AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮದ ಕಾಣಿಕೆಯಿಂದ ಯುವರತ್ನದವರೆಗೆ; ಭಾಗ್ಯವಂತ ಪುನೀತ್​ ರಾಜ್​ಕುಮಾರ್ ಸಿನಿ ಪಯಣಕ್ಕೆ 45 ವರ್ಷ​​!

1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್​ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್​ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು.

ಪ್ರೇಮದ ಕಾಣಿಕೆಯಿಂದ ಯುವರತ್ನದವರೆಗೆ; ಭಾಗ್ಯವಂತ ಪುನೀತ್​ ರಾಜ್​ಕುಮಾರ್ ಸಿನಿ ಪಯಣಕ್ಕೆ 45 ವರ್ಷ​​!
ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Mar 01, 2021 | 3:50 PM

Share

ಅದು 1976ನೇ ಇಸ್ವಿ. ಡಾ.ರಾಜ್​ಕುಮಾರ್​, ಆರತಿ ಹಾಗೂ ಜಯಮಾಲ ಅಭಿನಯದ ಪ್ರೇಮದ ಕಾಣಿಕೆ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ 6 ತಿಂಗಳ ಶಿಶುವಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಬೆಳ್ಳಿ ಪರದೆಗೆ ಕಾಲಿಡುವ ಸೂಚನೆಯನ್ನು ಅಂದೇ ನೀಡಿದ್ದರು. ಇದಾದ ನಂತರ ಬಾಲ ಕಲಾವಿದನಾಗಿ, ಹೀರೋ ಆಗಿ ಪುನೀತ್​ ಕರ್ನಾಟಕದ ಮನೆ ಮನೆಗಳಲ್ಲಿ ಹೆಸರುವಾಸಿಯಾಗಿದ್ದಾರೆ. ಅವರ ಸಿನಿ ಪ್ರಯಾಣಕ್ಕೆ ಈಗ ಬರೋಬ್ಬರಿ 45 ವರ್ಷ. ಈ ವಿಶೇಷ ದಿನದಂದು ಪುನೀತ್​ಗೆ ಸಾಕಷ್ಟು ಕಲಾವಿದರು ಶುಭ ಕೋರಿದ್ದಾರೆ. ಪ್ರೇಮದ ಕಾಣಿಸಿಕೆ ಸಿನಿಮಾ ತೆರೆಕಂಡ ನಂತರ ಪುನೀತ್​ ಸನಾದಿ ಅಪ್ಪಣ್ಣ ಚಿತ್ರದಲ್ಲಿ ಅಭಿನಯಿಸಿದ್ದರು. ನಂತರದಲ್ಲಿ ತಾಯಿಗೆ ತಕ್ಕ ಮಗ, ವಸಂತ ಗೀತಾ, ಭೂಮಿಗೆ ಬಂದ ಭಗವಂತ, ಭಾಗ್ಯವಂತ, ಹೊಸ ಬೆಳಕು ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿ ಪುನೀತ್​ ನಟಿಸಿದ್ದರು. ಈ ಸಮಯದಲ್ಲಿ ಪುನೀತ್​ ಮಾಸ್ಟರ್​ ಲೋಹಿತ್​ ಆಗಿ ಪರಿಚಯಗೊಂಡಿದ್ದರು.

1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್​ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್​ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು. 2002ರಲ್ಲಿ ತೆರೆಕಂಡ ಅಪ್ಪು ಸಿನಿಮಾ ಮೂಲಕ ಪುನೀತ್​ ಪೂರ್ಣ ಪ್ರಮಾಣದ ನಟನಾಗಿ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 25 ಸಿನಿಮಾಗಳಲ್ಲಿ ಪುನೀತ್​ ನಟಿಸಿದ್ದಾರೆ.

ಪ್ರೇಮದ ಕಾಣಿಕೆ ಸಿನಿಮಾ ತೆರೆಕಂಡು ಇದೀಗ 45 ವರ್ಷಗಳು ಕಳೆದಿವೆ. ಈ ವಿಶೇಷ ದಿನಕ್ಕೆ ಕಿಚ್ಚ ಸುದೀಪ್​, ರಿಷಬ್​ ಶೆಟ್ಟಿ ಸೇರಿ ಸಾಕಷ್ಟು ಮಂದಿ ಶುಭಾಶಯ ಕೋರಿದ್ದಾರೆ.

21ನೇ ಸಂಭ್ರಮಕ್ಕೆ ಶು ಭಕೋರಿದ ಎಲ್ಲರಿಗೂ ಪುನೀತ್​ ಧನ್ಯವಾದ ಹೇಳಿದ್ದಾರೆ. ಈ ದಿನವನ್ನು ವಿಶೇಷಗೊಳಿಸಿದ ನಿಮ್ಮೆಲ್ಲರಿಗೂ ನನ್ನ ಅಭಿನಂದನೆಗಳು. ೪೫ ವರ್ಷದ ಈ ಪಯಣದಲ್ಲಿ ನನ್ನನ್ನು ಪ್ರೋತ್ಸಾಹಿಸಿ, ಪ್ರೀತಿಸಿದ ಅಭಿಮಾನಿಗಳಿಗೆ, ಸಹಉದ್ಯೋಗಿಗಳಿಗೆ, ಬಂಧುಮಿತ್ರರಿಗೆ ನನ್ನ ಹೃದಯಪೂರ್ವಕ ನಮನಗಳು ಎಂದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ಇದೊಂದು ದೊಡ್ಡ ಸಾಧನೆ: ಪುನೀತ್​ ರಾಜ್​ಕುಮಾರ್​ಗೆ ಅಭಿನಂದಿಸಿದ ಕಿಚ್ಚ ಸುದೀಪ್​

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ