ಪುನೀತ್​ ರಾಜ್​ಕುಮಾರ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಅಪ್ಪು​ ಇಲ್ಲದೆ ಮಂಕಾಗಿದೆ ಈ ದಿನ

ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು. ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು.

ಪುನೀತ್​ ರಾಜ್​ಕುಮಾರ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಅಪ್ಪು​ ಇಲ್ಲದೆ ಮಂಕಾಗಿದೆ ಈ ದಿನ
ಪುನೀತ್​-ಅಶ್ವಿನಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 01, 2021 | 1:46 PM

ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಅಶ್ವಿನಿ ಅವರಿಗೂ ಅಷ್ಟೇ ಪತಿಯನ್ನು ಕಂಡರೆ ಅತಿಯಾದ ಪ್ರೀತಿ. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಸಮಯ ನೀಡುತ್ತಿದ್ದರು. ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಇಂದು (ಡಿಸೆಂಬರ್​ 1) ಪುನೀತ್​ ಹಾಗೂ ಅಶ್ವಿನಿ ಅವರ ವಿವಾಹ ವಾರ್ಷಿಕೋತ್ಸವ.

ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು. ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ನಂತರ ಗೆಳೆತನ ಪ್ರೀತಿಗೆ ತಿರುಗಿತ್ತು. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಮದುವೆ ಆದರು. ಈ ದಂಪತಿಗೆ ಧೃತಿ ಹಾಗೂ ವಂದಿತಾ ಹೆಸರಿನ ಮಕ್ಕಳಿದ್ದಾರೆ.

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ. ಪುನೀತ್​ ಇಲ್ಲದೆ ಬದುಕುವುದು ಅಶ್ವಿನಿ ಅವರಿಗೆ ಕಷ್ಟವಾಗುತ್ತಿದೆ. ಅವರ ಕಣ್ಣೀರು ಇನ್ನೂ ಕಡಿಮೆ ಆಗಿಲ್ಲ. ಪುನೀತ್​ ಇಲ್ಲದೆ ಬದುಕುವುದನ್ನು ಕಲಿಯಬೇಕಿದೆ. ಇಂದು ಅಶ್ವಿನಿ ಅವರಿಗೆ ವಿಶೇಷ ದಿನವಾಗಬೇಕಿತ್ತು. ಆದರೆ, ಪುನೀತ್​ ಇಲ್ಲದೆ ಆ್ಯನಿವರ್ಸರಿ ಮಂಕಾಗಿದೆ.

ಪ್ರತಿ ವರ್ಷ ಮಾರ್ಚ್​ 8ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. 2019ರ ಮಹಿಳಾ ದಿನಾಚರಣೆಯ ಅಂಗವಾಗಿ ಪುನೀತ್​ ಪತ್ನಿಗೆ ಕಾರನ್ನು ನೀಡಿದ್ದರು. ಈ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಉರುಸ್​ ಟ್ವಿನ್​ ಟರ್ಬೋ ಇಂಜಿನ್​ ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 3.6 ಸೆಕೆಂಡ್​ಗಳಲ್ಲಿ ತಲುಪುತ್ತದೆ. ಗರಿಷ್ಠ  305 ಕಿ.ಮೀ ವೇಗದಲ್ಲಿ ಈ ಎಸ್​ಯುವಿ ಚಲಿಸಬಲ್ಲದು.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

Published On - 1:36 pm, Wed, 1 December 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ