AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಆದರ್ಶ ದಂಪತಿ ಎಂದು ಬಣ್ಣಿಸಿದ ಸಂತೋಷ್​ ಆನಂದ್​ರಾಮ್​

Puneeth Rajkumar Wedding Anniversary: ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ. ಅವರ ನಗುಮೊಗವನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

Puneeth Rajkumar: ಪುನೀತ್​​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಆದರ್ಶ ದಂಪತಿ ಎಂದು ಬಣ್ಣಿಸಿದ ಸಂತೋಷ್​ ಆನಂದ್​ರಾಮ್​
ಪುನೀತ್​ ರಾಜ್​ಕುಮಾರ್​, ಅಶ್ವಿನಿ
TV9 Web
| Edited By: |

Updated on:Dec 01, 2022 | 3:52 PM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​ ಆಗಿದ್ದರು. ಪತ್ನಿ ಮತ್ತು ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯಲು ಅವರು ಬಯಸುತ್ತಿದ್ದರು. ಕುಟುಂಬದ ಜೊತೆ ಆಗಾಗ ಪ್ರವಾಸಕ್ಕೆ ತೆರಳುತ್ತಿದ್ದರು. ಇಂದು (ಡಿಸೆಂಬರ್​ 1) ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ (Ashwini Puneeth Rajkumar) ದಂಪತಿಯ ವಿವಾಹ ವಾರ್ಷಿಕೋತ್ಸವ. ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇದ್ದಿದ್ದರೆ ಈ ದಿನವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಅವರಿಲ್ಲ ಎಂಬ ಕೊರಗಿನಲ್ಲಿ ಯಾವ ವಿಶೇಷ ದಿನವೂ ಮೊದಲಿನಂತೆ ಆಪ್ತವಾಗುತ್ತಿಲ್ಲ. ಅಪ್ಪು ಬಿಟ್ಟುಹೋದ ಎಲ್ಲ ಕೆಲಸಗಳನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಮುಂದುವರಿಸುತ್ತಿದ್ದಾರೆ. ಈ ದಂಪತಿಯ ವೆಡ್ಡಿಂಗ್​ ಆ್ಯನಿವರ್ಸರಿ (Wedding Anniversary) ಪ್ರಯುಕ್ತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ವಿಶೇಷ ಪೋಸ್ಟ್​ ಹಂಚಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ಅಶ್ವಿನಿ ಅವರ ಅಪರೂಪದ ಫೋಟೋವನ್ನು ಸಂತೋಷ್​ ಆನಂದ್​ ರಾಮ್​ ಶೇರ್​ ಮಾಡಿಕೊಂಡಿದ್ದಾರೆ. ದೊಡ್ಮನೆಯ ದಂಪತಿ ಕುರಿತು ಅವರು ವಿಶೇಷ ಸಾಲುಗಳನ್ನು ಬರೆದಿದ್ದಾರೆ. ಈ ಜೋಡಿಯನ್ನು ಆದರ್ಶ ದಂಪತಿ ಎಂದು ಅವರು ಬಣ್ಣಿಸಿದ್ದಾರೆ.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

‘ದಾಂಪತ್ಯವೆಂದರೆ ಜೊತೆಯಾಗೋದು, ಜೊತೆಯಲ್ಲಿ ಇರೋದು ಹಾಗೂ ಸಂಗಾತಿಯ ಕನಸುಗಳನ್ನ ನನಸಾಗಿಸೋದು, ಆ ದಾರಿಯಲ್ಲಿ ಹೆಜ್ಜೆ ಹಾಕೋದು. ಈ ನಿಟ್ಟಿನಲ್ಲಿ ನೀವು ಆದರ್ಶ ಮಹಿಳೆ ಹಾಗೂ ಅಪ್ಪು ಅಣ್ಣ ಆದರ್ಶ ವ್ಯಕ್ತಿ (ವಿಶ್ವ ಮಾನವ). ನಿಮಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ಅವರನ್ನು ನೀವು ನಿಮ್ಮೊಳಗೆ ಜೀವಂತವಾಗಿ ಉಳಿಸಿಕೊಂಡಿದ್ದೀರಿ. ಈ ನನ್ನ ಶುಭಾಶಯ ನಿರಂತರ’ ಎಂದು ಸಂತೋಷ್​ ಆನಂದ್​ರಾಮ್​ ಪೋಸ್ಟ್​​ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ಅಶ್ವಿನಿ ಅವರದ್ದು ಲವ್​ ಕಮ್ ಅರೇಂಜ್​ ಮ್ಯಾರೇಜ್​. 1991ರ ಡಿಸೆಂಬರ್​ 1ರಂದು ಈ ಜೋಡಿಯ ವಿವಾಹ ನೆರವೇರಿತ್ತು. ಇಂದು ಅಪ್ಪು ಇಲ್ಲ ಎಂಬ ಕೊರಗು ಎಲ್ಲರನ್ನೂ ಕಾಡುತ್ತಿದೆ. ಸಿನಿಮಾಗಳ ಮೂಲಕ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಅವರು ಎಲ್ಲರ ಹೃದಯದಲ್ಲೂ ನೆಲೆಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಜೊತೆ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರು ಆಪ್ತ ಒಡನಾಟ ಹೊಂದಿದ್ದರು. ‘ರಾಜಕುಮಾರ’, ‘ಯುವರತ್ನ’ ಸಿನಿಮಾಗಳಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದರು. ಸಂತೋಷ್​ ಆನಂದ್​ರಾಮ್​ ಹಂಚಿಕೊಂಡ ಪೋಸ್ಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್​ ಆಗಿದೆ. ಅವರ ನಗುಮೊಗವನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:52 pm, Thu, 1 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು