AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಚ್ಚು-ಅಪ್ಪು ಫ್ಯಾನ್ ವಾರ್.. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಾಗ್ವಾದ

ಪುನೀತ್ ರಾಜ್‍ಕುಮಾರ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ಶುರುವಾಗಿದೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ಅಂತ್ಯಗೊಂಡು ದಚ್ಚು-ಅಪ್ಪು ಫ್ಯಾನ್ ವಾರ್ ನಡೆಯುತ್ತಿದೆ.

ದಚ್ಚು-ಅಪ್ಪು ಫ್ಯಾನ್ ವಾರ್.. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಾಗ್ವಾದ
ದಚ್ಚು-ಅಪ್ಪು ಫ್ಯಾನ್ ವಾರ್
ಆಯೇಷಾ ಬಾನು
|

Updated on:Apr 02, 2021 | 12:26 PM

Share

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಭಿನಯದ ಯುವರತ್ನ ರಿಲೀಸ್ ಬೆನ್ನಲ್ಲೇ ಫ್ಯಾನ್ಸ್​ ವಾರ್ ಶುರುವಾಗಿದೆ. ಪುನೀತ್ ರಾಜ್‍ಕುಮಾರ್ ಮತ್ತು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ಕಚ್ಚಾಡಿಕೊಂಡಿದ್ದಾರೆ.

ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಅಭಿನಯದ ಯುವರತ್ನ ಸಿನಿಮಾ ರಿಲೀಸ್ ಆಗಿದೆ. ಭರ್ಜರಿ ಓಪನಿಂಗ್‌ ಪಡೆದ ಯುವರತ್ನ ಸಿನಿಮಾ ನೋಡಿದ ಫ್ಯಾನ್ಸ್ ಇದು ಪುನೀತ್‌ ರಾಜ್‌ಕುಮಾರ್‌ಗೆ ತಕ್ಕನಾದ ಸಿನಿಮಾ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿ ಸಂಭ್ರಮಿಸಿದ್ದರು.

ಆದ್ರೆ ಈಗ ಪುನೀತ್ ರಾಜ್‍ಕುಮಾರ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ಶುರುವಾಗಿದೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ಅಂತ್ಯಗೊಂಡು ದಚ್ಚು-ಅಪ್ಪು ಫ್ಯಾನ್ ವಾರ್ ನಡೆಯುತ್ತಿದೆ.

ಡಿ ಬಾಸ್ ದರ್ಶನ್ ಅಭಿಮಾನಿಯೊಬ್ಬ ಯುವರತ್ನ ಸಿನಿಮಾ ಕರ್ನಾಟಕದಲ್ಲಿ ಹೇಗೆ ಓಡುತ್ತಿದೆ ನೋಡಿ ಎಂಬಂತೆ ಟ್ವಿಟರ್ ಖಾತೆಯಲ್ಲಿ ಎಡಿಟ್ ಮಾಡಲಾದ ಭಕ್ತ ಪ್ರಹ್ಲಾದ ಸಿನಿಮಾದ ದೃಶ್ಯವನ್ನು ಫೋಸ್ಟ್ ಮಾಡಿದ್ದ. ಇದನ್ನು ನೋಡಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ನಾಜೂಕಾಗಿ ದರ್ಶನ್ ಅಭಿಮಾನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ಫೋಸ್ಟ್ ಡಿಲೀಟ್ ಮಾಡುವಂತೆ ತಿಳಿಸಿದ್ದಾರೆ. ಈ ವೇಳೆ ಅಭಿಮಾನಿಗಳ ನಡುವೆ ಮಾತಿನ ಸಮರ ನಡೆದಿದೆ.

ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ಯುವರತ್ನ ಇನ್ನು ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿ ಒಟ್ಟು 600ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಯುವರತ್ನ ತೆರೆಕಂಡಿದೆ. ಅದ್ರಲ್ಲೂ ಮೊದಲ ದಿನ ಕರ್ನಾಟಕದ ಬಹುತೇಕ ಎಲ್ಲಾ ಚಿತ್ರಮಂದಿರಗಳೂ ಹೌಸ್‌ಫುಲ್‌ ಬೋರ್ಡ್ ಹಾಕಿದ್ವು. ಅಂದ್ರೆ ಮೊದಲ ದಿನ ಚಿತ್ರ ತಂಡದ ನಿರೀಕ್ಷೆಯಂತೆ ಬಾಕ್ಸಾಫೀಸ್‌ ಭರ್ತಿಯಾಗಿದೆ. ಇನ್ನು ಬಹುತೇಕ ಕಡೆಯಲ್ಲಿ ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಕೂಡ ಆಗಿದೆ. ಯುವರತ್ನ ಪಕ್ಕಾ ಕೌಟುಂಬಿಕ ಸಿನಿಮಾ. ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಿರೋ ಸಂದೇಶ ಹೊತ್ತಿರೋ ಸಿನಿಮಾ.

ಯುವರತ್ನ ಸಂತೋಷ್‌ ಆಂದನ್‌ ರಾಮ್‌ ಮತ್ತು ಪುನೀತ್‌ ರಾಜ್‌ಕುಮಾರ್‌ ಕಾಂಬಿನೇಷನ್‌ನ 2ನೇ ಸಿನಿಮಾ. ರಾಜಕುಮಾರ ಸಿನಿಮಾ ಸತತ 100 ದಿನಗಳ ಕಾಲ ಪ್ರದರ್ಶನ ಕಂಡು ಬಾಕ್ಸಾಫೀಸ್‌ ನಲ್ಲಿ ಹೊಸ ದಾಖಲೆ ಹುಟ್ಟುಹಾಕಿತ್ತು. ಈಗ ಯುವರತ್ನನ ಸರದಿ. ಯುವರತ್ನ ಚಿತ್ರ ಕೂಡ ಸೂಪರ್‌ ಹಿಟ್‌ ಲಿಸ್ಟ್ ಸೇರೋ ಭರವಸೆ ಮೂಡಿಸಿದೆ.

Puneeth Rajkumar And Darshan Fans

ದಚ್ಚು-ಅಪ್ಪು ಫ್ಯಾನ್ ವಾರ್

Puneeth Rajkumar And Darshan Fans

ದಚ್ಚು-ಅಪ್ಪು ಫ್ಯಾನ್ ವಾರ್

Puneeth Rajkumar And Darshan Fans

ದಚ್ಚು-ಅಪ್ಪು ಫ್ಯಾನ್ ವಾರ್

ಇದನ್ನೂ ಓದಿ: ಯುವರತ್ನಕ್ಕೆ ಮೊದಲ ದಿನವೇ ಶುರುವಾಯ್ತು ಪೈರಸಿ ಕಾಟ; ಎಲ್ಲೇ ಪೈರಸಿ ಲಿಂಕ್ ಸಿಕ್ಕರೂ ರಿಪೋರ್ಟ್ ಮಾಡಿ ಎಂದ ಚಿತ್ರತಂಡ

(Puneeth Rajkumar And Darshan Fans Talk war in Social Media)

Published On - 12:10 pm, Fri, 2 April 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!