AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್​ ಬಯೋಪಿಕ್ ಪ್ಲ್ಯಾನ್ ಬಗ್ಗೆ ಮಾತಾಡಿದ ಸಂತೋಷ್ ಆನಂದ್​ರಾಮ್

‘ಪವರ್ ಸ್ಟಾರ್​’ ಪುನೀತ್ ರಾಜ್​ಕುಮಾರ್​ ಅವರ ಜೀವನದ ಕುರಿತು ಸಿನಿಮಾ ಮೂಡಿಬರಬೇಕು ಎಂಬುದು ಅಭಿಮಾನಿಗಳ ಆಸೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ಸಂತೋಷ್ ಆನಂದ್​ರಾಮ್ ಅವರು ಆಲೋಚನೆ ಮಾಡಿದ್ದಾರೆ. ತಮ್ಮ ಮುಂದಿನ ಪ್ಲ್ಯಾನ್ ಬಗ್ಗೆ ಅವರು ಮಾತಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..

ಪುನೀತ್ ರಾಜ್​ಕುಮಾರ್​ ಬಯೋಪಿಕ್ ಪ್ಲ್ಯಾನ್ ಬಗ್ಗೆ ಮಾತಾಡಿದ ಸಂತೋಷ್ ಆನಂದ್​ರಾಮ್
Santhosh Ananddram, Puneeth Rajkumar
Mangala RR
| Edited By: |

Updated on: Mar 14, 2025 | 12:12 PM

Share

ನಟ ಪುನೀತ್ ರಾಜ್​ಕುಮಾರ್​ (Puneeth Rajkumar) ಅವರನ್ನು ಅಭಿಮಾನಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ಭೌತಿಕವಾಗಿ ಇಲ್ಲದಿದ್ದರೂ ಕೂಡ ಫ್ಯಾನ್ಸ್ ಮನದಲ್ಲಿ ಅವರು ಶಾಶ್ವತವಾಗಿ ನೆಲೆಸಿರುತ್ತಾರೆ. ಇಂದು (ಮಾರ್ಚ್​ 14) ಪುನೀತ್ ನಟನೆಯ ‘ಅಪ್ಪು’ ಸಿನಿಮಾ ಮರು ಬಿಡುಗಡೆ ಆಗಿದ್ದು, ಅನೇಕ ಸೆಲೆಬ್ರಿಟಿಗಳು ಬಂದು ಸಿನಿಮಾ ನೋಡುತ್ತಿದ್ದಾರೆ. ಪುನೀತ್ ಜೊತೆ ಹೆಚ್ಚು ಆಪ್ತತೆ ಹೊಂದಿದ್ದ ನಿರ್ದೇಶಕ ಸಂತೋಷ್ ಆನಂದ್​ರಾಮ್ (Santhosh Ananddram) ಅವರು ಕೂಡ ‘ಅಪ್ಪು’ ಚಿತ್ರ ನೋಡಲು ಬಂದಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿ ಕೆಲವು ಇಂಟರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರ ಬಯೋಪಿಕ್ (Puneeth Rajkumar Biopic) ಮಾಡುವ ಕುರಿತು ಸಂತೋಷ್ ಆನಂದ್​ರಾಮ್ ಮಾತನಾಡಿದ್ದಾರೆ.

ಪುನೀತ್ ರಾಜ್​ಕುಮಾರ್​ ಅವರ ಜೀವನದ ಕುರಿತು ಸಿನಿಮಾ ಮಾಡುವ ಆಲೋಚನೆ ಸಂತೋಷ್ ಆನಂದ್​ರಾಮ್ ಅವರಿಗೆ ಇದೆ. ಆ ಕುರಿತು ಅವರು ವಿವರ ಹಂಚಿಕೊಂಡಿದ್ದಾರೆ. ‘ಅವರ ಜೊತೆ ನಾನು ಮಾಡಿದ 2 ಸಿನಿಮಾಗಳು ಹಿಟ್ ಆದವು. ನನ್ನ ಬರವಣಿಗೆಯಲ್ಲಿ ಅಪ್ಪು ಅವರನ್ನು ಬಣ್ಣಿಸಿದ ಖುಷಿ ನನಗೆ ಇದೆ. ನಾನು ಇರುವವರೆಗೂ ನನ್ನ ಬರವಣಿಗೆ ಅವರ ಕುರಿತು ಇದ್ದೇ ಇರುತ್ತದೆ. ಅವರ ಬಗ್ಗೆ ಸಿನಿಮಾ ಮಾಡಿ ಎಂದು ಫ್ಯಾನ್ಸ್ ಯಾವಾಗಲೂ ಕೇಳುತ್ತಾರೆ’ ಎಂದಿದ್ದಾರೆ ಸಂತೋಷ್ ಆನಂದ್​ರಾಮ್​.

‘ಇಂದು ಎಐ ಟೆಕ್ನಾಲಜಿ ಇದೆ. ಮುಂದಿನ ದಿನಗಳಲ್ಲಿ ಆ ದೇವರು ಅವಕಾಶ ಕೊಟ್ಟರೆ, ಅಪ್ಪು ಅವರ ಚರಿತ್ರೆಯನ್ನು ತೆರೆ ಮೇಲೆ ತರುವ ಪ್ರಯತ್ನವನ್ನು ನಾನು ಮಾಡಬೇಕು ಎಂಬುದನ್ನು ಈಗ ತುಂಬ ಗಂಭೀರವಾಗಿ ಪರಿಗಣಿಸಿದ್ದೇನೆ. ಹೊಂಬಾಳೆ ಫಿಲ್ಮ್ಸ್​ ಮೂಲಕ ನಾನು ಮತ್ತು ಪುನೀತ್ ಅವರು 5 ಸಿನಿಮಾ ಮಾಡಬೇಕು ಅಂತ ಪ್ಲ್ಯಾನ್ ಆಗಿತ್ತು. ಮಾಡಿದ್ದರೆ ರೆಕಾರ್ಡ್ ಆಗುತ್ತಿತ್ತು. ಮೂರು ಮತ್ತು ನಾಲ್ಕನೇ ಸಿನಿಮಾಗೆ ಕಮಿಟ್ ಕೂಡ ಆಗಿದ್ದೆವು. ಆದರೆ ದೇವರ ಆಟ ಬೇರೆಯೇ ಇತ್ತು’ ಎಂದು ಸಂತೋಷ್ ಆನಂದ್​ರಾಮ್ ಹೇಳಿದ್ದಾರೆ.

ಇದನ್ನೂ ಓದಿ
Image
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
Image
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
Image
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
Image
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಅವರ ಸ್ಟಂಟ್ ಅನ್ನು ‘ಅಪ್ಪು ವೆಂಕಟೇಶ್’ ನೆನಪಿಸಿಕೊಂಡಿದ್ದು ಹೀಗೆ

ಪುನೀತ್ ರಾಜ್​ಕುಮಾರ್​ ಕುರಿತು ಪುಸ್ತಕ ಕೂಡ ಸಿದ್ಧವಾಗುತ್ತಿದೆ. ಆ ಬಗ್ಗೆ ಸಹ ಸಂತೋಷ್ ಆನಂದ್​ರಾಮ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಪುನೀತ್ ಹುಟ್ಟುಹಬ್ಬಕ್ಕೆ ಬುಕ್ ಬರಲಿದೆ. ಪ್ರಕೃತಿ ಬನವಾಸಿ ಅವರು ಬರೆಯುತ್ತಿದ್ದಾರೆ. ಅಶ್ವಿನಿ ಮೇಡಂ ನಿಂತು ಆ ಕೆಲಸ ಮಾಡಿಸುತ್ತಿದ್ದಾರೆ. ಆ ಪುಸ್ತಕದಿಂದ ಪುನೀತ್ ಅವರ ವ್ಯಕ್ತಿತ್ವದ ಬಗ್ಗೆ ಜನರಿಗೆ ಇನ್ನಷ್ಟು ಗೊತ್ತಾಗುತ್ತದೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರನ್ನು ನೆನಪಿಸಿಕೊಳ್ಳುತ್ತಾ ಇರುತ್ತೇವೆ’ ಎಂದಿದ್ದಾರೆ ಸಂತೋಷ್ ಆನಂದ್​ರಾಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್