AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’
TV9 Web
| Edited By: |

Updated on: Aug 30, 2021 | 5:16 PM

Share

2020ರ ಆರಂಭದಲ್ಲಿ ತೆರೆಕಂಡಿದ್ದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದ ನಂತರ ನಟ ಪೃಥ್ವಿ ಅಂಬರ್​ಗೆ ಸಿನಿಮಾ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ‘ಹ್ಯಾಪಿಲಿ ಮ್ಯಾರೀಡ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ನಟನೆಯ ‘ಲೈಫ್​ ಈಸ್​ ಬ್ಯೂಟಿಫುಲ್​’ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿರುವ ನಿರ್ದೇಶಕರೇ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಈ ಚಿತ್ರಕ್ಕೆ ಮಾನ್ವಿತಾ ಕಾಮತ್​ ನಾಯಕಿ. ಇಂದು (ಆಗಸ್ಟ್​ 30) ಚಿತ್ರದ ಪೋಸ್ಟರ್​ ಜತೆ ಟೈಟಲ್​ ಲಾಂಚ್​ ಆಗಿದೆ.

ಫಸ್ಟ್​ ಪೋಸ್ಟರ್​ನಲ್ಲಿ ಪೃಥ್ವಿ ಅಂಬರ್ ಹಾಗೂ ಮಾನ್ವಿತಾ ಕಾಮತ್​ ಮದುವೆ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ  ‘ಹ್ಯಾಪಿಲಿ ಮ್ಯಾರೀಡ್’ ಎಂದು ಬೋರ್ಡ್​ ಹಿಡಿದುಕೊಂಡಿದ್ದಾರೆ. ಬೋರ್ಡ್​ಗೆ ರಕ್ತ ಬಡಿದ ಚಾಕು ಇದೆ. ಪೃಥ್ವಿ ಮತ್ತು ಮಾನ್ವಿತಾ ನಗುಮುಖದಲ್ಲಿದ್ದಾರೆ.

ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ದಿಯಾ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ  ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದು ಚಿತ್ರರಂಗದಲ್ಲಿ ಪೃಥ್ವಿ ಅಂಬರ್​ ಮೈಲೇಜ್​ ಕೊಟ್ಟಿತ್ತು.  ಸದ್ಯ, ಪೃಥ್ವಿ ಅಂಬರ್ ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’, ‘ಬೈರಾಗಿ’ ಚಿತ್ರದ ಕೆಲಸದಲ್ಲಿ ಪೃಥ್ವಿ ಬ್ಯುಸಿಯಾಗಿದ್ದಾರೆ. ‘ದಿಯಾ’ ಹಿಂದಿ ರಿಮೇಕ್​ನಲ್ಲೂ ಅವರು ಹೀರೋ. ತಮಿಳು ಚಿತ್ರದಲ್ಲೂ ಪೃಥ್ವಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ