AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಮತ್ತು ನನ್ನ ನಡುವೆ ಯಾವುದೇ ವೈರತ್ವ ಇಲ್ಲ: ನಿರ್ಮಾಪಕ ಉಮಾಪತಿ ಸ್ಪಷ್ಟನೆ

Darshan and Umapthy Srinivas Gowda: ನಟ ದರ್ಶನ್ ಅವರ ವಿವಾದಕ್ಕೆ ಸಂಬಂಧಪಟ್ಟಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಅವರು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.

ದರ್ಶನ್​ ಮತ್ತು ನನ್ನ ನಡುವೆ ಯಾವುದೇ ವೈರತ್ವ ಇಲ್ಲ: ನಿರ್ಮಾಪಕ ಉಮಾಪತಿ ಸ್ಪಷ್ಟನೆ
ನಿರ್ಮಾಪಕ ಉಮಾಪತಿ (ಫೈಲ್ ಚಿತ್ರ)
TV9 Web
| Edited By: |

Updated on: Jul 17, 2021 | 12:08 PM

Share

ಬೆಂಗಳೂರು: ನಟ ದರ್ಶನ್​ ಮತ್ತು ನನ್ನ ನಡುವೆ ಯಾವುದೇ ವೈರತ್ವ ಇಲ್ಲ. ಅವರು ನನ್ನನ್ನು ನಮ್ಮ ನಿರ್ಮಾಪಕ ಎಂದು ಕರೆದಿದ್ದಾರೆ. ನಾನು ಅವರನ್ನು ಅಣ್ಣ ಎಂದು ಹೇಳಿದ್ದೇನೆ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಆರೋಪಗಳು ಎದುರಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು ನನ್ನ ತೇಜೋವಧೆ ಮಾಡಿಯಾಗಿದೆ. ಇನ್ನೇನೂ ಉಳಿದಿಲ್ಲ. ಆದರೆ ಈ ವಿಚಾರಗಳಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ದರಿಂದಲೇ ನ್ಯಾಯಾಲಯದಿಂದ ಸ್ಟೇ ತರದೇ ಎಲ್ಲವನ್ನೂ ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನನ್ನ ವಿರುದ್ಧ ಆರೋಪ ಮಾಡುವವರೇನು ಸಾಚಾಗಳಲ್ಲ ಎಂದಿರುವ ಉಮಾಪತಿ, ನಾನು ಈ ಘಟನೆಗಳಿಂದ ಪಾಠ ಕಲಿತುಕೊಂಡೆ ಎಂದಿದ್ದಾರೆ. ದುಡ್ಡು ನೀಡಿ ಕೆಲಸ ಮಾಡಿಕೊಂಡ ನಂತರ ಅಲ್ಲಿಗೇ ಬಿಡಬೇಕು. ಮತ್ತೊಬ್ಬರನ್ನು ಉದ್ಧಾರ ಮಾಡಲು ಹೋದರೆ ಇಂತಹ ಪರಿಸ್ಥಿತಿಗಳು ಎದುರಾಗುತ್ತವೆ ಎಂದು ಅವರು ಹೇಳಿದ್ದಾರೆ. ನನಗೆ ನಿರ್ದೇಶಕ ಇಂದ್ರಜಿತ್​ ಲಂಕೇಶ್ ಸಹಾಯ ಬೇಕಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ಒಬ್ಬನೇ ಎದುರಿಸುತ್ತೇನೆ ಎಂದು ಅವರು ಈ ವೇಳೆ ಸ್ಪಷ್ಟಪಡಿಸಿದ್ದಾರೆ.

ಅರುಣಾ ಕುಮಾರಿ ಲೋನ್ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಒಂದು ಘಟನೆಯನ್ನು ಉದಾಹರಿಸಿದ್ದಾರೆ. ‘ಮದಗಜ’ ಸಿನಿಮಾ ತಂಡಕ್ಕೆ ನಟ ದರ್ಶನ್​ರಿಂದ​ ಪಾರ್ಟಿ ನೀಡಲಾಗಿತ್ತು. ಪಾರ್ಟಿಗೆ ನಿರ್ಮಾಪಕರು ಬರುತ್ತಾರೆ ಕಾರು ಬಿಡಿ ಎಂದಿದ್ದರು. ಆದರೆ, ನಾನು ಹೋದ ಸಂದರ್ಭದಲ್ಲಿ ನನ್ನ ಕಾರನ್ನು ತಡೆದಿದ್ದರು. ಅನಂತರ ನಟ ದರ್ಶನ್​ ಅವರಿ​​ಗೆ ನಾನು ಕರೆ ಮಾಡಿದ್ದೆ. ಆಗ ದರ್ಶನ್​ ಅವರು ಯಾರೋ ಒಬ್ಬರನ್ನು ಕಳಿಸಿದ್ದರು. ಆನಂತರವೇ ನನ್ನನ್ನು ಪಬ್​ ಒಳಗೆ ಬಿಟ್ಟಿದ್ದರು. ಆದರೆ ಲಾಕ್​ಡೌನ್ ವೇಳೆ ಅರುಣಾ ಕುಮಾರಿಗೆ ಪ್ರವೇಶ ಹೇಗೆ ನೀಡಲಾಗಿತ್ತು ಎಂಬುದನ್ನು ಅವರು ಪ್ರಶ್ನಿಸಿದ್ದಾರೆ.

ನಿರ್ಮಾಪಕ ಉಮಾಪತಿಯವರು ಮಾತನಾಡಿರುವ ವಿಡಿಯೊ:

ಇದನ್ನೂ ನೋಡಿ: ದರ್ಶನ್ ಗಲಾಟೆ: ಸಂದೇಶ್ ಹೋಟೆಲ್​ನ ಸೆಕ್ಯುರಿಟಿ ಗಾರ್ಡ್ ತೆರೆದಿಟ್ಟರು ಸ್ಫೋಟಕ ವಿಚಾರ!

ಇದನ್ನೂ ನೋಡಿ: ದರ್ಶನ್ ಹಲ್ಲೆ ಆರೋಪ; ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡದ ಸಂದೇಶ್, ಹರ್ಷಾ ಮೆಲಂಟಾ ಹೇಳಿದ್ದೇನು?

(Producer Umpathy Srinivasa Gowda clarifies his views on actor Darshan incident)

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ