AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ

ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ ಎಂದು ಮಾತು ಆರಂಭಿಸಿದ್ದಾರೆ ಅವರು.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ
ಸೂರಪ್ಪ ಬಾಬು-ಸುದೀಪ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 15, 2021 | 5:43 PM

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ರಿಲೀಸ್​ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಒಂದು ದಿನ ತಡವಾಗಿ ರಿಲೀಸ್ ಆದ ಹೊರತಾಗಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಿನಿಮಾಗೆ ಅಷ್ಟು ಪ್ರಚಾರ ನೀಡಿಲ್ಲ ಎನ್ನುವ ಮಾತಿದೆ. ಈ ವಿಚಾರಕ್ಕೆ ಸಂಬಂಧಿಸಿ ಸೂರಪ್ಪ ಬಾಬು ಉತ್ತರ ನೀಡಿದ್ದಾರೆ.

ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸೂರಪ್ಪ ಬಾಬು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ‘ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ. ಸುದೀಪ್​ ಅವರೂ ಖಡಕ್​ ಉತ್ತರ ನೀಡಿದ್ದಾರೆ. ಸುದೀಪ್​ ಅವರು ನನ್ನ ಬೆಂಬಲಕ್ಕೆ ನಿಲ್ಲುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಕೋಟಿಗೊಬ್ಬ 3 ರಿಲೀಸ್​ ಆಗಿ ಇಡೀ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಿಮರ್ಶೆಯೂ ಅದ್ಭುತವಾಗಿದೆ. ನೀವು ಚಿತ್ರವನ್ನು ಹರಸಿದ್ದೀರಿ’ ಎಂದರು ಅವರು.

‘ನನ್ನ ಕಡೆಯಿಂದಲೂ ತಪ್ಪುಗಳು ಆಗಿವೆ. ಆ ತಪ್ಪುಗಳು ಆಗೋಕೂ ಒಂದಷ್ಟು ಕಾರಣಗಳಿವೆ. ಇದಕ್ಕಾಗಿ ಪಬ್ಲಿಸಿಟಿ ಕೊಡೋಕೆ ಆಗಿಲ್ಲ. ಆ ಮಟ್ಟಕ್ಕೆ ತಲುಪಿಲ್ಲ. ಆದರೆ, ಈಗ ನೀವು ಅದ್ಭುತವಾಗಿ ಸಹಕಾರ ನೀಡಿದ್ದೀರಿ. ರಿಲೀಸ್​ಗೆ​ ತೊಂದರೆ ಆದ ವಿಚಾರವನ್ನು ಮಾಧ್ಯಮದವರು ಸವಿವರವಾಗಿ ವಿವರಿಸಿದ್ದಾರೆ. ಅವರಿಗೆ ಧನ್ಯವಾದ’ ಎಂದಿದ್ದಾರೆ ಸೂರಪ್ಪ ಬಾಬು.

ಈ ಬಗ್ಗೆ ಗುರುವಾರ (ಅಕ್ಟೋಬರ್​ 14) ಮಾತನಾಡಿದ್ದ ಸೂರಪ್ಪ ಬಾಬು, ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದಿದ್ದರು.

ಇದನ್ನೂ ಓದಿ:  ‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್