AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

Man Of The Match: ಕೊರೊನಾ ಎರಡನೇ ಅಲೆ ಹಾವಳಿ ನಂತರ, ಲಾಕ್​ಡೌನ್​ ಸಡಿಲಿಕೆ ಆಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಶೂಟಿಂಗ್​ ಆರಂಭಿಸಲಾಯಿತು. ಏಪ್ರಿಲ್​ನಲ್ಲಿ ಸೆಟ್ಟೇರಿದ ಈ ಚಿತ್ರಕ್ಕೆ ಈಗಾಗಲೇ ಬಹುತೇಕ ಶೂಟಿಂಗ್​ ಮುಗಿದಿದೆ.

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​
ಪುನೀತ್​ ರಾಜ್​ಕುಮಾರ್​, ಸತ್ಯ ಪ್ರಕಾಶ್​
ಮದನ್​ ಕುಮಾರ್​
| Updated By: Digi Tech Desk

Updated on:Jun 28, 2021 | 9:49 AM

Share

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ನಿರ್ದೇಶಕ ಸತ್ಯ ಪ್ರಕಾಶ್​. ಆ ಸಿನಿಮಾದಿಂದ ಅವರಿಗೆ ದೊಡ್ಡ ಖ್ಯಾತಿ ಸಿಕ್ಕಿತ್ತು. ಬಳಿಕ ‘ಒಂದಲ್ಲ ಎರಡಲ್ಲ’ ಚಿತ್ರಕ್ಕೆ ನಿರ್ದೇಶನ ಮಾಡಿ ಅವರು ಗಮನ ಸೆಳೆದರು. ನಂತರ ಅವರು ಪುನೀತ್​ ರಾಜ್​ಕುಮಾರ್​ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ ಕಾರಣಾಂತರಗಳಿಂದ ಆ ಚಿತ್ರ ಸೆಟ್ಟೇರಲೇ ಇಲ್ಲ. ಸದ್ಯಕ್ಕೆ ಆ ಪ್ರಾಜೆಕ್ಟ್​ ಮುಂದಕ್ಕೆ ಹೋಗಿದೆ. ಅದರ ನಡುವೆ ಮತ್ತೊಂದು ಸಿನಿಮಾಗಾಗಿ ಪುನೀತ್​ ಮತ್ತು ಸತ್ಯ ಪ್ರಕಾಶ್​ ಕೈ ಜೋಡಿಸಿದ್ದಾರೆ.

ಸತ್ಯ ಪ್ರಕಾಶ್​ ಅವರು ಈಗ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಕಥೆ ಕೇಳಿ ಇಷ್ಟಪಟ್ಟಿರುವ ಪುನೀತ್​ ಅವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್ಸ್​, ಸತ್ಯ ಮತ್ತು ಮಯೂರ ಪಿಕ್ಚರ್ಸ್​ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿವೆ. ‘ರಾಮಾ ರಾಮಾ ರೇ’ ಸಿನಿಮಾದಲ್ಲಿ ನಟಿಸಿದ್ದ ನಟರಾಜ್​ ಮತ್ತು ಧರ್ಮಣ್ಣ ಅವರು ‘ಮ್ಯಾನ್​ ಆಫ್​ ದಿ ಮ್ಯಾಚ್​’ನಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನುಳಿದವರೆಲ್ಲ ಹೊಸ ಕಲಾವಿದರು.

ಕೊರೊನಾ ಎರಡನೇ ಅಲೆ ಹಾವಳಿ ನಂತರ, ಲಾಕ್​ಡೌನ್​ ಸಡಿಲಿಕೆ ಆಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಶೂಟಿಂಗ್​ ಆರಂಭಿಸಲಾಯಿತು. ಏಪ್ರಿಲ್​ನಲ್ಲಿ ಸೆಟ್ಟೇರಿದ ಈ ಚಿತ್ರಕ್ಕೆ ಈಗಾಗಲೇ ಬಹುತೇಕ ಶೂಟಿಂಗ್​ ಮುಗಿದಿದೆ. ಉಳಿದ ಕೆಲವು ದೃಶ್ಯಗಳನ್ನು ಶೀಘ್ರದಲ್ಲೇ ಚಿತ್ರೀಕರಿಸಲಾಗುವುದು. ಜೊತೆಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಇಂಥ ಹೊಸಬರ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಪುನೀತ್​ ಅವರಿಗೆ ಖುಷಿ ಇದೆ. ಇತ್ತೀಚೆಗೆ ಅವರು ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ್ದರು. ಇಡೀ ತಂಡಕ್ಕೆ ಶುಭ ಹಾರೈಸಿದರು.

ಇನ್ನು, ಪುನೀತ್​ಗೆ ಸತ್ಯಪ್ರಕಾಶ್​ ನಿರ್ದೇಶನ ಮಾಡಬೇಕಿರುವ ಸಿನಿಮಾ ಸದ್ಯಕ್ಕೆ ಕಾರಣಾಂತರಗಳಿಂದ ಮುಂದಕ್ಕೆ ಹೇಗಿದೆ. ಇನ್ನೇನು ಆ ಸಿನಿಮಾದ ಸ್ಕ್ರಿಪ್ಟ್​ ಅಂತಿಮವಾಗಬೇಕು ಎನ್ನುವಷ್ಟರಲ್ಲಿ ಕಳೆದ ವರ್ಷ ಲಾಕ್​ಡೌನ್​ ಆಗಿತ್ತು. ಪರಿಣಾಮ, ಪುನೀತ್​ ಅವರ ಹಲವು ಚಿತ್ರಗಳ ಕೆಲಸಗಳು ಮುಂದಕ್ಕೆ ಹೋದವು. ಹಾಗಾಗಿ ಸತ್ಯಪ್ರಕಾಶ್​ ನಿರ್ದೇಶನದಲ್ಲಿ ಪುನೀತ್​ ನಟಿಸಬೇಕಿರುವ ಚಿತ್ರ ಸೆಟ್ಟೇರುವುದು ಇನ್ನಷ್ಟು ತಡವಾಗಲಿದೆ. ಈಗ ಇಬ್ಬರೂ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಜೊತೆಯಾಗಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ

ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Published On - 9:31 am, Mon, 28 June 21

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?