Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ್​ ನಮನ’ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ: 2 ಸಾವಿರ ಜನರಿಗೆ ಆಹ್ವಾನ; ಗಣ್ಯರಿಗೆ ಪಾಸ್​ ವ್ಯವಸ್ಥೆ

Puneeth Namana: ‘ಪುನೀತ್​ ನಮನ’ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿ ಆಗಲಿದ್ದಾರೆ. ಮಂಗಳವಾರ (ನ.16) ಮಧ್ಯಾಹ್ನ 3ರಿಂದ ಸಂಜೆ 6 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ.

‘ಪುನೀತ್​ ನಮನ’ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ: 2 ಸಾವಿರ ಜನರಿಗೆ ಆಹ್ವಾನ; ಗಣ್ಯರಿಗೆ ಪಾಸ್​ ವ್ಯವಸ್ಥೆ
ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 15, 2021 | 11:32 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅಪ್ಪು ನಿಧನರಾಗಿ (Puneeth Rajkumar Death) 17 ದಿನ ಕಳೆದಿದೆ. ಎಷ್ಟೇ ದಿನಗಳು ಉರುಳಿದರೂ ಪುನೀತ್​ ಇನ್ನಿಲ್ಲ ಎಂಬ ನೋವು ಮಾತ್ರ ಅಭಿಮಾನಿಗಳ ಎದೆಯಲ್ಲಿ ಕಡಿಮೆ ಆಗುವುದೇ ಇಲ್ಲ. ಇಡೀ ದಕ್ಷಿಣ ಭಾರತದ ಚಿತ್ರರಂಗದವರು ಪುನೀತ್​ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ಅವರೆಲ್ಲರೂ ಸೇರಿ ಮಂಗಳವಾರ (ನ.16) ‘ಪುನೀತ್​ ನಮನ’ (Puneeth Namana) ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ (Palace Ground) ನಡೆಯಲಿರುವ ಈ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಈ ಕಾರ್ಯಕ್ರಮಕ್ಕೆ ಡಾ. ರಾಜ್‌ಕುಮಾರ್‌ ಕುಟುಂಬದ ಸದಸ್ಯರ ಜೊತೆಗೆ ದಕ್ಷಿಣ ಭಾರತ ಸಿನಿಮಾರಂಗದ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ಕಲಾವಿದರು ಭಾಗಿ ಆಗಲಿದ್ದಾರೆ.

ತಮಿಳು ನಟರಾದ ವಿಶಾಲ್, ರಜನಿಕಾಂತ್, ದಳಪತಿ ವಿಜಯ್, ಅಜಿತ್, ವಿಜಯ್ ಸೇತುಪತಿ, ತೆಲುಗು ಕಲಾವಿದರಾದ ಚಿರಂಜೀವಿ, ಅಲ್ಲು ಅರ್ಜುನ್, ಜ್ಯೂ. ಎನ್‌ಟಿಆರ್, ಪ್ರಭಾಸ್, ರಾಮ್‌ ಚರಣ್ ಹಾಗೂ ಮಲಯಾಳಂ ನಟ ಮೋಹನ್‌ಲಾಲ್ ಸೇರಿದಂತೆ ಪ್ರಮುಖ ಕಲಾವಿದರು ಭಾಗಿ ಆಗುವ ನಿರೀಕ್ಷೆ ಇದೆ. ‘ಪುನೀತ್​ ನಮನ’ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರು, ಪ್ರಮುಖ ರಾಜಕೀಯ ಮುಖಂಡರ ಸಹ ಭಾಗಿ ಆಗುವ ಸಾಧ್ಯತೆ ಇದೆ. ಮಂಗಳವಾರ (ನ.16) ಮಧ್ಯಾಹ್ನ 3ರಿಂದ ಸಂಜೆ 6 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ.  ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ ಪಾಸ್ ವ್ಯವಸ್ಥೆ ಮಾಡಲಾಗಿದೆ.

ಭಾನುವಾರ (ನ.14) ‘ಭಜರಂಗಿ 2’ ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಶಿವರಾಜ್​ಕುಮಾರ್ ಅವರು ‘ಪುನೀತ್​ ನಮನ’ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದರು. ‘ಇದು ಸಂಪೂರ್ಣ ಚಿತ್ರರಂಗದಿಂದ ನಡೆಯುತ್ತಿರುವ ಕಾರ್ಯಕ್ರಮ. ಅದರ ಬಗ್ಗೆ ನಮಗೆ ಹೆಚ್ಚು ಮಾಹಿತಿ ಇಲ್ಲ. ನಮನ ಅನ್ನೋದಕ್ಕೆ ನನಗೆ ಬೇಜಾರು ಆಗುತ್ತದೆ. ಇಂಡಸ್ಟ್ರೀ ಆಸೆ ಪಟ್ಟ ಮೇಲೆ ನಾವೆಲ್ಲರೂ ಹೋಗಬೇಕು. ಯಾಕೆಂದರೆ ನಾವೂ ಈ ಇಂಡಸ್ಟ್ರಿಯಲ್ಲಿ ಇರುವವರು. ಯಾರೆಲ್ಲ ಬರುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಬೇರೆಯವರ ಡೇಟ್ಸ್​ ಹೇಗಿದೆಯೋ ಗೊತ್ತಿಲ್ಲ. ಯಾರು ಬಂದರೂ ಬಾರದಿದ್ದರೂ ಪುನೀತ್​ ಮೇಲೆ ಅವರ ಪ್ರೀತಿ-ವಿಶ್ವಾಸ ಯಾವಾಗಲೂ ಇದ್ದೇ ಇರುತ್ತದೆ’ ಎಂದು ಶಿವಣ್ಣ ಹೇಳಿದ್ದರು.

ಇದನ್ನೂ ಓದಿ:

ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​