AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’
TV9 Web
| Edited By: |

Updated on: Aug 30, 2021 | 5:16 PM

Share

2020ರ ಆರಂಭದಲ್ಲಿ ತೆರೆಕಂಡಿದ್ದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದ ನಂತರ ನಟ ಪೃಥ್ವಿ ಅಂಬರ್​ಗೆ ಸಿನಿಮಾ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ‘ಹ್ಯಾಪಿಲಿ ಮ್ಯಾರೀಡ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ನಟನೆಯ ‘ಲೈಫ್​ ಈಸ್​ ಬ್ಯೂಟಿಫುಲ್​’ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿರುವ ನಿರ್ದೇಶಕರೇ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಈ ಚಿತ್ರಕ್ಕೆ ಮಾನ್ವಿತಾ ಕಾಮತ್​ ನಾಯಕಿ. ಇಂದು (ಆಗಸ್ಟ್​ 30) ಚಿತ್ರದ ಪೋಸ್ಟರ್​ ಜತೆ ಟೈಟಲ್​ ಲಾಂಚ್​ ಆಗಿದೆ.

ಫಸ್ಟ್​ ಪೋಸ್ಟರ್​ನಲ್ಲಿ ಪೃಥ್ವಿ ಅಂಬರ್ ಹಾಗೂ ಮಾನ್ವಿತಾ ಕಾಮತ್​ ಮದುವೆ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ  ‘ಹ್ಯಾಪಿಲಿ ಮ್ಯಾರೀಡ್’ ಎಂದು ಬೋರ್ಡ್​ ಹಿಡಿದುಕೊಂಡಿದ್ದಾರೆ. ಬೋರ್ಡ್​ಗೆ ರಕ್ತ ಬಡಿದ ಚಾಕು ಇದೆ. ಪೃಥ್ವಿ ಮತ್ತು ಮಾನ್ವಿತಾ ನಗುಮುಖದಲ್ಲಿದ್ದಾರೆ.

ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ದಿಯಾ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ  ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದು ಚಿತ್ರರಂಗದಲ್ಲಿ ಪೃಥ್ವಿ ಅಂಬರ್​ ಮೈಲೇಜ್​ ಕೊಟ್ಟಿತ್ತು.  ಸದ್ಯ, ಪೃಥ್ವಿ ಅಂಬರ್ ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’, ‘ಬೈರಾಗಿ’ ಚಿತ್ರದ ಕೆಲಸದಲ್ಲಿ ಪೃಥ್ವಿ ಬ್ಯುಸಿಯಾಗಿದ್ದಾರೆ. ‘ದಿಯಾ’ ಹಿಂದಿ ರಿಮೇಕ್​ನಲ್ಲೂ ಅವರು ಹೀರೋ. ತಮಿಳು ಚಿತ್ರದಲ್ಲೂ ಪೃಥ್ವಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?