AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ

ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ ಎಂದು ಮಾತು ಆರಂಭಿಸಿದ್ದಾರೆ ಅವರು.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ
ಸೂರಪ್ಪ ಬಾಬು-ಸುದೀಪ್​
TV9 Web
| Edited By: |

Updated on: Oct 15, 2021 | 5:43 PM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ರಿಲೀಸ್​ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಒಂದು ದಿನ ತಡವಾಗಿ ರಿಲೀಸ್ ಆದ ಹೊರತಾಗಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಿನಿಮಾಗೆ ಅಷ್ಟು ಪ್ರಚಾರ ನೀಡಿಲ್ಲ ಎನ್ನುವ ಮಾತಿದೆ. ಈ ವಿಚಾರಕ್ಕೆ ಸಂಬಂಧಿಸಿ ಸೂರಪ್ಪ ಬಾಬು ಉತ್ತರ ನೀಡಿದ್ದಾರೆ.

ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸೂರಪ್ಪ ಬಾಬು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ‘ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ. ಸುದೀಪ್​ ಅವರೂ ಖಡಕ್​ ಉತ್ತರ ನೀಡಿದ್ದಾರೆ. ಸುದೀಪ್​ ಅವರು ನನ್ನ ಬೆಂಬಲಕ್ಕೆ ನಿಲ್ಲುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಕೋಟಿಗೊಬ್ಬ 3 ರಿಲೀಸ್​ ಆಗಿ ಇಡೀ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಿಮರ್ಶೆಯೂ ಅದ್ಭುತವಾಗಿದೆ. ನೀವು ಚಿತ್ರವನ್ನು ಹರಸಿದ್ದೀರಿ’ ಎಂದರು ಅವರು.

‘ನನ್ನ ಕಡೆಯಿಂದಲೂ ತಪ್ಪುಗಳು ಆಗಿವೆ. ಆ ತಪ್ಪುಗಳು ಆಗೋಕೂ ಒಂದಷ್ಟು ಕಾರಣಗಳಿವೆ. ಇದಕ್ಕಾಗಿ ಪಬ್ಲಿಸಿಟಿ ಕೊಡೋಕೆ ಆಗಿಲ್ಲ. ಆ ಮಟ್ಟಕ್ಕೆ ತಲುಪಿಲ್ಲ. ಆದರೆ, ಈಗ ನೀವು ಅದ್ಭುತವಾಗಿ ಸಹಕಾರ ನೀಡಿದ್ದೀರಿ. ರಿಲೀಸ್​ಗೆ​ ತೊಂದರೆ ಆದ ವಿಚಾರವನ್ನು ಮಾಧ್ಯಮದವರು ಸವಿವರವಾಗಿ ವಿವರಿಸಿದ್ದಾರೆ. ಅವರಿಗೆ ಧನ್ಯವಾದ’ ಎಂದಿದ್ದಾರೆ ಸೂರಪ್ಪ ಬಾಬು.

ಈ ಬಗ್ಗೆ ಗುರುವಾರ (ಅಕ್ಟೋಬರ್​ 14) ಮಾತನಾಡಿದ್ದ ಸೂರಪ್ಪ ಬಾಬು, ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದಿದ್ದರು.

ಇದನ್ನೂ ಓದಿ:  ‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ