AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’
TV9 Web
| Edited By: |

Updated on: Aug 30, 2021 | 5:16 PM

Share

2020ರ ಆರಂಭದಲ್ಲಿ ತೆರೆಕಂಡಿದ್ದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದ ನಂತರ ನಟ ಪೃಥ್ವಿ ಅಂಬರ್​ಗೆ ಸಿನಿಮಾ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ‘ಹ್ಯಾಪಿಲಿ ಮ್ಯಾರೀಡ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ನಟನೆಯ ‘ಲೈಫ್​ ಈಸ್​ ಬ್ಯೂಟಿಫುಲ್​’ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿರುವ ನಿರ್ದೇಶಕರೇ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಈ ಚಿತ್ರಕ್ಕೆ ಮಾನ್ವಿತಾ ಕಾಮತ್​ ನಾಯಕಿ. ಇಂದು (ಆಗಸ್ಟ್​ 30) ಚಿತ್ರದ ಪೋಸ್ಟರ್​ ಜತೆ ಟೈಟಲ್​ ಲಾಂಚ್​ ಆಗಿದೆ.

ಫಸ್ಟ್​ ಪೋಸ್ಟರ್​ನಲ್ಲಿ ಪೃಥ್ವಿ ಅಂಬರ್ ಹಾಗೂ ಮಾನ್ವಿತಾ ಕಾಮತ್​ ಮದುವೆ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ  ‘ಹ್ಯಾಪಿಲಿ ಮ್ಯಾರೀಡ್’ ಎಂದು ಬೋರ್ಡ್​ ಹಿಡಿದುಕೊಂಡಿದ್ದಾರೆ. ಬೋರ್ಡ್​ಗೆ ರಕ್ತ ಬಡಿದ ಚಾಕು ಇದೆ. ಪೃಥ್ವಿ ಮತ್ತು ಮಾನ್ವಿತಾ ನಗುಮುಖದಲ್ಲಿದ್ದಾರೆ.

ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ದಿಯಾ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ  ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದು ಚಿತ್ರರಂಗದಲ್ಲಿ ಪೃಥ್ವಿ ಅಂಬರ್​ ಮೈಲೇಜ್​ ಕೊಟ್ಟಿತ್ತು.  ಸದ್ಯ, ಪೃಥ್ವಿ ಅಂಬರ್ ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’, ‘ಬೈರಾಗಿ’ ಚಿತ್ರದ ಕೆಲಸದಲ್ಲಿ ಪೃಥ್ವಿ ಬ್ಯುಸಿಯಾಗಿದ್ದಾರೆ. ‘ದಿಯಾ’ ಹಿಂದಿ ರಿಮೇಕ್​ನಲ್ಲೂ ಅವರು ಹೀರೋ. ತಮಿಳು ಚಿತ್ರದಲ್ಲೂ ಪೃಥ್ವಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?