AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಅಭಿಮಾನ: ಸಾವನ್ನಪ್ಪಿದ ಮಗನಿಗೂ ಟಿಕೆಟ್; ಫೊಟೋ ಇಟ್ಟುಕೊಂಡು ಯುವರತ್ನ ಸಿನಿಮಾ ನೋಡಿದ ಪೋಷಕರು

Yuvarathnaa, Puneeth Rajkumar: ಕೌಟುಂಬಿಕ ಸಿನಿಮಾ ವೀಕ್ಷಿಸುವ ಪ್ರೇಕ್ಷಕ ವರ್ಗಕ್ಕೆ ತುಂಬಾ ಹತ್ತಿರವಾದ ನಟ ಪುನೀತ್ ರಾಜ್​ಕುಮಾರ್ ಎಂದರೆ ತಪ್ಪಿಲ್ಲ. ಪುನೀತ್ ರಾಜ್​ಕುಮಾರ್​ಗೆ ದೊಡ್ಡ ಪ್ರಮಾಣದ ಫ್ಯಾಮಿಲಿ ಆಡಿಯನ್ಸ್ ಇದ್ದಾರೆ.

ಅಪ್ಪು ಅಭಿಮಾನ: ಸಾವನ್ನಪ್ಪಿದ ಮಗನಿಗೂ ಟಿಕೆಟ್; ಫೊಟೋ ಇಟ್ಟುಕೊಂಡು ಯುವರತ್ನ ಸಿನಿಮಾ ನೋಡಿದ ಪೋಷಕರು
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Apr 05, 2022 | 12:51 PM

Share

ಮೈಸೂರು: ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಉತ್ತಮ ಸಂದೇಶಕ್ಕಾಗಿ, ಅಪ್ಪು ಡ್ಯಾನ್ಸ್​ಗಾಗಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಚಲನಚಿತ್ರವನ್ನು ಮಕ್ಕಳು, ದೊಡ್ಡವರು ಎಂಬ ಭೇದವಿಲ್ಲದೆ ಎಲ್ಲರೂ ನೋಡುತ್ತಿದ್ದಾರೆ. ಈ ನಡುವೆ, ಮೃತಪಟ್ಟ ಮಗನ ಫೊಟೋದೊಂದಿಗೆ ಪೋಷಕರು ‘ಯುವರತ್ನ’ ಸಿನಿಮಾ ನೋಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಡಿಆರ್​​ಸಿ‌ ಮಲ್ಟಿಪ್ಲೆಕ್ಸ್​ನಲ್ಲಿ ಪೋಷಕರು ಮೃತ ಮಗನ ಭಾವಚಿತ್ರದೊಂದಿಗೆ ಸಿನಿಮಾ ನೋಡಿದ್ದಾರೆ.

ಕಳೆದ ಮೂರು ತಿಂಗಳ ಹಿಂದಷ್ಟೇ ಬಾಲಕ ಹರಿಕೃಷ್ಣನ್ ಎಂಬಾತ ಮೃತಪಟ್ಟಿದ್ದ. ಪುಟ್ಟ ಹುಡುಗ ಹರಿಕೃಷ್ಣನ್ ಪುನೀತ್ ರಾಜ್​ಕುಮಾರ್​ ಅಭಿಮಾನಿಯೂ ಆಗಿದ್ದ. ಅಷ್ಟೇ ಅಲ್ಲದೆ, ಆತ ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೊಟೋದೊಂದಿಗೆ ‘ಯುವರತ್ನ’ ವೀಕ್ಷಣೆ ಮಾಡಿದ್ದಾರೆ.

ಮೈಸೂರಿನ ನಿವಾಸಿ‌ ಮುರಳಿಧರ್ ಎಂಬುವವರ ಪುತ್ರ ಹರಿಕೃಷ್ಣನ್ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ. ಮಗ ಪುನೀತ್ ಅಭಿಮಾನಿಯಾಗಿದ್ದು, ಯುವರತ್ನ ನೋಡಬೇಕೆಂದು ಆಸೆಪಟ್ಟಿದ್ದ. ಮಗನ ಆಸೆಯನ್ನು ತೀರಿಸುವ ಸಲುವಾಗಿ ಫೊಟೋ ಇಟ್ಟುಕೊಂಡು ಪೋಷಕರು ಸಿನಿಮಾ ವೀಕ್ಷಿಸಿದ್ದಾರೆ. ಸಾವನಪ್ಪಿದ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು, ತಂದೆ-ತಾಯಿ-ಹಿರಿಯ ಮಗನ ಜೊತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಕೌಟುಂಬಿಕ ಸಿನಿಮಾ ವೀಕ್ಷಿಸುವ ಪ್ರೇಕ್ಷಕ ವರ್ಗಕ್ಕೆ ತುಂಬಾ ಹತ್ತಿರವಾದ ನಟ ಪುನೀತ್ ರಾಜ್​ಕುಮಾರ್ ಎಂದರೆ ತಪ್ಪಿಲ್ಲ. ಪುನೀತ್ ರಾಜ್​ಕುಮಾರ್​ಗೆ ದೊಡ್ಡ ಪ್ರಮಾಣದ ಫ್ಯಾಮಿಲಿ ಆಡಿಯನ್ಸ್ ಇದ್ದಾರೆ. ಮಕ್ಕಳು, ವಯಸ್ಕರು ಎನ್ನದೆ ತುಂಬಾ ಫ್ಯಾನ್ ಫಾಲೋವರ್ಸ್ ಪುನೀತ್​ಗೆ ಇದ್ದಾರೆ.

ಇದನ್ನೂ ಓದಿ: Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

ಇದನ್ನೂ ಓದಿ: ಯುವರತ್ನ ನೋಡಬೇಕು, ಥಿಯೇಟರ್​ ಹೌಸ್​ ಫುಲ್​ ಮಾಡೋಕೆ ಅವಕಾಶ ಕೊಡಿ; ಸಿಎಂಗೆ ಮಕ್ಕಳಿಂದ ಮನವಿ

Published On - 8:12 pm, Sun, 4 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ