AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮದ ಕಾಣಿಕೆಯಿಂದ ಯುವರತ್ನದವರೆಗೆ; ಭಾಗ್ಯವಂತ ಪುನೀತ್​ ರಾಜ್​ಕುಮಾರ್ ಸಿನಿ ಪಯಣಕ್ಕೆ 45 ವರ್ಷ​​!

1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್​ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್​ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು.

ಪ್ರೇಮದ ಕಾಣಿಕೆಯಿಂದ ಯುವರತ್ನದವರೆಗೆ; ಭಾಗ್ಯವಂತ ಪುನೀತ್​ ರಾಜ್​ಕುಮಾರ್ ಸಿನಿ ಪಯಣಕ್ಕೆ 45 ವರ್ಷ​​!
ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Mar 01, 2021 | 3:50 PM

Share

ಅದು 1976ನೇ ಇಸ್ವಿ. ಡಾ.ರಾಜ್​ಕುಮಾರ್​, ಆರತಿ ಹಾಗೂ ಜಯಮಾಲ ಅಭಿನಯದ ಪ್ರೇಮದ ಕಾಣಿಕೆ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ 6 ತಿಂಗಳ ಶಿಶುವಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಬೆಳ್ಳಿ ಪರದೆಗೆ ಕಾಲಿಡುವ ಸೂಚನೆಯನ್ನು ಅಂದೇ ನೀಡಿದ್ದರು. ಇದಾದ ನಂತರ ಬಾಲ ಕಲಾವಿದನಾಗಿ, ಹೀರೋ ಆಗಿ ಪುನೀತ್​ ಕರ್ನಾಟಕದ ಮನೆ ಮನೆಗಳಲ್ಲಿ ಹೆಸರುವಾಸಿಯಾಗಿದ್ದಾರೆ. ಅವರ ಸಿನಿ ಪ್ರಯಾಣಕ್ಕೆ ಈಗ ಬರೋಬ್ಬರಿ 45 ವರ್ಷ. ಈ ವಿಶೇಷ ದಿನದಂದು ಪುನೀತ್​ಗೆ ಸಾಕಷ್ಟು ಕಲಾವಿದರು ಶುಭ ಕೋರಿದ್ದಾರೆ. ಪ್ರೇಮದ ಕಾಣಿಸಿಕೆ ಸಿನಿಮಾ ತೆರೆಕಂಡ ನಂತರ ಪುನೀತ್​ ಸನಾದಿ ಅಪ್ಪಣ್ಣ ಚಿತ್ರದಲ್ಲಿ ಅಭಿನಯಿಸಿದ್ದರು. ನಂತರದಲ್ಲಿ ತಾಯಿಗೆ ತಕ್ಕ ಮಗ, ವಸಂತ ಗೀತಾ, ಭೂಮಿಗೆ ಬಂದ ಭಗವಂತ, ಭಾಗ್ಯವಂತ, ಹೊಸ ಬೆಳಕು ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿ ಪುನೀತ್​ ನಟಿಸಿದ್ದರು. ಈ ಸಮಯದಲ್ಲಿ ಪುನೀತ್​ ಮಾಸ್ಟರ್​ ಲೋಹಿತ್​ ಆಗಿ ಪರಿಚಯಗೊಂಡಿದ್ದರು.

1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್​ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್​ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು. 2002ರಲ್ಲಿ ತೆರೆಕಂಡ ಅಪ್ಪು ಸಿನಿಮಾ ಮೂಲಕ ಪುನೀತ್​ ಪೂರ್ಣ ಪ್ರಮಾಣದ ನಟನಾಗಿ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 25 ಸಿನಿಮಾಗಳಲ್ಲಿ ಪುನೀತ್​ ನಟಿಸಿದ್ದಾರೆ.

ಪ್ರೇಮದ ಕಾಣಿಕೆ ಸಿನಿಮಾ ತೆರೆಕಂಡು ಇದೀಗ 45 ವರ್ಷಗಳು ಕಳೆದಿವೆ. ಈ ವಿಶೇಷ ದಿನಕ್ಕೆ ಕಿಚ್ಚ ಸುದೀಪ್​, ರಿಷಬ್​ ಶೆಟ್ಟಿ ಸೇರಿ ಸಾಕಷ್ಟು ಮಂದಿ ಶುಭಾಶಯ ಕೋರಿದ್ದಾರೆ.

21ನೇ ಸಂಭ್ರಮಕ್ಕೆ ಶು ಭಕೋರಿದ ಎಲ್ಲರಿಗೂ ಪುನೀತ್​ ಧನ್ಯವಾದ ಹೇಳಿದ್ದಾರೆ. ಈ ದಿನವನ್ನು ವಿಶೇಷಗೊಳಿಸಿದ ನಿಮ್ಮೆಲ್ಲರಿಗೂ ನನ್ನ ಅಭಿನಂದನೆಗಳು. ೪೫ ವರ್ಷದ ಈ ಪಯಣದಲ್ಲಿ ನನ್ನನ್ನು ಪ್ರೋತ್ಸಾಹಿಸಿ, ಪ್ರೀತಿಸಿದ ಅಭಿಮಾನಿಗಳಿಗೆ, ಸಹಉದ್ಯೋಗಿಗಳಿಗೆ, ಬಂಧುಮಿತ್ರರಿಗೆ ನನ್ನ ಹೃದಯಪೂರ್ವಕ ನಮನಗಳು ಎಂದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ಇದೊಂದು ದೊಡ್ಡ ಸಾಧನೆ: ಪುನೀತ್​ ರಾಜ್​ಕುಮಾರ್​ಗೆ ಅಭಿನಂದಿಸಿದ ಕಿಚ್ಚ ಸುದೀಪ್​

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ