AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಚ್ಚು-ಅಪ್ಪು ಫ್ಯಾನ್ ವಾರ್.. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಾಗ್ವಾದ

ಪುನೀತ್ ರಾಜ್‍ಕುಮಾರ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ಶುರುವಾಗಿದೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ಅಂತ್ಯಗೊಂಡು ದಚ್ಚು-ಅಪ್ಪು ಫ್ಯಾನ್ ವಾರ್ ನಡೆಯುತ್ತಿದೆ.

ದಚ್ಚು-ಅಪ್ಪು ಫ್ಯಾನ್ ವಾರ್.. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಾಗ್ವಾದ
ದಚ್ಚು-ಅಪ್ಪು ಫ್ಯಾನ್ ವಾರ್
ಆಯೇಷಾ ಬಾನು
|

Updated on:Apr 02, 2021 | 12:26 PM

Share

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಭಿನಯದ ಯುವರತ್ನ ರಿಲೀಸ್ ಬೆನ್ನಲ್ಲೇ ಫ್ಯಾನ್ಸ್​ ವಾರ್ ಶುರುವಾಗಿದೆ. ಪುನೀತ್ ರಾಜ್‍ಕುಮಾರ್ ಮತ್ತು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಕಚ್ಚಾಡಿಕೊಂಡಿದ್ದಾರೆ.

ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅಭಿನಯದ ಯುವರತ್ನ ಸಿನಿಮಾ ರಿಲೀಸ್ ಆಗಿದೆ. ಭರ್ಜರಿ ಓಪನಿಂಗ್‌ ಪಡೆದ ಯುವರತ್ನ ಸಿನಿಮಾ ನೋಡಿದ ಫ್ಯಾನ್ಸ್ ಇದು ಪುನೀತ್‌ ರಾಜ್‌ಕುಮಾರ್‌ಗೆ ತಕ್ಕನಾದ ಸಿನಿಮಾ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿ ಸಂಭ್ರಮಿಸಿದ್ದರು.

ಆದ್ರೆ ಈಗ ಪುನೀತ್ ರಾಜ್‍ಕುಮಾರ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ಶುರುವಾಗಿದೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ಅಂತ್ಯಗೊಂಡು ದಚ್ಚು-ಅಪ್ಪು ಫ್ಯಾನ್ ವಾರ್ ನಡೆಯುತ್ತಿದೆ.

ಡಿ ಬಾಸ್ ದರ್ಶನ್ ಅಭಿಮಾನಿಯೊಬ್ಬ ಯುವರತ್ನ ಸಿನಿಮಾ ಕರ್ನಾಟಕದಲ್ಲಿ ಹೇಗೆ ಓಡುತ್ತಿದೆ ನೋಡಿ ಎಂಬಂತೆ ಟ್ವಿಟರ್ ಖಾತೆಯಲ್ಲಿ ಎಡಿಟ್ ಮಾಡಲಾದ ಭಕ್ತ ಪ್ರಹ್ಲಾದ ಸಿನಿಮಾದ ದೃಶ್ಯವನ್ನು ಫೋಸ್ಟ್ ಮಾಡಿದ್ದ. ಇದನ್ನು ನೋಡಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ನಾಜೂಕಾಗಿ ದರ್ಶನ್ ಅಭಿಮಾನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ಫೋಸ್ಟ್ ಡಿಲೀಟ್ ಮಾಡುವಂತೆ ತಿಳಿಸಿದ್ದಾರೆ. ಈ ವೇಳೆ ಅಭಿಮಾನಿಗಳ ನಡುವೆ ಮಾತಿನ ಸಮರ ನಡೆದಿದೆ.

ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ಯುವರತ್ನ ಇನ್ನು ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿ ಒಟ್ಟು 600ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಯುವರತ್ನ ತೆರೆಕಂಡಿದೆ. ಅದ್ರಲ್ಲೂ ಮೊದಲ ದಿನ ಕರ್ನಾಟಕದ ಬಹುತೇಕ ಎಲ್ಲಾ ಚಿತ್ರಮಂದಿರಗಳೂ ಹೌಸ್‌ಫುಲ್‌ ಬೋರ್ಡ್ ಹಾಕಿದ್ವು. ಅಂದ್ರೆ ಮೊದಲ ದಿನ ಚಿತ್ರ ತಂಡದ ನಿರೀಕ್ಷೆಯಂತೆ ಬಾಕ್ಸಾಫೀಸ್‌ ಭರ್ತಿಯಾಗಿದೆ. ಇನ್ನು ಬಹುತೇಕ ಕಡೆಯಲ್ಲಿ ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಕೂಡ ಆಗಿದೆ. ಯುವರತ್ನ ಪಕ್ಕಾ ಕೌಟುಂಬಿಕ ಸಿನಿಮಾ. ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಿರೋ ಸಂದೇಶ ಹೊತ್ತಿರೋ ಸಿನಿಮಾ.

ಯುವರತ್ನ ಸಂತೋಷ್‌ ಆಂದನ್‌ ರಾಮ್‌ ಮತ್ತು ಪುನೀತ್‌ ರಾಜ್‌ಕುಮಾರ್‌ ಕಾಂಬಿನೇಷನ್‌ನ 2ನೇ ಸಿನಿಮಾ. ರಾಜಕುಮಾರ ಸಿನಿಮಾ ಸತತ 100 ದಿನಗಳ ಕಾಲ ಪ್ರದರ್ಶನ ಕಂಡು ಬಾಕ್ಸಾಫೀಸ್‌ ನಲ್ಲಿ ಹೊಸ ದಾಖಲೆ ಹುಟ್ಟುಹಾಕಿತ್ತು. ಈಗ ಯುವರತ್ನನ ಸರದಿ. ಯುವರತ್ನ ಚಿತ್ರ ಕೂಡ ಸೂಪರ್‌ ಹಿಟ್‌ ಲಿಸ್ಟ್ ಸೇರೋ ಭರವಸೆ ಮೂಡಿಸಿದೆ.

Puneeth Rajkumar And Darshan Fans

ದಚ್ಚು-ಅಪ್ಪು ಫ್ಯಾನ್ ವಾರ್

Puneeth Rajkumar And Darshan Fans

ದಚ್ಚು-ಅಪ್ಪು ಫ್ಯಾನ್ ವಾರ್

Puneeth Rajkumar And Darshan Fans

ದಚ್ಚು-ಅಪ್ಪು ಫ್ಯಾನ್ ವಾರ್

ಇದನ್ನೂ ಓದಿ: ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ

(Puneeth Rajkumar And Darshan Fans Talk war in Social Media)

Published On - 12:10 pm, Fri, 2 April 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?