AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ

ರಾಜ್​ಕುಮಾರ್ ಹಾಗೂ ಪುನೀತ್ ಇಂದು ನಮ್ಮ ಜೊತೆ ಇಲ್ಲ. ಅವರು ಇಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಎಂದಿಗೂ ಮಾಯ ಆಗುವಂಥದ್ದಲ್ಲ. ಅವರ ಹಳೆಯ ಫೋಟೋಗಳು ವೈರಲ್ ಆಗುತ್ತಾ ಇರುತ್ತವೆ. ಈಗ ಅವರ ಹಳೆಯ ಫೋಟೋ ಒಂದು ವೈರಲ್ ಆಗಿದೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ
ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ
ರಾಜೇಶ್ ದುಗ್ಗುಮನೆ
|

Updated on: Sep 30, 2024 | 11:02 AM

Share

ರಾಜ್​ಕುಮಾರ್ ಅವರಿಗೆ ಹಾಗೂ ಪುನೀತ್ ರಾಜ್​ಕುಮಾರ್​ಗೆ ಊಟದ ಬಗ್ಗೆ ವಿಶೇಷ ಪ್ರೀತಿ ಇತ್ತು. ರಾಜ್​ಕುಮಾರ್ ಊಟ ಮಾಡೋಕೆ ಕುಳಿತರೆ ಒಂದೇ ಒಂದು ಅಗಳು ಕೂಡ ಅವರು ಬಟ್ಟಲಮೇಲೆ ಇರೋಕೆ ಬಿಡುತ್ತಿರಲಿಲ್ಲ. ಈಗ ರಾಜ್​ಕುಮಾರ್ ಹಾಗೂ ಪುನೀತ್ ಒಟ್ಟಾಗಿ ಕುಳಿತು ಊಟ ಮಾಡುತ್ತಿರುವ ಅಪರೂಪದ ಫೋಟೋ ವೈರಲ್ ಆಗಿದೆ. ಅವರಿಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ.

ಈ ಫೋಟೋದಲ್ಲಿ ಇರೋದು ಬೇರೆ ಯಾರೂ ಅಲ್ಲ ಶಾಸಕ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿರೋ ಜಮೀರ್ ಅಹ್ಮದ್. ಸ್ವತಃ ಜಮೀರ್ ಅಹ್ಮದ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ರಾಜ್​ಕುಮಾರ್ ಕುಟುಂಬವನ್ನು ಆಮಂತ್ರಿಸಿ ಅವರು ಊಟ ಬಡಿಸಿದ್ದಾರೆ.

2 ಫೋಟೋಗಳನ್ನು ಜಮೀರ್ ಹಂಚಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ರಾಜ್​ಕುಮಾರ್ ಹಾಗೂ ಪುನೀತ್ ಇದ್ದಾರೆ. ಪುನೀತ್ ಎದುರಲ್ಲಿ ಮುದ್ದೆ ಇದೆ. ನಾನ್ ವೆಜ್​ ಊಟವನ್ನು ಜಮೀರ್ ಉಣ ಬಡಿಸುತ್ತಿದ್ದಾರೆ. ಇನ್ನು, ರಾಜ್​ಕುಮಾರ್ ಪ್ಲೇಟ್​ನಲ್ಲೂ ಮುದ್ದೆ ಹಾಗೂ ನಾನ್​ವೆಜ್ ಇದೆ. ಅವರು ಆನಂದಿಸಿ ಊಟ ಮಾಡುತ್ತಿದ್ದಾರೆ.

ಮತ್ತೊಂದು ಫೋಟೋದಲ್ಲಿ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಜಮೀರ್ ಅಹ್ಮದ್ ಇದ್ದಾರೆ. ಜಮೀರ್ ನಗುನಗುತ್ತಾ ನಿಂತಿದ್ದಾರೆ. ‘ಕನ್ನಡ ಚಿತ್ರರಂಗದ ಲೆಜೆಂಡ್ಸ್ ದಿವಂಗತ ಡಾ.ರಾಜಕುಮಾರ್ ಮತ್ತು ದಿವಂಗತ ಪುನೀತ್ ಕುಮಾರ್ ಅವರೊಂದಿಗೆ ಮರೆಯಲಾಗದ ಕೆಲವು ಸುವರ್ಣ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್

ರಾಜ್​ಕುಮಾರ್ ಹಾಗೂ ಪುನೀತ್ ಇಂದು ನಮ್ಮ ಜೊತೆ ಇಲ್ಲ. ಅವರು ಇಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಎಂದಿಗೂ ಮಾಯ ಆಗುವಂಥದ್ದಲ್ಲ. ಪುನೀತ್ ಅವರು ನಿಧನ ಹೊಂದಿ ಮೂರು ವರ್ಷ ಕಳೆಯುತ್ತಾ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ