, ನಾನು ಕಾನೂನಿಗೆ ಗೌರವ ಕೊಡ್ತಿನಿ ನ್ಯಾಯಾಧೀಶರು ಕೊಡುವ ತೀರ್ಮಾನಕ್ಕೆ ಬದ್ಧರಾಗಿರ್ತಿನಿ. ಸಮನ್ಸ್ ಬಂದ ನಂತರ ಕಾನೂನು ರೀತಿ ಏನು ಮಾಡಬೇಕು ಎಂಬ ಬಗ್ಗೆ ಚಿಂತನೆ ಮಾಡುತ್ತೀನಿ. ನಮ್ಮ ವಕೀಲರಿದ್ದಾರೆ ಅವರೊಟ್ಟಿಗೆ ಚರ್ಚಿಸಿ ಮುಂದೆ ಏನು ಮಾಡಬೇಕು ಎಂದು ಚಿಂತನೆ ಮಾಡ್ತೀನಿ” ಎಂದಿದ್ದಾರೆ.

ಇನ್ನೋಬ್ಬರನ್ನು ಶೋಷಣೆ, ದೂಷಣೆ ಮಾಡೋದು ತಪ್ಪು. ಅವರು ದೊಡ್ಡವರು ಕೋರ್ಟ್​ಗೆ ಹೋಗಿದ್ದಾರೆ ನಾನು ಗೌರವ ಕೊಡುತ್ತೀನಿ. ಕ್ಷಮೆ ಕೇಳೋದರ ಬಗ್ಗೆ ನಾನು ಯೋಚನೆ ಸಹ ಮಾಡಿಲ್ಲ. ನಾನು ಕಾನೂನು ನಿಟ್ಟಿನಲ್ಲಿ ಕೂಲಂಕುಶವಾಗಿ ಅಭ್ಯಾಸ ಮಾಡಿ ನ್ಯಾಯ ದೇಗುಲದಲ್ಲಿ ಹೋರಾಟ ಮಾಡಿ ನ್ಯಾಯ ದೇವತೆ ಮೋರೆ ಹೋಗುತ್ತೀನಿ ಎಂದು ಸುರೇಶ್ ಹೇಳಿದ್ದಾರೆ. ರವಿಚಂದ್ರನ್ ಮಾಡಿದ್ದ ಸಂಧಾನದ ಫಲ ಏನಾಯ್ತೊ ತಮಗೆ ಗೊತ್ತಿಲ್ಲವೆಂದೂ ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ಇದನ್ನೂ ಓದಿ:ಸುದೀಪ್​-ಎಂಎನ್​ ಕುಮಾರ್​ ಕೇಸ್​ ವಿಚಾರಣೆ; ಕೋರ್ಟ್​ನಲ್ಲಿ ನಡೆದ ಪ್ರಕ್ರಿಯೆ ಬಗ್ಗೆ ವಿವರಿಸಿದ ಲಾಯರ್​

ನಿರ್ಮಾಪಕ ಎಂಎನ್ ಕುಮಾರ್ ಹಾಗೂ ಸುರೇಶ್ ಅವರು ತಿಂಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ, ನಟ ಸುದೀಪ್ ತಮಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಏಳೆಂಟು ವರ್ಷಗಳ ಹಿಂದೆ ಸುದೀಪ್ ಸಿನಿಮಾ ಮಾಡಿಕೊಡುವುದಾಗಿ ಹೇಳಿ ತಮ್ಮಿಂದ ಹಣ ಪಡೆದಿದ್ದರು, ಆದರೆ ಸಿನಿಮಾ ಮಾಡಲು ಡೇಟ್ಸ್ ನೀಡಲಿಲ್ಲ, ಕೊಟ್ಟಿರುವ ಹಣವನ್ನೂ ವಾಪಸ್ ನೀಡಲಿಲ್ಲ ಎಂದಿದ್ದರು. ಸುಮಾರು 45 ಲಕ್ಷ ರೂಪಾಯಿ ಹಣವನ್ನು ಸುದೀಪ್ ತಮಗೆ ನೀಡಬೇಕು ಎಂದು ಕುಮಾರ್ ಹಾಗೂ ಸುರೇಶ್ ಆರೋಪಿಸಿದ್ದರು.

ಕುಮಾರ್ ಹಾಗೂ ಸುರೇಶ್ ಅವರ ಆರೋಪಗಳಿಂದ ಅಸಮಾಧಾನಗೊಂಡ ನಟ ಕಿಚ್ಚ ಸುದೀಪ್ ನ್ಯಾಯಾಲಯದ ಮೆಟ್ಟಿಲೇರಿ, ಸುರೇಶ್ ಹಾಗೂ ಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದರು. ಆ ತರುವಾಯ ನಿರ್ಮಾಪಕ ಎಂಎನ್ ಕುಮಾರ್ ಅವರು, ಫಿಲಂ ಚೇಂಬರ್ ಎದುರು ಪ್ರತಿಭಟನೆ ನಡೆಸಿ ನ್ಯಾಯ ಒದಗಿಸುವಂತೆ ಒತ್ತಾಯ ಮಾಡಿದರು. ಬಳಿಕ ನಟ ರವಿಚಂದ್ರನ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಯ್ತು. ಸಭೆಯಲ್ಲಿ ಸುದೀಪ್, ಜಾಕ್ ಮಂಜು, ರಾಕ್​ಲೈನ್ ವೆಂಕಟೇಶ್, ಎಂಎನ್ ಕುಮಾರ್ ಹಾಗೂ ಇತರರು ಭಾಗವಹಿಸಿದ್ದರು. ಆದರೆ ಆ ಸಂಧಾನ ಸಭೆ ಫಲಪ್ರದವಾದಂತಿಲ್ಲ.

ಇತ್ತೀಚೆಗಷ್ಟೆ ನಟ ಸುದೀಪ್​ ತಮ್ಮ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದರು. ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯ ನಿರ್ಮಾಪಕರಾದ ಕುಮಾರ್ ಹಾಗೂ ಸುರೇಶ್ ಅವರಿಗೆ ಸಮನ್ಸ್ ನೀಡಿದ್ದು, ಆಗಸ್ಟ್ 26ರ ಒಳಗೆ ಹಾಜರಾಗುವಂತೆ ಸೂಚಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:22 pm, Sat, 12 August 23

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ