AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​
ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jun 05, 2021 | 8:18 PM

Share

ನಟ ಪುನೀತ್​ ರಾಜ್​ಕುಮಾರ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅವರು ಹೇಳಿದ್ದನ್ನು ಶಿರಸ ಪಾಲಿಸುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಈ ಕಾರಣಕ್ಕೆ ಸರ್ಕಾರದ ಜತೆ ಕೈ ಜೋಡಿಸಿರುವ ಪುನೀತ್​, ಕೊವಿಡ್​ ವ್ಯಾಕ್ಸಿನ್​ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಜತೆಗೆ, ಕೊವಿಡ್​ ಬಗ್ಗೆ ಭಯಬೇಡ ಎಂದು ಕೂಡ ಹೇಳಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಪುನೀತ್​, ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಪುನೀತ್​ ಈ ಮೊದಲು ಕೂಡ ಸರ್ಕಾರದ ಸಾಕಷ್ಟು ಆಂದೋಲನದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಈಗ ಕೊವಿಡ್​ ಬಗ್ಗೆ ಅವರು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಆರಂಭಕ್ಕೂ ಕೆಲವೇ ದಿನ ಮೊದಲು ಪುನೀತ್ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ತೆರೆಗೆ ಬಂದಿತ್ತು. ಅದಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿತ್ತು. ಹೀಗಾಗಿ, ಸಿನಿಮಾ ಒಂದೇ ವಾರಕ್ಕೆ ಒಟಿಟಿಯಲ್ಲಿ ರಿಲೀಸ್​ ಆಯಿತು. ಸದ್ಯ, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್​ ಲಾಕ್​ಡೌನ್​ ಇರುವ ಕಾರಣಕ್ಕೆ ಚಿತ್ರದ ಕೆಲಸಗಳು ನಿಂತಿವೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

Published On - 6:54 pm, Sat, 5 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?