AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Song: ಭಾರಿ ಬೇಸರದಲ್ಲಿ ಪುನೀತ್​ ರಾಜ್​ಕುಮಾರ್ ಫ್ಯಾನ್ಸ್; ಯುವರತ್ನ ಹಾಡು ಡಿಲೀಟ್ ಮಾಡುವಂತೆ ಅಭಿಮಾನಿಗಳ ಮೊರೆ

Puneet Rajkumar: ಬಹುನಿರೀಕ್ಷಿತ ಯುವರತ್ನ ಚಿತ್ರದ ಊರಿಗೊಬ್ಬ ರಾಜಾ ಆ ರಾಜಂಗೊಬ್ಬಳು ರಾಣಿ ಹಾಡು ಹೊಂಬಾಳೆ ಫಿಲ್ಮ್ಸ್​ನ ಯೂಟ್ಯೂಬ್ ಚಾನೆಲ್ ಬಿಡುಗಡೆ ಮಾಡಿತ್ತು. ಹಾಡಿನಲ್ಲಿ ಪುನೀತ್ ರಾಜ್​ಕುಮಾರ್​ ಜೊತೆಗೆ ಚಿತ್ರ ನಾಯಕಿ ಸಹೇಷಾ ಸೆಹಗಲ್ ಸ್ಟೆಪ್ ಹಾಕಿದ್ದಾರೆ.

Yuvarathnaa Song: ಭಾರಿ ಬೇಸರದಲ್ಲಿ ಪುನೀತ್​ ರಾಜ್​ಕುಮಾರ್ ಫ್ಯಾನ್ಸ್; ಯುವರತ್ನ ಹಾಡು ಡಿಲೀಟ್ ಮಾಡುವಂತೆ ಅಭಿಮಾನಿಗಳ ಮೊರೆ
ಊರಿಗೊಬ್ಬ ರಾಜಾ..ಹಾಡಿನ ದೃಶ್ಯ
sandhya thejappa
sandhya thejappa| Edited By: |

Updated on:Feb 27, 2021 | 12:25 PM

Share

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​ (Puneet Rajkumar) ನಟನೆಯ ಯುವರತ್ನ (Yuvarathnaa) ಸಿನಿಮಾದ ‘ಊರಿಗೊಬ್ಬ ರಾಜಾ ಆ ರಾಜಂಗೊಬ್ಬಳು ರಾಣಿ’ ಎನ್ನವ ಹಾಡು ಇದೇ ತಿಂಗಳ (ಫೆಬ್ರವರಿ) 25ಕ್ಕೆ ಬಿಡುಗಡೆಯಾಗಿತ್ತು. ಆದರೆ ಈ ಹಾಡಿಗೆ ಅಪ್ಪು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಪವರ್ ಸ್ಟಾರ್ ರೇಂಜಿಗೆ ಈ ಸಾಂಗ್ ಅಲ್ಲ ಎಂದು ಹೇಳುತ್ತಿರುವ ಪುನೀತ್ ಫ್ಯಾನ್ಸ್ ತಮನ್.ಎಸ್ ಸಂಗೀತ ಮತ್ತು ಸಂತೋಷ್ ಆನಂದ್ ರಾಮ್ ಸಾಹಿತ್ಯದಿಂದ ನಿರಾಸೆಗೊಂಡಿದ್ದಾರೆ.

ಬಹುನಿರೀಕ್ಷಿತ ಯುವರತ್ನ ಚಿತ್ರದ ಊರಿಗೊಬ್ಬ ರಾಜಾ ಆ ರಾಜಂಗೊಬ್ಬಳು ರಾಣಿ ಹಾಡು ಹೊಂಬಾಳೆ ಫಿಲ್ಮ್ಸ್​ನ ಯೂಟ್ಯೂಬ್ ಚಾನೆಲ್ ಬಿಡುಗಡೆ ಮಾಡಿತ್ತು. ಹಾಡಿನಲ್ಲಿ ಪುನೀತ್ ರಾಜ್​ಕುಮಾರ್​ ಜೊತೆಗೆ ಚಿತ್ರ ನಾಯಕಿ ಸಹೇಷಾ ಸೆಹಗಲ್ ಸ್ಟೆಪ್ಸ್​ ಹಾಕಿದ್ದಾರೆ. ಹಾಡಿನಲ್ಲಿ ಪುನೀತ್ ರಾಜ್​ಕುಮಾರ್​ ಡಾನ್ಸ್ ಬಿಟ್ಟರೆ ಮತ್ತೇನೂ ಸಮಂಜಸವಾಗಿಲ್ಲ ಎಂದು ಹೇಳುತ್ತಿರುವ ಸಿನಿಪ್ರಿಯರು ಹಾಡನ್ನು ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿರುವ ಅಪ್ಪು ಅಭಿಮಾನಿಗಳು ಈ ಊರಿಗೊಬ್ಬ ರಾಜಾ ಆ ರಾಜಂಗೊಬ್ಬಳು ರಾಣಿ ಹಾಡು ಪವರ್ ಸ್ಟಾರ್ ರೇಂಜಿಗೆ ಅಲ್ಲ ಎನ್ನುತ್ತಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಹೆಚ್ಚು ವ್ಯೂಸ್​ ಪಡೆದುಕೊಂಡಿದ್ದರೂ ಈ ಹಾಡಿಗೆ ಅದೆಷ್ಟೋ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿ ಸಾಂಗನ್ನ ಡಿಲೀಟ್ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು

ಹಾಡನ್ನು ಡಿಲೀಟ್​ ಮಾಡಿ ಎಂದು ಆಗ್ರಹಿಸುತ್ತಿರುವ ಅಪ್ಪು ಫ್ಯಾನ್ಸ್​

ಹಾಯ್​ ಪುನೀತ್​ ಸರ್​. ಏನಿದು ಮ್ಯೂಸಿಕ್​ ಸರ್​? ನಿಮ್ಮ ರೇಂಜಿಗೆ ಈ ಹಾಡು ಇಲ್ಲ. ಹಾಡು ಸ್ವಲ್ಪನೂ ಸರಿಯಿಲ್ಲ. ನಿಮ್ಮ ಮತ್ತು ಸಹೇಷಾ ಸೆಹಗಲ್ ಡ್ಯಾನ್ಸ್ ಬಿಟ್ಟರೆ ಮತ್ತೇನೂ ಇಷ್ಟವಾಗಲಿಲ್ಲ. ದಯವಿಟ್ಟು ಕನ್ನಡದ ಮ್ಯೂಸಿಕ್​ ಡೈರೆಕ್ಟರ್​ಗೆ ಚಾನ್ಸ್ ಕೊಡಿ. ಕನ್ನಡದ ಬಗ್ಗೆಗಂಧ ಗಾಳಿಯೂ ಗೊತ್ತಿಲ್ಲದವರಿಗೆ ಅವಕಾಶಗಳು ಕೊಟ್ಟರೆ ಹೀಗೆ ಆಗೋದು ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ನಾನು ಪಕ್ಕಾ ಅಪ್ಪು ಫ್ಯಾನ್​. ಈ ಹಾಡನ್ನು ಒಂದು ಸಾರಿನು ಕೇಳುವುದಕ್ಕೆ ಆಗುತಿಲ್ಲ. ದಯವಿಟ್ಟು ಈ ರೀತಿ ಬೇಜಾರು ಮಾಡಬೇಡಿ ಎಂದು ಹೇಳಿದ್ದಾರೆ. ಜೊತೆಗೆ ಸಂತೋಷ್​ರವರು ಹಾಡು ಬರಿಯದೇ ಇದ್ದರೆ ಒಳ್ಳೆಯದು ಎಂದು ಪುನೀತ್​ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

Yuvarathnaa Song: ಯುವರತ್ನ ಕಮಾಲ್​.. ‘ಊರಿಗೊಬ್ಬ ರಾಜಾ.. ಆ ರಾಜಂಗೊಬ್ಬಳು ರಾಣಿ’ ಹಾಡು ಬಿಡುಗಡೆ; ಪವರ್​ಸ್ಟಾರ್ ಪವರ್​ಫುಲ್​ ಸ್ಟೆಪ್​

ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಟ್ರೈಲರ್​ಗೆ ಕೌಂಟ್​ಡೌನ್

Published On - 12:21 pm, Sat, 27 February 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ