AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​
ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jun 05, 2021 | 8:18 PM

Share

ನಟ ಪುನೀತ್​ ರಾಜ್​ಕುಮಾರ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅವರು ಹೇಳಿದ್ದನ್ನು ಶಿರಸ ಪಾಲಿಸುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಈ ಕಾರಣಕ್ಕೆ ಸರ್ಕಾರದ ಜತೆ ಕೈ ಜೋಡಿಸಿರುವ ಪುನೀತ್​, ಕೊವಿಡ್​ ವ್ಯಾಕ್ಸಿನ್​ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಜತೆಗೆ, ಕೊವಿಡ್​ ಬಗ್ಗೆ ಭಯಬೇಡ ಎಂದು ಕೂಡ ಹೇಳಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶ ನೀಡಿರುವ ಪುನೀತ್​, ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಪುನೀತ್​ ಈ ಮೊದಲು ಕೂಡ ಸರ್ಕಾರದ ಸಾಕಷ್ಟು ಆಂದೋಲನದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಈಗ ಕೊವಿಡ್​ ಬಗ್ಗೆ ಅವರು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಕೊವಿಡ್​ ಎರಡನೇ ಅಲೆ ಆರಂಭಕ್ಕೂ ಕೆಲವೇ ದಿನ ಮೊದಲು ಪುನೀತ್ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ತೆರೆಗೆ ಬಂದಿತ್ತು. ಅದಾಗಲೇ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡಿತ್ತು. ಹೀಗಾಗಿ, ಸಿನಿಮಾ ಒಂದೇ ವಾರಕ್ಕೆ ಒಟಿಟಿಯಲ್ಲಿ ರಿಲೀಸ್​ ಆಯಿತು. ಸದ್ಯ, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕೊವಿಡ್​ ಲಾಕ್​ಡೌನ್​ ಇರುವ ಕಾರಣಕ್ಕೆ ಚಿತ್ರದ ಕೆಲಸಗಳು ನಿಂತಿವೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

Published On - 6:54 pm, Sat, 5 June 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ