AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಮನೆಗೆ ಪೊಲೀಸ್​ ಬಂದೋಬಸ್ತ್​;​ 12 ಗಂಟೆವರೆಗೆ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ನೋ ಎಂಟ್ರಿ

ಪುನೀತ್​ ರಾಜ್​ಕುಮಾರ್​ ಕುಟುಂಬದವರು 11ನೇ ದಿನದ ಕಾರ್ಯ ನೆರವೇರಿಸುತ್ತಿರುವ ಕಾರಣದಿಂದ ಬೆಳಗ್ಗೆ ಸಮಾಧಿ ಬಳಿ ಅಭಿಮಾನಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಧ್ಯಾಹ್ನ 12 ಗಂಟೆ ನಂತರ ಅಭಿಮಾನಿಗಳಿಗೆ ಎಂಟ್ರಿ ನೀಡಲಾಗುವುದು.

ಪುನೀತ್ ಮನೆಗೆ ಪೊಲೀಸ್​ ಬಂದೋಬಸ್ತ್​;​ 12 ಗಂಟೆವರೆಗೆ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ನೋ ಎಂಟ್ರಿ
ಪುನೀತ್​ ರಾಜ್​ಕುಮಾರ್ ಸಮಾಧಿ
TV9 Web
| Updated By: ಮದನ್​ ಕುಮಾರ್​|

Updated on: Nov 08, 2021 | 8:39 AM

Share

ಪುನೀತ್​ ರಾಜ್​ಕುಮಾರ್​ ಅವರ ಮೇಲೆ ಜನರು ಇಟ್ಟಂತಹ ಅಭಿಮಾನಕ್ಕೆ ಬೆಲೆ ಕಟ್ಟಲಾಗದು. ಅಪ್ಪು ನಿಧನರಾಗಿ 11 ದಿನ ಆಗಿದ್ದರೂ ಕೂಡ ಫ್ಯಾನ್ಸ್​ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಪ್ರತಿದಿನ ಸಮಾಧಿ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಬರುತ್ತಲೇ ಇದ್ದಾರೆ. ಇಂದು (ನ.8) ಪುನೀತ್​ ಅವರ 11ನೇ ದಿನದ ಕಾರ್ಯವನ್ನು ನೆರವೇರಿಸಲಾಗುತ್ತಿದೆ. ಡಾ. ರಾಜ್​ ಕುಟುಂಬದವರು ಪುನೀತ್​​ ನಿವಾಸ ಮತ್ತು ಸಮಾಧಿ ಬಳಿ ಪೂಜೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮತ್ತು ಸಮಾಧಿ ಬಳಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

ಅಪ್ಪು ನಿಧನದ ಬಳಿಕ ಕೆಲವು ಅಭಿಮಾನಿಗಳಿಗೆ ದಿಕ್ಕು ತೋಚದಂತಾಗಿದೆ. ಇಂದು 11ನೇ ದಿನದ ಪುಣ್ಯಸ್ಮರಣೆ ಇರುವುದರಿಂದ ಫ್ಯಾನ್ಸ್​ ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಇದರಿಂದ ಕುಟುಂಬದವರ ಕಾರ್ಯಕ್ಕೆ ತೊಂದರೆ ಆಗಬಾರದು. ಹಾಗಾಗಿ ಪುನೀತ್​ ರಾಜ್​ಕುಮಾರ್​ ಮನೆ ಎದುರು ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿ ಬಳಿಯೂ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮಧ್ಯಾಹ್ನ 12ರವರೆಗೂ ಅಭಿಮಾನಿಗಳ ಪ್ರವೇಶ ನಿರ್ಬಂಧ:

ಪುನೀತ್​ ರಾಜ್​ಕುಮಾರ್​ ಕುಟುಂಬದವರು ಹಾಲು-ತುಪ್ಪ ಕಾರ್ಯ ನೆರವೇರಿಸಿದ ಬಳಿಕ ಅಪ್ಪು ಸಮಾಧಿ ದರ್ಶನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಡಲಾಯಿತು. ಅಂದಿನಿಂದ ಇಂದಿನವರೆಗೆ ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಸಮಾಧಿ ಬಳಿ ಬಂದು ನಮನ ಸಲ್ಲಿಸುತ್ತಿದ್ದಾರೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ಅಪ್ಪುಗೆ ನಮಿಸುತ್ತಿದ್ದಾರೆ. ಆದರೆ ಇಂದು ಪುನೀತ್​ ರಾಜ್​ಕುಮಾರ್​ ಕುಟುಂಬದವರು 11ನೇ ದಿನದ ಕಾರ್ಯ ನೆರವೇರಿಸುತ್ತಿರುವ ಕಾರಣದಿಂದ ಬೆಳಗ್ಗೆ ಸಮಾಧಿ ಬಳಿ ಅಭಿಮಾನಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕುಟುಂಬದವರು ಕಾರ್ಯ ಮುಗಿಸಿದ ಬಳಿಕ, ಅಂದರೆ 12 ಗಂಟೆ ನಂತರ ಅಭಿಮಾನಿಗಳಿಗೆ ಎಂಟ್ರಿ ನೀಡಲಾಗುವುದು.

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿದ ಕ್ಷಣದಿಂದಲೂ ಎಲ್ಲವನ್ನೂ ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಬರಲಾಗುತ್ತಿದೆ. ಎಲ್ಲಿಯೂ ಗೊಂದಲಕ್ಕೆ ಎಡೆಮಾಡಿಕೊಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅದೇ ರೀತಿ ಇಂದು ಕೂಡ 11ನೇ ದಿನದ ಕಾರ್ಯವನ್ನು ಕುಟುಂಬದವರು ನೆರವೇರಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆಯೇ ಪುನೀತ್​ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಕಾರ್ಯ ಆರಂಭ ಆಗಿದೆ. ಮನೆಯನ್ನು ಹೂವಿನಿಂದ ಸಿಂಗರಿಸಲಾಗಿದೆ. ಮನೆ ಎದುರು ಶಾಮಿಯಾನ ಹಾಕಿ ವ್ಯವಸ್ಥೆ ಮಾಡಲಾಗಿದೆ. 10 ಗಂಟೆ ಸುಮಾರಿಗೆ ಅಪ್ಪು ಸಮಾಧಿ ಬಳಿ ಕುಟುಂಬಸ್ಥರು ಬರಲಿದ್ದಾರೆ. ಪುನೀತ್​ ಅವರಿಗೆ ಇಷ್ಟವಾದ ತಿಂಡಿ-ತಿನಿಸುಗಳನ್ನು ಸಮಾಧಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ಈ ಕಾರ್ಯಕ್ಕೆ ಕುಟುಂಬದವರ ಜೊತೆ ಕೆಲವೇ ಕೆಲವು ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

ಇದನ್ನೂ ಓದಿ:

ಅಪ್ಪು ಮೇಲೆ ಜನರಿಟ್ಟ ಅಭಿಮಾನಕ್ಕೆ ಸಾಟಿ ಇಲ್ಲ; ಪುನೀತ್​ ಸಮಾಧಿ ಬಳಿ ಜನಸಾಗರ ಇನ್ನೂ ಕಮ್ಮಿ ಆಗಿಲ್ಲ

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ