AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಖೆ ವೇಳೆ ಪವಿತ್ರಾಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟಿದ್ದ ಪೊಲೀಸರಿಗೆ ಈಗ ಸಂಕಷ್ಟ

ಪವಿತ್ರಾ ಗೌಡ ಮನೆಯನ್ನು ಜೂನ್ 15ರಂದು ಮಹಜರು ಮಾಡಲಾಗಿತ್ತು. ಈ ವೇಳೆ ಪವಿತ್ರಾ ಗೌಡ ಕೂಡ ಅಲ್ಲಿಯೇ ಇದ್ದರು. ಪವಿತ್ರಾಗೆ ಲಿಪ್ಸ್​​ಟಿಕ್ ಹಚ್ಚಲು ಪಿಎಸ್ಐ ಅವಕಾಶ ಕೊಟ್ಟಿದ್ದರು. ಕರ್ತವ್ಯ ಲೋಪ ಹಿನ್ನಲೆಯಲ್ಲಿ ವಿಜಯನಗರದ ಮಹಿಳಾ ಪಿಎಸ್ಐಗೆ ನೋಟಿಸ್ ನೀಡಲಾಗಿದೆ. ಸದ್ಯ ಈ ಬಗ್ಗೆ ಚರ್ಚೆ ಆಗುತ್ತಿದೆ.

ತನಿಖೆ ವೇಳೆ ಪವಿತ್ರಾಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟಿದ್ದ ಪೊಲೀಸರಿಗೆ ಈಗ ಸಂಕಷ್ಟ
ಪವಿತ್ರಾ ಗೌಡ
ರಾಜೇಶ್ ದುಗ್ಗುಮನೆ
|

Updated on: Jun 26, 2024 | 10:48 AM

Share

ನಟಿ, ದರ್ಶನ್ (Darshan) ಆಪ್ತೆ ಪವಿತ್ರಾ ಗೌಡ ಅವರು ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಅವರಿದ್ದಾರೆ. ತಮಗೆ ಕಿರುಕುಳ ನೀಡಿದ ರೇಣುಕಾ ಸ್ವಾಮಿಯನ್ನು ದರ್ಶನ್ ಜೊತೆ ಸೇರಿ ಪವಿತ್ರಾ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಹೀಗಿರುವಾಗಲೇ ಪವಿತ್ರಾಗೆ ಮೇಕಪ್ ಮಾಡಲು ಅವಕಾಶ ನೀಡಿದ ಪಿಎಸ್​ಐಗೆ ಸಂಕಷ್ಟ ಎದುರಾಗಿದೆ.

ಜೂನ್ 15ರಂದು ಪವಿತ್ರಾ ಗೌಡ ಮನೆ ಮಹಜರು ಮಾಡಲಾಗಿತ್ತು. ಈ ವೇಳೆ ಪವಿತ್ರಾ ಗೌಡ ಕೂಡ ಇದ್ದರು. ಪವಿತ್ರಾಗೆ ಲಿಪ್ಸ್​​ಟಿಕ್ ಹಚ್ಚಲು ಪಿಎಸ್ಐ ಅವಕಾಶ ಕೊಟ್ಟಿದ್ದರು. ಕರ್ತವ್ಯ ಲೋಪ ಹಿನ್ನಲೆಯಲ್ಲಿ ವಿಜಯನಗರದ ಮಹಿಳಾ ಪಿಎಸ್ಐಗೆ ನೋಟಿಸ್ ನೀಡಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಂದ ನೋಟಿಸ್ ನೀಡಲಾಗಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು

ಪವಿತ್ರಾ ಅವರು ಜೈಲಿನಲ್ಲಿ ಸಾಕಷ್ಟು ಅಸಮಾಧಾನಗೊಂಡಿದ್ದಾರೆ. ಜೈಲಿನ ಊಟ ಅವರಿಗೆ ಇಷ್ಟ ಆಗಿರಲಿಲ್ಲ. ಈ ಕಾರಣಕ್ಕೆ ಸಾಕಷ್ಟು ಬೇಸರ ಮಾಡಿಕೊಂಡಿದ್ದರು. ಕುಟುಂಬದವರು ಯಾರೂ ನೋಡಲು ಬರುತ್ತಿಲ್ಲ ಎನ್ನುವ ಟೆನ್ಷನ್ ಅವರಿಗೆ ಇತ್ತು. ಅವರ ಮಗಳು ಇತ್ತೀಚೆಗೆ ಬಂದು ಪವಿತ್ರಾನ ನೋಡಿ ಹೋಗಿದ್ದಾರೆ.

ದರ್ಶನ್ ಗನ್ ವಶಕ್ಕೆ

ನಟ ದರ್ಶನ್​​, ಪ್ರದೋಶ್ ಲೈಸೆನ್ಸ್​​ ಪಿಸ್ತೂಲ್​ ವಶಕ್ಕೆ ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆ ವೇಳೆ ಲೈಸೆನ್ಸ್ ಪಡೆದು, ಶಸ್ತ್ರಾಸ್ತ್ರ ಒಪ್ಪಿಸಬೇಕಿತ್ತು. ಆದರೆ ನಟ ದರ್ಶನ್​, ಪ್ರದೋಶ್​ ಪಿಸ್ತೂಲ್​ ವಾಪಸ್ ಮಾಡದೇ ವಿನಾಯ್ತಿ ನೀಡಲಾಗಿತ್ತು. ಈಗ ರೇಣುಕಾ ಸ್ವಾಮಿ ಕೊಲೆ ಕೇಸ್ ವಿಚಾರಣೆ ಹಿನ್ನೆಲೆಯಲ್ಲಿ ಇವರ ಗನ್ ವಶಕ್ಕೆ ಸೂಚನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು