AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ’ ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ

ಸೋಮವಾರ (ನವೆಂಬರ್​ 1) ಬೆಳಗ್ಗೆ ‘ರಾಜಕುಮಾರ' ಚಿತ್ರದ ವಿಶೇಷ ಪ್ರದರ್ಶನ ಇರಲಿದೆ. ಬೆಂಗಳೂರು ನಗರದ ಶ್ರೀನಿವಾಸ ಥಿಯೇಟರ್​​ನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಇರಲಿದೆ.

ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ' ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Oct 31, 2021 | 10:09 PM

Share

ಪುನೀತ್​ ರಾಜ್​ಕುಮಾರ್ ಅವರು ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ರಾಜ್​ ಕುಟುಂಬದ ಕುಡಿ ಪುನೀತ್​ ಅವರು ಇಷ್ಟು ಬೇಗೆ ಮೃತಪಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರು ಮೃತಪಟ್ಟಿರುವ ವಿಚಾರ ಫ್ಯಾನ್ಸ್​ಗೆ ಶಾಕ್​ ನೀಡಿದೆ. ಕೆಲವರು ಈ ಸುದ್ದಿ ಕೇಳಿ ಮೃತಪಟ್ಟಿದ್ದಾರೆ. ಈಗ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​​ ಸ್ಮರಣಾರ್ಥ ‘ರಾಜಕುಮಾರ’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.

ಸೋಮವಾರ (ನವೆಂಬರ್​ 1) ಬೆಳಗ್ಗೆ ‘ರಾಜಕುಮಾರ’ ಚಿತ್ರದ ವಿಶೇಷ ಪ್ರದರ್ಶನ ಇರಲಿದೆ. ಬೆಂಗಳೂರು ನಗರದ ಶ್ರೀನಿವಾಸ ಥಿಯೇಟರ್​​ನಲ್ಲಿ ಸಿನಿಮಾದ ವಿಶೇಷ ಪ್ರದರ್ಶನ ಇರಲಿದೆ. ‘ರಾಜಕುಮಾರ’ ಚಿತ್ರ ವೀಕ್ಷಣೆಗೆ ಜನರಿಗೆ ಉಚಿತ ಪ್ರವೇಶ ಇರಲಿದೆ. ಮೊದಲು ಬಂದವರಿಗೆ ಆದ್ಯತೆ ಇರಲಿದೆ ಎನ್ನಲಾಗಿದೆ. ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ.

ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್​ 2016’, ಲಾ, ಫ್ರೆಂಚ್​ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್​ ಹೌಸ್​ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್​, ಮ್ಯಾನ್​ ಆಫ್​ ದಿ ಮ್ಯಾಚ್​, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ.

ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿದ್ದು ಪುನೀತ್​ ರಾಜ್​ಕುಮಾರ್​ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್​ಕೆ ಪ್ರೊಡಕ್ಷನ್​ ಹೌಸ್​ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಜತೆ ಪಿಆರ್​ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

Published On - 6:33 pm, Sun, 31 October 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?