AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

Man Of The Match: ಕೊರೊನಾ ಎರಡನೇ ಅಲೆ ಹಾವಳಿ ನಂತರ, ಲಾಕ್​ಡೌನ್​ ಸಡಿಲಿಕೆ ಆಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಶೂಟಿಂಗ್​ ಆರಂಭಿಸಲಾಯಿತು. ಏಪ್ರಿಲ್​ನಲ್ಲಿ ಸೆಟ್ಟೇರಿದ ಈ ಚಿತ್ರಕ್ಕೆ ಈಗಾಗಲೇ ಬಹುತೇಕ ಶೂಟಿಂಗ್​ ಮುಗಿದಿದೆ.

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​
ಪುನೀತ್​ ರಾಜ್​ಕುಮಾರ್​, ಸತ್ಯ ಪ್ರಕಾಶ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Jun 28, 2021 | 9:49 AM

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ನಿರ್ದೇಶಕ ಸತ್ಯ ಪ್ರಕಾಶ್​. ಆ ಸಿನಿಮಾದಿಂದ ಅವರಿಗೆ ದೊಡ್ಡ ಖ್ಯಾತಿ ಸಿಕ್ಕಿತ್ತು. ಬಳಿಕ ‘ಒಂದಲ್ಲ ಎರಡಲ್ಲ’ ಚಿತ್ರಕ್ಕೆ ನಿರ್ದೇಶನ ಮಾಡಿ ಅವರು ಗಮನ ಸೆಳೆದರು. ನಂತರ ಅವರು ಪುನೀತ್​ ರಾಜ್​ಕುಮಾರ್​ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ ಕಾರಣಾಂತರಗಳಿಂದ ಆ ಚಿತ್ರ ಸೆಟ್ಟೇರಲೇ ಇಲ್ಲ. ಸದ್ಯಕ್ಕೆ ಆ ಪ್ರಾಜೆಕ್ಟ್​ ಮುಂದಕ್ಕೆ ಹೋಗಿದೆ. ಅದರ ನಡುವೆ ಮತ್ತೊಂದು ಸಿನಿಮಾಗಾಗಿ ಪುನೀತ್​ ಮತ್ತು ಸತ್ಯ ಪ್ರಕಾಶ್​ ಕೈ ಜೋಡಿಸಿದ್ದಾರೆ.

ಸತ್ಯ ಪ್ರಕಾಶ್​ ಅವರು ಈಗ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಕಥೆ ಕೇಳಿ ಇಷ್ಟಪಟ್ಟಿರುವ ಪುನೀತ್​ ಅವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್ಸ್​, ಸತ್ಯ ಮತ್ತು ಮಯೂರ ಪಿಕ್ಚರ್ಸ್​ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿವೆ. ‘ರಾಮಾ ರಾಮಾ ರೇ’ ಸಿನಿಮಾದಲ್ಲಿ ನಟಿಸಿದ್ದ ನಟರಾಜ್​ ಮತ್ತು ಧರ್ಮಣ್ಣ ಅವರು ‘ಮ್ಯಾನ್​ ಆಫ್​ ದಿ ಮ್ಯಾಚ್​’ನಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನುಳಿದವರೆಲ್ಲ ಹೊಸ ಕಲಾವಿದರು.

ಕೊರೊನಾ ಎರಡನೇ ಅಲೆ ಹಾವಳಿ ನಂತರ, ಲಾಕ್​ಡೌನ್​ ಸಡಿಲಿಕೆ ಆಗಿ ಚಿತ್ರೀಕರಣಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಶೂಟಿಂಗ್​ ಆರಂಭಿಸಲಾಯಿತು. ಏಪ್ರಿಲ್​ನಲ್ಲಿ ಸೆಟ್ಟೇರಿದ ಈ ಚಿತ್ರಕ್ಕೆ ಈಗಾಗಲೇ ಬಹುತೇಕ ಶೂಟಿಂಗ್​ ಮುಗಿದಿದೆ. ಉಳಿದ ಕೆಲವು ದೃಶ್ಯಗಳನ್ನು ಶೀಘ್ರದಲ್ಲೇ ಚಿತ್ರೀಕರಿಸಲಾಗುವುದು. ಜೊತೆಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಇಂಥ ಹೊಸಬರ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಪುನೀತ್​ ಅವರಿಗೆ ಖುಷಿ ಇದೆ. ಇತ್ತೀಚೆಗೆ ಅವರು ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ್ದರು. ಇಡೀ ತಂಡಕ್ಕೆ ಶುಭ ಹಾರೈಸಿದರು.

ಇನ್ನು, ಪುನೀತ್​ಗೆ ಸತ್ಯಪ್ರಕಾಶ್​ ನಿರ್ದೇಶನ ಮಾಡಬೇಕಿರುವ ಸಿನಿಮಾ ಸದ್ಯಕ್ಕೆ ಕಾರಣಾಂತರಗಳಿಂದ ಮುಂದಕ್ಕೆ ಹೇಗಿದೆ. ಇನ್ನೇನು ಆ ಸಿನಿಮಾದ ಸ್ಕ್ರಿಪ್ಟ್​ ಅಂತಿಮವಾಗಬೇಕು ಎನ್ನುವಷ್ಟರಲ್ಲಿ ಕಳೆದ ವರ್ಷ ಲಾಕ್​ಡೌನ್​ ಆಗಿತ್ತು. ಪರಿಣಾಮ, ಪುನೀತ್​ ಅವರ ಹಲವು ಚಿತ್ರಗಳ ಕೆಲಸಗಳು ಮುಂದಕ್ಕೆ ಹೋದವು. ಹಾಗಾಗಿ ಸತ್ಯಪ್ರಕಾಶ್​ ನಿರ್ದೇಶನದಲ್ಲಿ ಪುನೀತ್​ ನಟಿಸಬೇಕಿರುವ ಚಿತ್ರ ಸೆಟ್ಟೇರುವುದು ಇನ್ನಷ್ಟು ತಡವಾಗಲಿದೆ. ಈಗ ಇಬ್ಬರೂ ‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಜೊತೆಯಾಗಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ

ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Published On - 9:31 am, Mon, 28 June 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ