AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಪ್ಪು ಮೇಲಿನ ಅಭಿಮಾನ

ರಾಜ್ಯಾದ್ಯಂತ ಅಭಿಮಾನಿಗಳು ನಟ ಪುನೀತ್ ರಾಜ್​ಕುಮಾರ್​ ಜನ್ಮದಿನವನ್ನು ಆಚರಿಸುತ್ತಿದ್ದಾರೆ. 50ನೇ ವರ್ಷದ ಬರ್ತ್​ಡೇ ಆದ್ದರಿಂದ ಈ ಬಾರಿ ಸ್ಪೆಷಲ್ ಆಗಿದೆ. ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬದವರು ಹಾಗೂ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ‘ಅಪ್ಪು’ ಸಿನಿಮಾ ಕೂಡ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ.

ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಪ್ಪು ಮೇಲಿನ ಅಭಿಮಾನ
Puneeth Rajkumar
ಮದನ್​ ಕುಮಾರ್​
| Edited By: |

Updated on:Mar 17, 2025 | 6:42 AM

Share

‘ಪವರ್ ಸ್ಟಾರ್’ ಪುನೀತ್ ರಾಜ್​ಕುಮಾರ್​ (Puneeth Rajkumar) ಅವರು ನಮ್ಮೊಂದಿಗೆ ಇದ್ದಿದ್ದರೆ ಇಂದು (ಮಾರ್ಚ್​ 17) ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿತ್ತು. ಈಗ ಅವರಿಲ್ಲದೇ ಜನ್ಮದಿನ ಆಚರಿಸುವಂತಾಗಿದೆ. ಪ್ರತಿ ವರ್ಷ ಮಾರ್ಚ್​ 17 ಬಂತೆಂದರೆ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಪುನೀತ್ ರಾಜ್​ಕುಮಾರ್ ಬರ್ತ್​ಡೇ (Puneeth Rajkumar  Birthday) ಪ್ರಯುಕ್ತ ಹಲವಾರು ಬಗೆಯ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಅಪ್ಪು ಅಭಿಮಾನಿಗಳು ಅನ್ನದಾನ, ರಕ್ತದಾನ, ನೇತ್ರದಾನ ನೋಂದಣಿ ಸೇರಿದಂತೆ ಅನೇಕ ಬಗೆಯ ಕಾರ್ಯಗಳನ್ನು ಕೈಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಪುನೀತ್ ಅವರಿಗೆ ಜನ್ಮದಿನದ ಶುಭಾಶಯ ಕೋರುವ ಮೂಲಕ ಸ್ಮರಿಸಲಾಗುತ್ತಿದೆ.

ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್​ಕುಮಾರ್ ಅವರು ನೀಡಿದ ಕೊಡುಗೆಯನ್ನು ಮರೆಯುವಂತಿಲ್ಲ. ಬಾಲನಟನಾಗಿಯೇ ಅಭಿಮಾನಿಗಳ ಮನಗೆದ್ದ ಅವರು ಹೀರೋ ಆಗಿ ಕೂಡ ಗಟ್ಟಿಯಾಗಿ ನೆಲೆನಿಂತರು. ಅಭಿನಯ, ಡ್ಯಾನ್ಸ್, ಫೈಟಿಂಗ್​ನಲ್ಲಿ ಅಪ್ಪು ಅವರಿಗೆ ಸರಿಸಾಟಿ ಯಾರಿಲ್ಲ. ಅದೇ ರೀತಿ ಜನಪರ ಕಾರ್ಯಗಳ ಮೂಲಕ ಕೂಡ ಅವರು ರಿಯಲ್ ಹೀರೋ ಎನಿಸಿಕೊಂಡರು. ಆ ಗುಣಗಳು ಅಭಿಮಾನಿಗಳಿಗೆ ಮಾದರಿ ಆಗಿವೆ.

ಇದು 50ನೇ ವರ್ಷದ ಹುಟ್ಟುಹಬ್ಬ ಆದ್ದರಿಂದ ಪುನೀತ್ ರಾಜ್​​ಕುಮಾರ್​ ಅವರು ಮೊದಲ ಸಿನಿಮಾ ‘ಅಪ್ಪು’ ಮರು ಬಿಡುಗಡೆ ಆಗಿದೆ. ಕಳೆದ ಶುಕ್ರವಾರ (ಮಾರ್ಚ್​ 14) ರೀ-ರಿಲೀಸ್ ಆದ ‘ಅಪ್ಪು’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಆ ಮೂಲಕ ಅಪ್ಪು ಮೇಲಿನ ಅಭಿಮಾನ ಎಂದಿಗೂ ಕಡಿಮೆ ಆಗಲ್ಲ ಎಂಬುದನ್ನು ಫ್ಯಾನ್ಸ್ ಸಾಬೀತು ಮಾಡಿದ್ದಾರೆ. ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ರಮ್ಯಾ, ಶರ್ಮಿಳಾ ಮಾಂಡ್ರೆ, ಸಂತೋಷ್ ಆನಂದ್​ ರಾಮ್​, ರಕ್ಷಿತಾ ಪ್ರೇಮ್, ಯುವ ರಾಜ್​​ಕುಮಾರ್​ ಸೇರಿದಂತೆ ಹಲವರು ಸಿನಿಮಾ ನೋಡಿದ್ದಾರೆ.

ಇದನ್ನೂ ಓದಿ
Image
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
Image
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
Image
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
Image
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್

ಇದನ್ನೂ ಓದಿ: ‘ಧ್ರುವ 369’ ಸಿನಿಮಾದ ಟೀಸರ್​ನಲ್ಲಿ ಪುನೀತ್, ಡಾ. ರಾಜ್​ಕುಮಾರ್​ ಪಾತ್ರಗಳ ಮರುಸೃಷ್ಟಿ

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿ ಕೂಡ ಪುನೀತ್ ರಾಜ್​ಕುಮಾರ್​ ಅವರು ಸಕ್ರಿಯರಾಗಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮೂಲಕ ಅವರು ಮಹತ್ವದ ಸಿನಿಮಾಗಳನ್ನು ನಿರ್ಮಿಸುವ ಗುರಿ ಹೊಂದಿದ್ದರು. ಆ ಕಾಯಕವನ್ನು ಈಗ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮುಂದುವರಿಸುತ್ತಿದ್ದಾರೆ. ಇಂದು ಜನ್ಮದಿನದ ಪ್ರಯುಕ್ತ ಅನೇಕರು ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಡಾ. ರಾಜ್​​ಕುಮಾರ್​ ಕುಟುಂಬದವರು ಕೂಡ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:42 am, Mon, 17 March 25

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ