AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ

ರಾಜ್​ಕುಮಾರ್ ಹಾಗೂ ಪುನೀತ್ ಇಂದು ನಮ್ಮ ಜೊತೆ ಇಲ್ಲ. ಅವರು ಇಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಎಂದಿಗೂ ಮಾಯ ಆಗುವಂಥದ್ದಲ್ಲ. ಅವರ ಹಳೆಯ ಫೋಟೋಗಳು ವೈರಲ್ ಆಗುತ್ತಾ ಇರುತ್ತವೆ. ಈಗ ಅವರ ಹಳೆಯ ಫೋಟೋ ಒಂದು ವೈರಲ್ ಆಗಿದೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ
ಅಣ್ಣಾವ್ರು, ಪುನೀತ್​ಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ; ಯಾರೆಂದು ಗುರುತಿಸಿ
ರಾಜೇಶ್ ದುಗ್ಗುಮನೆ
|

Updated on: Sep 30, 2024 | 11:02 AM

Share

ರಾಜ್​ಕುಮಾರ್ ಅವರಿಗೆ ಹಾಗೂ ಪುನೀತ್ ರಾಜ್​ಕುಮಾರ್​ಗೆ ಊಟದ ಬಗ್ಗೆ ವಿಶೇಷ ಪ್ರೀತಿ ಇತ್ತು. ರಾಜ್​ಕುಮಾರ್ ಊಟ ಮಾಡೋಕೆ ಕುಳಿತರೆ ಒಂದೇ ಒಂದು ಅಗಳು ಕೂಡ ಅವರು ಬಟ್ಟಲಮೇಲೆ ಇರೋಕೆ ಬಿಡುತ್ತಿರಲಿಲ್ಲ. ಈಗ ರಾಜ್​ಕುಮಾರ್ ಹಾಗೂ ಪುನೀತ್ ಒಟ್ಟಾಗಿ ಕುಳಿತು ಊಟ ಮಾಡುತ್ತಿರುವ ಅಪರೂಪದ ಫೋಟೋ ವೈರಲ್ ಆಗಿದೆ. ಅವರಿಗೆ ಊಟ ಬಡಿಸುತ್ತಿರೋದು ಖ್ಯಾತ ರಾಜಕಾರಣಿ.

ಈ ಫೋಟೋದಲ್ಲಿ ಇರೋದು ಬೇರೆ ಯಾರೂ ಅಲ್ಲ ಶಾಸಕ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿರೋ ಜಮೀರ್ ಅಹ್ಮದ್. ಸ್ವತಃ ಜಮೀರ್ ಅಹ್ಮದ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ರಾಜ್​ಕುಮಾರ್ ಕುಟುಂಬವನ್ನು ಆಮಂತ್ರಿಸಿ ಅವರು ಊಟ ಬಡಿಸಿದ್ದಾರೆ.

2 ಫೋಟೋಗಳನ್ನು ಜಮೀರ್ ಹಂಚಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ರಾಜ್​ಕುಮಾರ್ ಹಾಗೂ ಪುನೀತ್ ಇದ್ದಾರೆ. ಪುನೀತ್ ಎದುರಲ್ಲಿ ಮುದ್ದೆ ಇದೆ. ನಾನ್ ವೆಜ್​ ಊಟವನ್ನು ಜಮೀರ್ ಉಣ ಬಡಿಸುತ್ತಿದ್ದಾರೆ. ಇನ್ನು, ರಾಜ್​ಕುಮಾರ್ ಪ್ಲೇಟ್​ನಲ್ಲೂ ಮುದ್ದೆ ಹಾಗೂ ನಾನ್​ವೆಜ್ ಇದೆ. ಅವರು ಆನಂದಿಸಿ ಊಟ ಮಾಡುತ್ತಿದ್ದಾರೆ.

ಮತ್ತೊಂದು ಫೋಟೋದಲ್ಲಿ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಜಮೀರ್ ಅಹ್ಮದ್ ಇದ್ದಾರೆ. ಜಮೀರ್ ನಗುನಗುತ್ತಾ ನಿಂತಿದ್ದಾರೆ. ‘ಕನ್ನಡ ಚಿತ್ರರಂಗದ ಲೆಜೆಂಡ್ಸ್ ದಿವಂಗತ ಡಾ.ರಾಜಕುಮಾರ್ ಮತ್ತು ದಿವಂಗತ ಪುನೀತ್ ಕುಮಾರ್ ಅವರೊಂದಿಗೆ ಮರೆಯಲಾಗದ ಕೆಲವು ಸುವರ್ಣ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮುಂಗಾರು ಮಳೆ’ ಚಿತ್ರದ ಆಫರ್ ಗಣೇಶ್ ಕೈ ಸೇರಲು ಕಾರಣ ಆಗಿದ್ದೇ ಪುನೀತ್ ರಾಜ್​ಕುಮಾರ್

ರಾಜ್​ಕುಮಾರ್ ಹಾಗೂ ಪುನೀತ್ ಇಂದು ನಮ್ಮ ಜೊತೆ ಇಲ್ಲ. ಅವರು ಇಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಎಂದಿಗೂ ಮಾಯ ಆಗುವಂಥದ್ದಲ್ಲ. ಪುನೀತ್ ಅವರು ನಿಧನ ಹೊಂದಿ ಮೂರು ವರ್ಷ ಕಳೆಯುತ್ತಾ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು