AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ

ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ ಎಂದು ಮಾತು ಆರಂಭಿಸಿದ್ದಾರೆ ಅವರು.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ
ಸೂರಪ್ಪ ಬಾಬು-ಸುದೀಪ್​
TV9 Web
| Edited By: |

Updated on: Oct 15, 2021 | 5:43 PM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ರಿಲೀಸ್​ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಒಂದು ದಿನ ತಡವಾಗಿ ರಿಲೀಸ್ ಆದ ಹೊರತಾಗಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಿನಿಮಾಗೆ ಅಷ್ಟು ಪ್ರಚಾರ ನೀಡಿಲ್ಲ ಎನ್ನುವ ಮಾತಿದೆ. ಈ ವಿಚಾರಕ್ಕೆ ಸಂಬಂಧಿಸಿ ಸೂರಪ್ಪ ಬಾಬು ಉತ್ತರ ನೀಡಿದ್ದಾರೆ.

ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸೂರಪ್ಪ ಬಾಬು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ‘ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ. ಸುದೀಪ್​ ಅವರೂ ಖಡಕ್​ ಉತ್ತರ ನೀಡಿದ್ದಾರೆ. ಸುದೀಪ್​ ಅವರು ನನ್ನ ಬೆಂಬಲಕ್ಕೆ ನಿಲ್ಲುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಕೋಟಿಗೊಬ್ಬ 3 ರಿಲೀಸ್​ ಆಗಿ ಇಡೀ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಿಮರ್ಶೆಯೂ ಅದ್ಭುತವಾಗಿದೆ. ನೀವು ಚಿತ್ರವನ್ನು ಹರಸಿದ್ದೀರಿ’ ಎಂದರು ಅವರು.

‘ನನ್ನ ಕಡೆಯಿಂದಲೂ ತಪ್ಪುಗಳು ಆಗಿವೆ. ಆ ತಪ್ಪುಗಳು ಆಗೋಕೂ ಒಂದಷ್ಟು ಕಾರಣಗಳಿವೆ. ಇದಕ್ಕಾಗಿ ಪಬ್ಲಿಸಿಟಿ ಕೊಡೋಕೆ ಆಗಿಲ್ಲ. ಆ ಮಟ್ಟಕ್ಕೆ ತಲುಪಿಲ್ಲ. ಆದರೆ, ಈಗ ನೀವು ಅದ್ಭುತವಾಗಿ ಸಹಕಾರ ನೀಡಿದ್ದೀರಿ. ರಿಲೀಸ್​ಗೆ​ ತೊಂದರೆ ಆದ ವಿಚಾರವನ್ನು ಮಾಧ್ಯಮದವರು ಸವಿವರವಾಗಿ ವಿವರಿಸಿದ್ದಾರೆ. ಅವರಿಗೆ ಧನ್ಯವಾದ’ ಎಂದಿದ್ದಾರೆ ಸೂರಪ್ಪ ಬಾಬು.

ಈ ಬಗ್ಗೆ ಗುರುವಾರ (ಅಕ್ಟೋಬರ್​ 14) ಮಾತನಾಡಿದ್ದ ಸೂರಪ್ಪ ಬಾಬು, ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದಿದ್ದರು.

ಇದನ್ನೂ ಓದಿ:  ‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ