AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​
ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jun 05, 2021 | 8:18 PM

Share

ನಟ ಪುನೀತ್​ ರಾಜ್​ಕುಮಾರ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅವರು ಹೇಳಿದ್ದನ್ನು ಶಿರಸ ಪಾಲಿಸುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಈ ಕಾರಣಕ್ಕೆ ಸರ್ಕಾರದ ಜತೆ ಕೈ ಜೋಡಿಸಿರುವ ಪುನೀತ್​, ಕೊವಿಡ್​ ವ್ಯಾಕ್ಸಿನ್​ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಜತೆಗೆ, ಕೊವಿಡ್​ ಬಗ್ಗೆ ಭಯಬೇಡ ಎಂದು ಕೂಡ ಹೇಳಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಪುನೀತ್​, ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಪುನೀತ್​ ಈ ಮೊದಲು ಕೂಡ ಸರ್ಕಾರದ ಸಾಕಷ್ಟು ಆಂದೋಲನದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಈಗ ಕೊವಿಡ್​ ಬಗ್ಗೆ ಅವರು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಆರಂಭಕ್ಕೂ ಕೆಲವೇ ದಿನ ಮೊದಲು ಪುನೀತ್ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ತೆರೆಗೆ ಬಂದಿತ್ತು. ಅದಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿತ್ತು. ಹೀಗಾಗಿ, ಸಿನಿಮಾ ಒಂದೇ ವಾರಕ್ಕೆ ಒಟಿಟಿಯಲ್ಲಿ ರಿಲೀಸ್​ ಆಯಿತು. ಸದ್ಯ, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್​ ಲಾಕ್​ಡೌನ್​ ಇರುವ ಕಾರಣಕ್ಕೆ ಚಿತ್ರದ ಕೆಲಸಗಳು ನಿಂತಿವೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

Published On - 6:54 pm, Sat, 5 June 21

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್