AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ದಿನಗಳ ಸಂಭ್ರಮದಲ್ಲಿ ಉತ್ತರ ಕರ್ನಾಟಕದ ‘ಉಡಾಳ’ ಸಿನಿಮಾ

ಪೃಥ್ವಿ ಶಾಮನೂರು, ಹೃತಿಕಾ ಶ್ರೀನಿವಾಸ್ ನಟನೆಯ ‘ಉಡಾಳ’ ಸಿನಿಮಾ ನವೆಂಬರ್ 14ರಂದು ಬಿಡುಗಡೆ ಆಗಿತ್ತು. ಬಹುತೇಕ ಉತ್ತರ ಕರ್ನಾಟಕದ ಕಲಾವಿದರು ಹಾಗೂ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡಿರುವುದು ವಿಶೇಷ. ರವಿ ಶಾಮನೂರು ಮತ್ತು ಯೋಗರಾಜ್ ಭಟ್ ನಿರ್ಮಾಣದ ಈ ಚಿತ್ರ 25 ದಿನಗಳನ್ನು ಪೂರೈಸಿದ್ದು, ತಂಡಕ್ಕೆ ಖುಷಿಯಾಗಿದೆ.

25 ದಿನಗಳ ಸಂಭ್ರಮದಲ್ಲಿ ಉತ್ತರ ಕರ್ನಾಟಕದ ‘ಉಡಾಳ’ ಸಿನಿಮಾ
Hrithika Srinivas, Pruthvi Shamanur
ಮದನ್​ ಕುಮಾರ್​
|

Updated on: Dec 09, 2025 | 4:26 PM

Share

ಉತ್ತರ ಕರ್ನಾಟಕದ ಭಾರಿ ದೊಡ್ಡ ಪಿಚ್ಚರ್ ಎಂದ ಟ್ಯಾಗ್ ಲೈನ್ ಮೂಲಕ ಹೊರಬಂದ ಅಪ್ಪಟ ಉತ್ತರ ಕರ್ನಾಟಕದ ಶೈಲಿಯ ‘ಉಡಾಳ’ ಸಿನಿಮಾ (Udaala Kannada Movie) ಈಗ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ. ಈ ಮೊದಲು ‘ಪದವಿ ಪೂರ್ವ’ ಸಿನಿಮಾವನ್ನು ನಿರ್ಮಿಸಿ ಗೆಲುವ ಕಂಡಿದ್ದ ದಾವಣಗೆರೆ ಮೂಲದ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ (Yogaraj Bhat) ಅವರು ಈಗ ‘ಉಡಾಳ’ ಸಿನಿಮಾವನ್ನು ನಿರ್ಮಿಸಿ ಮತ್ತೊಮ್ಮೆ ಯಶಸ್ವಿ ಕಂಡಿದ್ದಾರೆ. 25 ದಿನಗಳನ್ನು ಪೂರೈಸಿರುವುದು ಚಿತ್ರತಂಡಕ್ಕೆ ಖುಷಿ ತಂದಿದೆ.

‘ಉಡಾಳ’ ಸಿನಿಮಾದಲ್ಲಿ ನಾಯಕನಾಗಿ ಪೃಥ್ವಿ ಶಾಮನೂರು ಅವರು ಅಭಿನಯಿಸಿದ್ದಾರೆ. ತಮ್ಮ ನಟನೆ, ನೃತ್ಯ, ಆ್ಯಕ್ಷನ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು ಚಿತ್ರರಂಗದ ಭರವಸೆಯ ನಟನಾಗಿ ಹೊರಹೊಮ್ಮಿದ್ದಾರೆ. ‘ಯಡಾಳ’ ಸಿನಿಮಾದ ಯಶಸ್ಸಿನಿಂದಾಗಿ ಅವರಿಗೆ ಹೊಸ ಅವಕಾಶಗಳು ಸಿಗುತ್ತಿವೆ. ಮುಂದಿನ ಸಿನಿಮಾಗಳ ಕಥೆಗಳ ಆಯ್ಕೆಯಲ್ಲಿ ಪೃಥ್ವಿ ಶಾಮನೂರು ಅವರು ತೊಡಗಿಕೊಂಡಿದ್ದಾರೆ.

ಈ ಸಿನಿಮಾಗೆ ಅಮೋಲ್ ಪಾಟೀಲ್ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ಚಿತ್ರದಲ್ಲೇ ಅವರು ಯಶಸ್ಸು ಕಂಡಿದ್ದಾರೆ. ಅವರ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಸಿಕ್ಕಿದೆ. ಪ್ರೇಕ್ಷಕರು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಆ ಮೂಲಕ ಅವರು ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ.

‘ಉಡಾಳ’ ಸಿನಿಮಾಗೆ ಚೇತನ್ ಸೊಸ್ಕ ಅವರು ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಮಧು ತುಂಬಕೆರೆ ಅವರು ಸಂಕಲನ ಮಾಡಿದ್ದಾರೆ. ಶಿವಕುಮಾರ್ ನೂರಂಬಡ ಅವರ ಛಾಯಾಗ್ರಹಣ, ಭಜರಂಗಿ ಮೋಹನ್ ಮತ್ತು ರಘು ಅವರ ನೃತ್ಯ ಸಂಯೋಜನೆ ಈ ಸಿನಿಮಾಗಿದೆ. ವಿನೋದ್ ಮತ್ತು ಅರ್ಜುನ್ ಅವರು ಸಾಹನ ನಿರ್ದೇಶನ ಮಾಡಿದ್ದಾರೆ. ಮಾಳು ನಿಪ್ಪನಾಳ, ಬಾಳು ಬೆಳಗುಂದಿ, ಜೆಸ್ಕರಣ್ ಸಿಂಗ್, ಚೇತನ್ ಸೊಸ್ಕ, ಸೃಷ್ಟಿ ಶಾಮನೂರು ಅವರು ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ನಿರ್ದೇಶಕ ಯೋಗರಾಜ್ ಭಟ್ ಜತೆ ಭುವನ್ ಪೊನ್ನಣ್ಣ ಹೊಸ ಸಿನಿಮಾ ‘ಹಲೋ 123’

ಬಹುಪಾಲು ಉತ್ತರ ಕರ್ನಾಟಕದ ಕಲಾವಿದರು ಹಾಗೂ ತಂತ್ರಜ್ಞರು ‘ಉಡಾಳ’ ಸಿನಿಮಾಗೆ ಕೆಲಸ ಮಾಡಿದ್ದು ವಿಶೇಷ. ಅಮೋಲ್ ಪಾಟೀಲ್ ಹಾಗೂ ವೀರೇಶ್ ಪಿಎಂ ಅವರು ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಸಿನಿಮಾಗೆ ನಾಯಕಿಯಾಗಿ ಹೃತಿಕಾ ಶ್ರೀನಿವಾಸ್ ಅಭಿನಯಿಸಿದ್ದಾರೆ. ಬಿರಾದರ್, ಬಲರಾಜ್ ವಾಡಿ, ಹರೀಶ್ ಹಿರಿಯೂರ್, ವಾದಿರಾಜ್, ಸುಮಿತ್, ದಾನಪ್ಪ , ಪ್ರವೀಣ್ ಕುಮಾರ್ ಗಸ್ತಿ, ದಯಾನಂದ್ ಬೀಳಗಿ, ಮಾಳು ನಿಪ್ಪನಾಳ, ಗೋವಿಂದೇಗೌಡ ಮುಂತಾದ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್
ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್
ಗಿಲ್ಲಿ ಬಗ್ಗೆ ಮನೆಮಂದಿಗೆ ಇರುವ ಅಭಿಪ್ರಾಯ ಬದಲಿಸಲು ಯತ್ನಿಸಿದ ರಜತ್