AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ ರಾಜ್​ಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಕ್ರಂ ಆಸ್ಪತ್ರೆಗೆ ದಾಖಲು

Puneeth Rajkumar Hospitalized: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ.

Puneeth Rajkumar: ಪುನೀತ್​ ರಾಜ್​ಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಕ್ರಂ ಆಸ್ಪತ್ರೆಗೆ ದಾಖಲು
ಪುನೀತ್ ರಾಜ್​ಕುಮಾರ್​
TV9 Web
| Edited By: |

Updated on:Oct 29, 2021 | 1:05 PM

Share

Puneeth Rajkumar Hospitalised: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪುನೀತ್​ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕುಟುಂಬದವರು ಅಧಿಕೃತವಾಗಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಸದ್ಯ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್​ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್​ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್​ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಪುನೀತ್​ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಮೇಲೆ ಒಂದು ಕ್ಷಣ ಆತಂಕ ಮೂಡಿರುವುದು ನಿಜ. ಆದರೆ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್​ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ.

ಸದ್ಯ ಪುನೀತ್​ ರಾಜ್​ಕುಮಾರ್​ ಅವರು ‘ಜೇಮ್ಸ್​’ ಸಿನಿಮಾದ ಕೆಲಸಗಳತ್ತ ಗಮನ ಹರಿಸುತ್ತಿದ್ದಾರೆ. ಆ ಚಿತ್ರಕ್ಕೆ ಚೇತನ್​ಕುಮಾರ್​ ನಿರ್ದೇಶಕ. ಅಲ್ಲದೇ, ಪವನ್​ಕುಮಾರ್​ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದಾರೆ. ಆದರೆ ಈಗ ಅನಾರೋಗ್ಯ ಉಂಟಾಗಿರುವುದರಿಂದ ಈ ಸಿನಿಮಾಗಳ ಕೆಲಸಗಳಿಗೆ ಬ್ರೇಕ್​ ಬೀಳುವುದು ಅನಿವಾರ್ಯ. ಪೂರ್ತಿ ಚೇತರಿಸಿಕೊಂಡ ಬಳಿಕವಷ್ಟೇ ಅವರು ಚಿತ್ರೀಕರಣಕ್ಕೆ ಮರಳಬೇಕಿದೆ.

ಇದನ್ನೂ ಓದಿ:

ವರ್ಷದ ಹಿಂದೆ ​ ವ್ಹೀಲ್​ಚೇರ್​ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್​ ರಾಜ್​ಕುಮಾರ್​

ಜಯಂತಿ ನಿಧನಕ್ಕೆ ಕಂಬನಿ ಮಿಡಿದ ಪುನೀತ್​ ರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್​ಡೇಟ್​ಗಾಗಿ ಪುಟ ರೀಫ್ರೆಶ್ ಮಾಡಿ…

Published On - 12:21 pm, Fri, 29 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ