AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ ರಾಜ್​ಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಕ್ರಂ ಆಸ್ಪತ್ರೆಗೆ ದಾಖಲು

Puneeth Rajkumar Hospitalized: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ.

Puneeth Rajkumar: ಪುನೀತ್​ ರಾಜ್​ಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಕ್ರಂ ಆಸ್ಪತ್ರೆಗೆ ದಾಖಲು
ಪುನೀತ್ ರಾಜ್​ಕುಮಾರ್​
TV9 Web
| Updated By: Digi Tech Desk|

Updated on:Oct 29, 2021 | 1:05 PM

Share

Puneeth Rajkumar Hospitalised: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್​ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕುಟುಂಬದವರು ಅಧಿಕೃತವಾಗಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಸದ್ಯ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್​ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್​ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಪುನೀತ್​ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಮೇಲೆ ಒಂದು ಕ್ಷಣ ಆತಂಕ ಮೂಡಿರುವುದು ನಿಜ. ಆದರೆ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್​ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ.

ಸದ್ಯ ಪುನೀತ್​ ರಾಜ್​ಕುಮಾರ್​ ಅವರು ‘ಜೇಮ್ಸ್​’ ಸಿನಿಮಾದ ಕೆಲಸಗಳತ್ತ ಗಮನ ಹರಿಸುತ್ತಿದ್ದಾರೆ. ಆ ಚಿತ್ರಕ್ಕೆ ಚೇತನ್​ಕುಮಾರ್​ ನಿರ್ದೇಶಕ. ಅಲ್ಲದೇ, ಪವನ್​ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ಈಗ ಅನಾರೋಗ್ಯ ಉಂಟಾಗಿರುವುದರಿಂದ ಈ ಸಿನಿಮಾಗಳ ಕೆಲಸಗಳಿಗೆ ಬ್ರೇಕ್​ ಬೀಳುವುದು ಅನಿವಾರ್ಯ. ಪೂರ್ತಿ ಚೇತರಿಸಿಕೊಂಡ ಬಳಿಕವಷ್ಟೇ ಅವರು ಚಿತ್ರೀಕರಣಕ್ಕೆ ಮರಳಬೇಕಿದೆ.

ಇದನ್ನೂ ಓದಿ:

ವರ್ಷದ ಹಿಂದೆ ​ ವ್ಹೀಲ್​ಚೇರ್​ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್​ ರಾಜ್​ಕುಮಾರ್​

ಜಯಂತಿ ನಿಧನಕ್ಕೆ ಕಂಬನಿ ಮಿಡಿದ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್​ಡೇಟ್​ಗಾಗಿ ಪುಟ ರೀಫ್ರೆಶ್ ಮಾಡಿ…

Published On - 12:21 pm, Fri, 29 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!