AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ

ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ ಎಂದು ಮಾತು ಆರಂಭಿಸಿದ್ದಾರೆ ಅವರು.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ
ಸೂರಪ್ಪ ಬಾಬು-ಸುದೀಪ್​
TV9 Web
| Edited By: |

Updated on: Oct 15, 2021 | 5:43 PM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ರಿಲೀಸ್​ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಒಂದು ದಿನ ತಡವಾಗಿ ರಿಲೀಸ್ ಆದ ಹೊರತಾಗಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಿನಿಮಾಗೆ ಅಷ್ಟು ಪ್ರಚಾರ ನೀಡಿಲ್ಲ ಎನ್ನುವ ಮಾತಿದೆ. ಈ ವಿಚಾರಕ್ಕೆ ಸಂಬಂಧಿಸಿ ಸೂರಪ್ಪ ಬಾಬು ಉತ್ತರ ನೀಡಿದ್ದಾರೆ.

ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸೂರಪ್ಪ ಬಾಬು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ‘ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ. ಸುದೀಪ್​ ಅವರೂ ಖಡಕ್​ ಉತ್ತರ ನೀಡಿದ್ದಾರೆ. ಸುದೀಪ್​ ಅವರು ನನ್ನ ಬೆಂಬಲಕ್ಕೆ ನಿಲ್ಲುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಕೋಟಿಗೊಬ್ಬ 3 ರಿಲೀಸ್​ ಆಗಿ ಇಡೀ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಿಮರ್ಶೆಯೂ ಅದ್ಭುತವಾಗಿದೆ. ನೀವು ಚಿತ್ರವನ್ನು ಹರಸಿದ್ದೀರಿ’ ಎಂದರು ಅವರು.

‘ನನ್ನ ಕಡೆಯಿಂದಲೂ ತಪ್ಪುಗಳು ಆಗಿವೆ. ಆ ತಪ್ಪುಗಳು ಆಗೋಕೂ ಒಂದಷ್ಟು ಕಾರಣಗಳಿವೆ. ಇದಕ್ಕಾಗಿ ಪಬ್ಲಿಸಿಟಿ ಕೊಡೋಕೆ ಆಗಿಲ್ಲ. ಆ ಮಟ್ಟಕ್ಕೆ ತಲುಪಿಲ್ಲ. ಆದರೆ, ಈಗ ನೀವು ಅದ್ಭುತವಾಗಿ ಸಹಕಾರ ನೀಡಿದ್ದೀರಿ. ರಿಲೀಸ್​ಗೆ​ ತೊಂದರೆ ಆದ ವಿಚಾರವನ್ನು ಮಾಧ್ಯಮದವರು ಸವಿವರವಾಗಿ ವಿವರಿಸಿದ್ದಾರೆ. ಅವರಿಗೆ ಧನ್ಯವಾದ’ ಎಂದಿದ್ದಾರೆ ಸೂರಪ್ಪ ಬಾಬು.

ಈ ಬಗ್ಗೆ ಗುರುವಾರ (ಅಕ್ಟೋಬರ್​ 14) ಮಾತನಾಡಿದ್ದ ಸೂರಪ್ಪ ಬಾಬು, ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದಿದ್ದರು.

ಇದನ್ನೂ ಓದಿ:  ‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!