ಸಿನಿಮಾ ಕೆಲಸಕ್ಕೆ ಬ್ರೇಕ್​ ನೀಡಿ ಮಂತ್ರಾಲಯದ ರಾಯರ ದರ್ಶನ ಪಡೆದ ಪುನೀತ್​-ಜಗ್ಗೇಶ್​

ಮಂತ್ರಾಲಯ ರಾಯರ ಬೃಂದಾವನದ ದರ್ಶನಕ್ಕೆ ಸಹೋದರ ಪುನೀತ್​, ಸಂತೋಷ್​​ ಆನಂದರಾಮ್​, ಕಾರ್ತಿಕ್ ಜೊತೆ ಹೊರಟಿದ್ದೇನೆ. ಶುಭದಿನ ಶುಭೋದಯ ಎಂದು ಕಾರಿನಲ್ಲಿ ಪ್ರಯಾಣಿಸುತ್ತಿರುವ ಫೋಟೋ ಹಂಚಿಕೊಂಡಿದ್ದರು.

ಸಿನಿಮಾ ಕೆಲಸಕ್ಕೆ ಬ್ರೇಕ್​ ನೀಡಿ ಮಂತ್ರಾಲಯದ ರಾಯರ ದರ್ಶನ ಪಡೆದ ಪುನೀತ್​-ಜಗ್ಗೇಶ್​
ರಾಯರ ದರ್ಶನ್​ ಪಡೆದ ಜಗ್ಗೇಶ್​-ಪುನೀತ್​

Updated on: Apr 05, 2021 | 7:48 PM

ಚಿತ್ರಮಂದಿರಗಳಿಗೆ ಹೇರಿದ್ದ ನಿರ್ಬಂಧ ತೆರವಿಗೆ ಪುನೀತ್​ ರಾಜ್​ಕುಮಾರ್​ ತುಂಬಾನೇ ಹೋರಾಡಿದ್ದರು. ಪುನೀತ್​ ಹಾಗೂ ಚಿತ್ರರಂಗದ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಿತ್ತು. ಇದಾದ ನಂತರ ರಿಲೀಫ್​ ಆಗಿದ್ದ ಪುನೀತ್​ ರಾಜ್​ಕುಮಾರ್​ ಮಂತ್ರಾಲಯಕ್ಕೆ ತೆರಳಿ ಗುರು ರಾಘವೇಂದ್ರ ರಾಯರ ದರ್ಶನ ಪಡೆದಿದ್ದಾರೆ. ಇವರಿಗೆ ನಟ ಜಗ್ಗೇಶ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ಹೊಂಬಾಳೆ ಫಿಲ್ಮ್ಸ್​ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ ಸಾತ್​ ನೀಡಿದ್ದಾರೆ.

ಇಂದು (ಏಪ್ರಿಲ್​ 05) ಮುಂಜಾನೆಯೇ ಮಂತ್ರಾಲಯಕ್ಕೆ ತೆರಳುತ್ತಿರುವ ಬಗ್ಗೆ ನಟ ಜಗ್ಗೇಶ್​ ಟ್ವೀಟ್​ ಮಾಡಿದ್ದರು. ಮಂತ್ರಾಲಯ ರಾಯರ ಬೃಂದಾವನದ ದರ್ಶನಕ್ಕೆ ಸಹೋದರ ಪುನೀತ್​, ಸಂತೋಷ್​​ ಆನಂದರಾಮ್​, ಕಾರ್ತಿಕ್ ಜೊತೆ ಹೊರಟಿದ್ದೇನೆ. ಶುಭದಿನ ಶುಭೋದಯ ಎಂದು ಕಾರಿನಲ್ಲಿ ಪ್ರಯಾಣಿಸುತ್ತಿರುವ ಫೋಟೋ ಹಂಚಿಕೊಂಡಿದ್ದರು.

ಮಧ್ಯಾಹ್ನದ ವೇಳೆಗೆ ರಾಯರ ದರ್ಶನಪಡೆಯುತ್ತಿರುವ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಗುರುವಾರಷ್ಟೇ (ಏಪ್ರಿಲ್​ 1) ತೆರೆಗೆ ಬಂದಿತ್ತು. ಹೀಗಿರುವಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತಂದಿತ್ತು. ಚಿತ್ರಮಂದಿರದಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶ ಹೊರಡಿಸಿತ್ತು. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಸಮಾಧಾನ ಹೊರ ಹಾಕಿದ್ದರು. ಜತೆಗೆ ಹೌಸ್​ಫುಲ್​ಗೆ ಅವಕಾಶ ಕೋರಿದ್ದರು. ಸರ್ಕಾರ ಈ ಒತ್ತಾಯಕ್ಕೆ ಮಣಿದು, ಏಪ್ರಿಲ್​ 6ರವರೆಗೆ ಚಿತ್ರಮಂದಿರ ಹೌಸ್​ಫುಲ್​ಗೆ ಅವಕಾಶ ನೀಡಿದೆ.

ಜಗ್ಗೇಶ್​ ತೋತಾಪುರಿ ಹಾಗೂ ರಂಗನಾಯಕ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಪುನೀತ್​ ರಾಜ್​ಕುಮಾರ್​ ಶೀಘ್ರವೇ ಜೇಮ್ಸ್​ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಟೈಗರ್​ ಪ್ರಭಾಕರ್​ ಜನ್ಮದಿನ: ಅಣ್ಣನಂತೆ ಭುಜಕೊಟ್ಟರು; ಅಮ್ಮ ತೀರಿಕೊಂಡಾಗ ಸಂತೈಸಿದರು! ಜಗ್ಗೇಶ್​ಗೆ ಪ್ರಭಣ್ಣನ ನೆನಪು

Yuvarathnaa: ಮೃತ ಮಗನ ಫೋಟೋ ಜೊತೆ ಯುವರತ್ನ ನೋಡಿದ ಪಾಲಕರು; ಪುನೀತ್​ ಭಾವುಕ!

Published On - 7:46 pm, Mon, 5 April 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us