ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ; ನಾಲ್ಕು ವರ್ಷಗಳ ಹಿಂದೆ ನಿಜಕ್ಕೂ ನಡೆದಿದ್ದೇನು?
Puneeth Rajkumar Death Anniversary: ಪುನೀತ್ ರಾಜ್ಕುಮಾರ್ ನಿಧನಕ್ಕೆ ನಾಲ್ಕು ವರ್ಷಗಳು ಕಳೆದಿವೆ. ಅಕಾಲಿಕ ಮರಣದಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿತ್ತು. ಅಕ್ಟೋಬರ್ 29, 2021ರಂದು ಅವರು ನಿಧನ ಹೊಂದಿದ್ದರು. ಅವರ ಅಕಾಲಿಕ ನಿಧನದ ಹಿಂದಿನ ದಿನದ ಘಟನೆಗಳು, ಗಂಧದಗುಡಿ ಕನಸು ಹಾಗೂ ಪಿಆರ್ಕೆ ಮುನ್ನಡೆಸುತ್ತಿರುವ ಅಶ್ವಿನಿ ಅವರ ಬಗ್ಗೆ ಈ ಸ್ಟೋರಿಯಲ್ಲಿದೆ ವಿಷಯ.

ಪುನೀತ್ ರಾಜ್ಕುಮಾರ್ (Puneeth Rajkumar) ಅವರು ನಿಧನ ಹೊಂದಿ ನಾಲ್ಕು ವರ್ಷಗಳೇ ಕಳೆದು ಹೋಗಿವೆ. ಕನ್ನಡದಲ್ಲಿ ಸೂಪರ್ಸ್ಟಾರ್ ಆಗಿ ಮೆರೆಯುವಾಗಲೇ ಅವರು ಅಕಾಲಿಕ ಮರಣ ಹೊಂದಿದರು. ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ, ವಿಧಿ ಆಟ ಬೆರೇಯದೇ ಇತ್ತು. ಎಲ್ಲಿಯೋ ಅವಿತು ಕೂತಿದ್ದ ಸಾವು ಅವರನ್ನು ಬಂದು ಬಿಗಿದಪ್ಪಿ ಬಿಟ್ಟಿತ್ತು. ಅವರನ್ನು ಉಳಿಸಿಕೊಳ್ಳಲು ಆ ದೇವರು ಸಮಾಯವಕಾಶವನ್ನೂ ನೀಡಲಿಲ್ಲ. ಅವರು ಇಲ್ಲ ಎಂಬ ಕಟು ಸತ್ಯವನ್ನು ಒಪ್ಪಿಕೊಳ್ಳಲು ಈಗಲೂ ಅಭಿಮಾನಿಗಳಿಂದ ಸಾಧ್ಯವಾಗುತ್ತಿಲ್ಲ.
ಬರ್ತ್ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಪುನೀತ್
ಪುನೀತ್ ಆಪ್ತ ಹಾಗೂ ಸಂಗೀತ ಸಂಯೋಜಕ ಗುರುಕಿರಣ್ ಅವರಿಗೆ ಅಕ್ಟೋಬರ್ 28 ಬರ್ತ್ಡೇ. ಈ ಕಾರಣಕ್ಕೆ ಪುನೀತ್ ಅವರನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಪುನೀತ್ ಅವರು ಈ ಪಾರ್ಟಿಗೆ ಬಂದ ಸೆಲೆಬ್ರಟಿಗಳು ಹಾಗೂ ಆಪ್ತರ ಜೊತೆ ಮಾತನಾಡಿ ಅಲ್ಲಿಂದ ಮನೆಗೆ ಬಂದಿದ್ದರು.
ವಿಶ್ ಮಾಡಿದ್ರು
2021ರ ಅಕ್ಟೋಬರ್ 29ರಂದು ಶಿವರಾಜ್ಕುಮಾರ್ ನಟನೆಯ, ಹರ್ಷ ನಿರ್ದೇಶನದ ‘ಭಜರಂಗಿ 2’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾಗೆ ಮುಂಜಾನೆ 5 ಗಂಟೆಯಿಂದಲೇ ಶೋಗಳನ್ನು ಆಯೋಜನೆ ಮಾಡಲಾಯಿತು. ಈ ಚಿತ್ರವನ್ನು ವೀಕ್ಷಿಸಲು ಅಭಿಮಾನಿಗಳು ಮುಗಿ ಬಿದ್ದರು. ಈ ಚಿತ್ರಕ್ಕೆ ಪುನೀತ್ ರಾಜ್ಕುಮಾರ್ ಅವರು ಟ್ವಿಟರ್ ಮೂಲಕ ವಿಶ್ ಮಾಡಿದರು.
10 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಉಂಟಾಯಿತು ಎನ್ನಲಾಗಿದೆ. ಅವರನ್ನು ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಅವರು ನಿಧನ ಹೊಂದಿಯಾಗಿತ್ತು. ಸಖತ್ ಫಿಟ್ ಆಗಿದ್ದ ಪುನೀತ್ ಈ ರೀತಿ ಏಕಾಏಕಿ ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. 12 ಗಂಟೆ ವೇಳೆಗೆ ಅವರು ನಿಧನ ಹೊಂದಿದ್ದು ಖಚಿತವಾಗಿತ್ತು. ಆದರೆ, ಸರ್ಕಾರದವರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡ ಬಳಿಕವೇ ಈ ಸುದ್ದಿಯನ್ನು ಪ್ರಕಟಿಸಿದರು.
ಜಿಮ್ ಮಾಡಿದ್ರಾ?
ಪುನೀತ್ ರಾಜ್ಕುಮಾರ್ ಏನೇ ತಪ್ಪಿಸಿದರೂ ಜಿಮ್ ಮಾಡೋದನ್ನು ಮಾತ್ರ ತಪ್ಪಿಸುತ್ತಿರಲಿಲ್ಲ. ಅವರಿಗೆ ಹೃದಯಾಘಾತ ಆಗುವ ದಿನ ಅವರು ಜಿಮ್ ಮಾಡಿದ್ದರು ಎಂದು ಕೆಲವರು ಹೇಳಿದರೆ, ಅವರ ಬಾಡಿಗಾರ್ಡ್ ಈ ವಿಚಾರವನ್ನು ತಳ್ಳಿ ಹಾಕುತ್ತಾರೆ. ‘ಅವರು ಅಂದು ಜಿಮ್ ಮಾಡಿಯೇ ಇರಲಿಲ್ಲ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಏನೋ ಸರಿ ಇಲ್ಲ ಎಂದು ಅನಿಸುತ್ತಿದ್ದ ಕಾರಣಕ್ಕೆ ಪುನೀತ್ ಅಂದು ಜಿಮ್ ಮಾಡಿರಲಿಲ್ಲ ಎನ್ನಲಾಗಿದೆ.
ನವೆಂಬರ್ 1ಕ್ಕೆ ಬಿಡುಗಡೆ ಆಗಬೇಕಿತ್ತು ಟೈಟಲ್
ಪುನೀತ್ ರಾಜ್ಕುಮಾರ್ ಅವರು ‘ಗಂಧದಗುಡಿ’ ಹೆಸರಿನ ಡಾಕ್ಯುಮೆಂಟರಿ ಮಾಡಿದ್ದರು. ಈ ಡಾಕ್ಯುಮೆಂಟರಿಯ ಟೈಟಲ್ನ ನವೆಂಬರ್ 1ರಂದು ಅವರು ಅನೌನ್ಸ್ ಮಾಡುವವರು ಇದ್ದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಅದಕ್ಕೂ ಮೊದಲೇ ಅವರು ನಿಧನ ಹೊಂದಿದರು.
ಇದನ್ನೂ ಓದಿ: ಪುನೀತ್ ಪ್ರೀತಿ ವಿಚಾರ ಹೇಳಿದಾಗ ರಾಜ್ಕುಮಾರ್ ರಿಯಾಕ್ಷನ್ ಹೇಗಿತ್ತು?
ಪಿಆರ್ಕೆ ಜವಾಬ್ದಾರಿ
ಪುನೀತ್ ನಿಧನದ ಬಳಿಕ ಪಿಆರ್ಕೆ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ. ಇದನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಪುನೀತ್ ನಿಧನದ ಬಳಿಕ ಪಿಆರ್ಕೆಯಿಂದ ‘ಒನ್ ಕಟ್ ಟೂ ಕಟ್’, ‘ಫ್ಯಾಮಿಲಿ ಪ್ಯಾಕ್’, ‘ಮ್ಯಾನ್ ಆಫ್ ದಿ ಮ್ಯಾಚ್’, ‘ಗಂಧದಗುಡಿ’, ‘ಆಚಾರ್ ಆ್ಯಂಡ್ ಕೋ’, ‘ಒ2’ ಹಾಗೂ ‘ಎಕ್ಕ’ ಸಿನಿಮಾಗಳು ಬಂದಿವೆ. ಈ ಪೈಕಿ ಕೆಲವು ಕಥೆಗಳನ್ನು ಪುನೀತ್ ಅವರೇ ಫೈನಲ್ ಮಾಡಿದ್ದರೆ, ಇನ್ನೂ ಕೆಲವು ಅಶ್ವಿನಿ ಅವರು ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:38 am, Wed, 29 October 25








