AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ

ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ ಎಂದು ಮಾತು ಆರಂಭಿಸಿದ್ದಾರೆ ಅವರು.

‘ಕೋಟಿಗೊಬ್ಬ 3’ ಪಬ್ಲಿಸಿಟಿ ಮಾಡದಿರುವ ಬಗ್ಗೆ ಸೂರಪ್ಪ ಬಾಬು ಪ್ರತಿಕ್ರಿಯೆ
ಸೂರಪ್ಪ ಬಾಬು-ಸುದೀಪ್​
TV9 Web
| Edited By: |

Updated on: Oct 15, 2021 | 5:43 PM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ರಿಲೀಸ್​ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಒಂದು ದಿನ ತಡವಾಗಿ ರಿಲೀಸ್ ಆದ ಹೊರತಾಗಿಯೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಿನಿಮಾಗೆ ಅಷ್ಟು ಪ್ರಚಾರ ನೀಡಿಲ್ಲ ಎನ್ನುವ ಮಾತಿದೆ. ಈ ವಿಚಾರಕ್ಕೆ ಸಂಬಂಧಿಸಿ ಸೂರಪ್ಪ ಬಾಬು ಉತ್ತರ ನೀಡಿದ್ದಾರೆ.

ಸಿನಿಮಾ ರಿಲೀಸ್​ ಆದ ಬೆನ್ನಲ್ಲೇ ಸೂರಪ್ಪ ಬಾಬು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ‘ಎಲ್ಲಾ ನನ್ನ ಕಿಚ್ಚನ ಅಭಿಮಾನಿಗಳಿಗೆ ಥ್ಯಾಂಕ್ಸ್​. ನಾಲ್ಕು ದಿನಗಳಲ್ಲಿ ನಡೆದ ಘಟನೆಯನ್ನು ನಾನು ವಿಡಿಯೋ ಮೂಲಕ ತಿಳಿಸಿದ್ದೇನೆ. ಸುದೀಪ್​ ಅವರೂ ಖಡಕ್​ ಉತ್ತರ ನೀಡಿದ್ದಾರೆ. ಸುದೀಪ್​ ಅವರು ನನ್ನ ಬೆಂಬಲಕ್ಕೆ ನಿಲ್ಲುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಕೋಟಿಗೊಬ್ಬ 3 ರಿಲೀಸ್​ ಆಗಿ ಇಡೀ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ವಿಮರ್ಶೆಯೂ ಅದ್ಭುತವಾಗಿದೆ. ನೀವು ಚಿತ್ರವನ್ನು ಹರಸಿದ್ದೀರಿ’ ಎಂದರು ಅವರು.

‘ನನ್ನ ಕಡೆಯಿಂದಲೂ ತಪ್ಪುಗಳು ಆಗಿವೆ. ಆ ತಪ್ಪುಗಳು ಆಗೋಕೂ ಒಂದಷ್ಟು ಕಾರಣಗಳಿವೆ. ಇದಕ್ಕಾಗಿ ಪಬ್ಲಿಸಿಟಿ ಕೊಡೋಕೆ ಆಗಿಲ್ಲ. ಆ ಮಟ್ಟಕ್ಕೆ ತಲುಪಿಲ್ಲ. ಆದರೆ, ಈಗ ನೀವು ಅದ್ಭುತವಾಗಿ ಸಹಕಾರ ನೀಡಿದ್ದೀರಿ. ರಿಲೀಸ್​ಗೆ​ ತೊಂದರೆ ಆದ ವಿಚಾರವನ್ನು ಮಾಧ್ಯಮದವರು ಸವಿವರವಾಗಿ ವಿವರಿಸಿದ್ದಾರೆ. ಅವರಿಗೆ ಧನ್ಯವಾದ’ ಎಂದಿದ್ದಾರೆ ಸೂರಪ್ಪ ಬಾಬು.

ಈ ಬಗ್ಗೆ ಗುರುವಾರ (ಅಕ್ಟೋಬರ್​ 14) ಮಾತನಾಡಿದ್ದ ಸೂರಪ್ಪ ಬಾಬು, ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದಿದ್ದರು.

ಇದನ್ನೂ ಓದಿ:  ‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ