AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ

ರಾಜ್​ಕುಮಾರ್ ಹಾಗೂ ಪುನೀತ್ ಇಂದು ನಮ್ಮ ಜೊತೆ ಇಲ್ಲ. ಅವರು ಇಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಎಂದಿಗೂ ಮಾಯ ಆಗುವಂಥದ್ದಲ್ಲ. ಅವರ ಹಳೆಯ ಫೋಟೋಗಳು ವೈರಲ್ ಆಗುತ್ತಾ ಇರುತ್ತವೆ. ಈಗ ಅವರ ಹಳೆಯ ಫೋಟೋ ಒಂದು ವೈರಲ್ ಆಗಿದೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ
ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ
ರಾಜೇಶ್ ದುಗ್ಗುಮನೆ
|

Updated on: Sep 30, 2024 | 11:02 AM

Share

ರಾಜ್​ಕುಮಾರ್ ಅವರಿಗೆ ಹಾಗೂ ಪುನೀತ್ ರಾಜ್​ಕುಮಾರ್​ಗೆ ಊಟದ ಬಗ್ಗೆ ವಿಶೇಷ ಪ್ರೀತಿ ಇತ್ತು. ರಾಜ್​ಕುಮಾರ್ ಊಟ ಮಾಡೋಕೆ ಕುಳಿತರೆ ಒಂದೇ ಒಂದು ಅಗಳು ಕೂಡ ಅವರು ಬಟ್ಟಲಮೇಲೆ ಇರೋಕೆ ಬಿಡುತ್ತಿರಲಿಲ್ಲ. ಈಗ ರಾಜ್​ಕುಮಾರ್ ಹಾಗೂ ಪುನೀತ್ ಒಟ್ಟಾಗಿ ಕುಳಿತು ಊಟ ಮಾಡುತ್ತಿರುವ ಅಪರೂಪದ ಫೋಟೋ ವೈರಲ್ ಆಗಿದೆ. ಅವರಿಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ.

ಈ ಫೋಟೋದಲ್ಲಿ ಇರೋದು ಬೇರೆ ಯಾರೂ ಅಲ್ಲ ಶಾಸಕ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿರೋ ಜಮೀರ್ ಅಹ್ಮದ್. ಸ್ವತಃ ಜಮೀರ್ ಅಹ್ಮದ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ರಾಜ್​ಕುಮಾರ್ ಕುಟುಂಬವನ್ನು ಆಮಂತ್ರಿಸಿ ಅವರು ಊಟ ಬಡಿಸಿದ್ದಾರೆ.

2 ಫೋಟೋಗಳನ್ನು ಜಮೀರ್ ಹಂಚಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ರಾಜ್​ಕುಮಾರ್ ಹಾಗೂ ಪುನೀತ್ ಇದ್ದಾರೆ. ಪುನೀತ್ ಎದುರಲ್ಲಿ ಮುದ್ದೆ ಇದೆ. ನಾನ್ ವೆಜ್​ ಊಟವನ್ನು ಜಮೀರ್ ಉಣ ಬಡಿಸುತ್ತಿದ್ದಾರೆ. ಇನ್ನು, ರಾಜ್​ಕುಮಾರ್ ಪ್ಲೇಟ್​ನಲ್ಲೂ ಮುದ್ದೆ ಹಾಗೂ ನಾನ್​ವೆಜ್ ಇದೆ. ಅವರು ಆನಂದಿಸಿ ಊಟ ಮಾಡುತ್ತಿದ್ದಾರೆ.

ಮತ್ತೊಂದು ಫೋಟೋದಲ್ಲಿ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಜಮೀರ್ ಅಹ್ಮದ್ ಇದ್ದಾರೆ. ಜಮೀರ್ ನಗುನಗುತ್ತಾ ನಿಂತಿದ್ದಾರೆ. ‘ಕನ್ನಡ ಚಿತ್ರರಂಗದ ಲೆಜೆಂಡ್ಸ್ ದಿವಂಗತ ಡಾ.ರಾಜಕುಮಾರ್ ಮತ್ತು ದಿವಂಗತ ಪುನೀತ್ ಕುಮಾರ್ ಅವರೊಂದಿಗೆ ಮರೆಯಲಾಗದ ಕೆಲವು ಸುವರ್ಣ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್

ರಾಜ್​ಕುಮಾರ್ ಹಾಗೂ ಪುನೀತ್ ಇಂದು ನಮ್ಮ ಜೊತೆ ಇಲ್ಲ. ಅವರು ಇಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಎಂದಿಗೂ ಮಾಯ ಆಗುವಂಥದ್ದಲ್ಲ. ಪುನೀತ್ ಅವರು ನಿಧನ ಹೊಂದಿ ಮೂರು ವರ್ಷ ಕಳೆಯುತ್ತಾ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ