Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಅಭಿಮಾನ: ಸಾವನ್ನಪ್ಪಿದ ಮಗನಿಗೂ ಟಿಕೆಟ್; ಫೊಟೋ ಇಟ್ಟುಕೊಂಡು ಯುವರತ್ನ ಸಿನಿಮಾ ನೋಡಿದ ಪೋಷಕರು

Yuvarathnaa, Puneeth Rajkumar: ಕೌಟುಂಬಿಕ ಸಿನಿಮಾ ವೀಕ್ಷಿಸುವ ಪ್ರೇಕ್ಷಕ ವರ್ಗಕ್ಕೆ ತುಂಬಾ ಹತ್ತಿರವಾದ ನಟ ಪುನೀತ್ ರಾಜ್​ಕುಮಾರ್ ಎಂದರೆ ತಪ್ಪಿಲ್ಲ. ಪುನೀತ್ ರಾಜ್​ಕುಮಾರ್​ಗೆ ದೊಡ್ಡ ಪ್ರಮಾಣದ ಫ್ಯಾಮಿಲಿ ಆಡಿಯನ್ಸ್ ಇದ್ದಾರೆ.

ಅಪ್ಪು ಅಭಿಮಾನ: ಸಾವನ್ನಪ್ಪಿದ ಮಗನಿಗೂ ಟಿಕೆಟ್; ಫೊಟೋ ಇಟ್ಟುಕೊಂಡು ಯುವರತ್ನ ಸಿನಿಮಾ ನೋಡಿದ ಪೋಷಕರು
ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: ganapathi bhat

Updated on:Apr 05, 2022 | 12:51 PM

ಮೈಸೂರು: ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಉತ್ತಮ ಸಂದೇಶಕ್ಕಾಗಿ, ಅಪ್ಪು ಡ್ಯಾನ್ಸ್​ಗಾಗಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಚಲನಚಿತ್ರವನ್ನು ಮಕ್ಕಳು, ದೊಡ್ಡವರು ಎಂಬ ಭೇದವಿಲ್ಲದೆ ಎಲ್ಲರೂ ನೋಡುತ್ತಿದ್ದಾರೆ. ಈ ನಡುವೆ, ಮೃತಪಟ್ಟ ಮಗನ ಫೊಟೋದೊಂದಿಗೆ ಪೋಷಕರು ‘ಯುವರತ್ನ’ ಸಿನಿಮಾ ನೋಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಡಿಆರ್​​ಸಿ‌ ಮಲ್ಟಿಪ್ಲೆಕ್ಸ್​ನಲ್ಲಿ ಪೋಷಕರು ಮೃತ ಮಗನ ಭಾವಚಿತ್ರದೊಂದಿಗೆ ಸಿನಿಮಾ ನೋಡಿದ್ದಾರೆ.

ಕಳೆದ ಮೂರು ತಿಂಗಳ ಹಿಂದಷ್ಟೇ ಬಾಲಕ ಹರಿಕೃಷ್ಣನ್ ಎಂಬಾತ ಮೃತಪಟ್ಟಿದ್ದ. ಪುಟ್ಟ ಹುಡುಗ ಹರಿಕೃಷ್ಣನ್ ಪುನೀತ್ ರಾಜ್​ಕುಮಾರ್​ ಅಭಿಮಾನಿಯೂ ಆಗಿದ್ದ. ಅಷ್ಟೇ ಅಲ್ಲದೆ, ಆತ ಯುವರತ್ನ ಸಿನಿಮಾ ನೋಡಬೇಕೆಂದು ಆಸೆ ಪಟ್ಟಿದ್ದ. ಈ ಕಾರಣದಿಂದ, ಮಗನ ಆಸೆಯಂತೆ ಪೋಷಕರು ಆತನ ಫೊಟೋದೊಂದಿಗೆ ‘ಯುವರತ್ನ’ ವೀಕ್ಷಣೆ ಮಾಡಿದ್ದಾರೆ.

ಮೈಸೂರಿನ ನಿವಾಸಿ‌ ಮುರಳಿಧರ್ ಎಂಬುವವರ ಪುತ್ರ ಹರಿಕೃಷ್ಣನ್ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ. ಮಗ ಪುನೀತ್ ಅಭಿಮಾನಿಯಾಗಿದ್ದು, ಯುವರತ್ನ ನೋಡಬೇಕೆಂದು ಆಸೆಪಟ್ಟಿದ್ದ. ಮಗನ ಆಸೆಯನ್ನು ತೀರಿಸುವ ಸಲುವಾಗಿ ಫೊಟೋ ಇಟ್ಟುಕೊಂಡು ಪೋಷಕರು ಸಿನಿಮಾ ವೀಕ್ಷಿಸಿದ್ದಾರೆ. ಸಾವನಪ್ಪಿದ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು, ತಂದೆ-ತಾಯಿ-ಹಿರಿಯ ಮಗನ ಜೊತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಕೌಟುಂಬಿಕ ಸಿನಿಮಾ ವೀಕ್ಷಿಸುವ ಪ್ರೇಕ್ಷಕ ವರ್ಗಕ್ಕೆ ತುಂಬಾ ಹತ್ತಿರವಾದ ನಟ ಪುನೀತ್ ರಾಜ್​ಕುಮಾರ್ ಎಂದರೆ ತಪ್ಪಿಲ್ಲ. ಪುನೀತ್ ರಾಜ್​ಕುಮಾರ್​ಗೆ ದೊಡ್ಡ ಪ್ರಮಾಣದ ಫ್ಯಾಮಿಲಿ ಆಡಿಯನ್ಸ್ ಇದ್ದಾರೆ. ಮಕ್ಕಳು, ವಯಸ್ಕರು ಎನ್ನದೆ ತುಂಬಾ ಫ್ಯಾನ್ ಫಾಲೋವರ್ಸ್ ಪುನೀತ್​ಗೆ ಇದ್ದಾರೆ.

ಇದನ್ನೂ ಓದಿ: Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

ಇದನ್ನೂ ಓದಿ: ಯುವರತ್ನ ನೋಡಬೇಕು, ಥಿಯೇಟರ್​ ಹೌಸ್​ ಫುಲ್​ ಮಾಡೋಕೆ ಅವಕಾಶ ಕೊಡಿ; ಸಿಎಂಗೆ ಮಕ್ಕಳಿಂದ ಮನವಿ

Published On - 8:12 pm, Sun, 4 April 21

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ