AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಕ್ಕೆ ಏಕಾಏಕಿ ಪ್ರವೇಶ ನಿರ್ಬಂಧಿಸಿದರೆ ನಾವೇನು ಮಾಡಬೇಕು?; ಸರ್ಕಾರದ ಕ್ರಮಕ್ಕೆ ಪುನೀತ್​ ಬೇಸರ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದಕ್ಕೆ ನಟ ಪುನೀತ್​ ರಾಜ್​ಕುಮಾರ್ ಬೇಸರ ಹೊರ ಹಾಕಿದ್ದಾರೆ. 

ಚಿತ್ರಮಂದಿರಕ್ಕೆ ಏಕಾಏಕಿ ಪ್ರವೇಶ ನಿರ್ಬಂಧಿಸಿದರೆ ನಾವೇನು ಮಾಡಬೇಕು?; ಸರ್ಕಾರದ ಕ್ರಮಕ್ಕೆ ಪುನೀತ್​ ಬೇಸರ
ರಾಜೇಶ್ ದುಗ್ಗುಮನೆ
|

Updated on:Apr 02, 2021 | 7:23 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ಗುರುವಾರಷ್ಟೇ ತೆರೆಗೆ ಬಂದಿತ್ತು. ಸಿನಿಮಾವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಹೀಗಿರುವಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ ತಂದಿದೆ. ಚಿತ್ರಮಂದಿರದಲ್ಲಿ ಶೇ. 50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶ ಹೊರಡಿಸಿದೆ. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಸಮಾಧಾನ ಹೊರ ಹಾಕಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ಫೇಸ್​ಬುಕ್​ ಲೈವ್​ನಲ್ಲಿ ಬಂದು ಪುನೀತ್​ ರಾಜ್​ಕುಮಾರ್​ ಬೇಸರ ಹೊರ ಹಾಕಿದ್ದರು. ನಂತರ ಟಿವಿ9 ಕನ್ನಡದ ಜತೆಗೂ ಅವರು ಮಾತನಾಡಿದ್ದಾರೆ.

ದಯವಿಟ್ಟು ಥಿಯೇಟರ್​​ಗಳಿಗೆ ಶೇ.100ರಷ್ಟು ಅವಕಾಶ ನೀಡಿ. ಜನರು ಕೂಡ ಮುನ್ನೆಚ್ಚರಿಕೆ ಕ್ರಮದಿಂದಲೇ ಚಿತ್ರಮಂದಿರಕ್ಕೆ ಬಂದಿರುತ್ತಾರೆ. ಶೇ.50ರಷ್ಟು ಅವಕಾಶ ನೀಡಿದರೆ ನಿರ್ಮಾಪಕರ ಗತಿ ಏನು? ಮುಂದೆ ಏನು ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮೊದಲೇ ನಮಗೆ ಹೇಳಿದ್ರೆ ಸಿನಿಮಾ ರಿಲೀಸ್​ ಮಾಡುತ್ತಿರಲಿಲ್ಲ ಎಂದು ಪುನೀತ್​ ಟಿವಿ9 ಕನ್ನಡದ ಜತೆ ಬೇಸರ ಹಂಚಿಕೊಂಡಿದ್ದಾರೆ.

ಎಲ್ಲರೂ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಚುನಾವಣೆ ರ್ಯಾಲಿಗಳಲ್ಲಿ ಸಾವಿರಾರು ಜನರು ಸೇರುತ್ತಿದ್ದಾರೆ. ಹೀಗಿರುವಾಗ ಸಿನಿಮಾ ರಂಗವನ್ನು ಟಾರ್ಗೆಟ್​ ಮಾಡುವುದು ಸರಿಯಲ್ಲ ಎಂದು ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್​ ಆನಂದ್​ ರಾಮ್ ಫೇಸ್​ಬುಕ್​ ಲೈವ್​ನಲ್ಲಿ​ ಹೇಳಿದ್ದಾರೆ.

​ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಇತ್ತೀಚೆಗೆ ಸಲಹೆ ನೀಡಿದ್ದರು.  ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಹೀಗಾಗಿ, ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ಬ್ಯಾಡ್​ ನ್ಯೂಸ್​: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಥಿಯೇಟರ್​ ಪ್ರವೇಶಕ್ಕೆ ಕಡಿವಾಣ

 Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?

Published On - 7:15 pm, Fri, 2 April 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ