AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ

Happy Birthday Puneeth: ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾದ ಪುನೀತ್​ ರಾಜ್​ಕುಮಾರ್​ ಅವರಿಗೆ ಇಂದು (ಮಾ.17) ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಸ್ನೇಹಿತರು ‘ಪವರ್​ ಸ್ಟಾರ್​’ಗೆ ಶುಭಕೋರುತ್ತಿದ್ದಾರೆ.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ
ದರ್ಶನ್​ - ಪುನೀತ್​ ರಾಜ್​ಕುಮಾರ್​- ಸುದೀಪ್​
ಮದನ್​ ಕುಮಾರ್​
|

Updated on: Mar 17, 2021 | 10:36 AM

Share

ಸ್ಯಾಂಡಲ್​ವುಡ್​ನಲ್ಲಿ ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿರುವ ನಟ ಪುನೀತ್​ ರಾಜ್​ಕುಮಾರ್​ ಬುಧವಾರ (ಮಾ.17) 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲರಿಂದ ಶುಭ ಹಾರೈಕೆಗಳು ಹರಿದುಬರುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ಪವರ್​ ಸ್ಟಾರ್​’ಗೆ ವಿಶ್​ ಮಾಡುತ್ತಿದ್ದಾರೆ.

ಡಾ. ರಾಜ್​ ಕುಟುಂಬದವರನ್ನು ಕಂಡರೆ ಇಡೀ ಚಿತ್ರರಂಗಕ್ಕೆ ಎಲ್ಲಿಲ್ಲದ ಅಭಿಮಾನ. ಬಾಲನಟ ಆಗಿದ್ದಾಗಿನಿಂದಲೂ ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯವಾಗಿರುವ ಪುನೀತ್​ ರಾಜ್​ಕುಮಾರ್​ ಹಲವಾರು ಸ್ನೇಹಿತರನ್ನು ಸಂಪಾದಿಸಿದ್ದಾರೆ. ಇಂದು ಅವರ ಜನ್ಮದಿನಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಟ್ವೀಟ್​ ಮಾಡುವ ಮೂಲಕ ಪುನೀತ್​ಗೆ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಪುನೀತ್​ ರಾಜ್​ಕುಮಾರ್​’ ಎಂದು ಅಭಿಮಾನಿಗಳ ಪ್ರೀತಿಯ ‘ದಾಸ’ ಟ್ವೀಟ್​ ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಚ್ಚುಮೆಚ್ಚು. ಇಬ್ಬರ ನಡುವೆ ಒಳ್ಳೆಯ ಒಡನಾಟ ಇದೆ. ಅವರು ಕೂಡ ಸೋಶಿಯಲ್​ ಮೀಡಿಯಾ ಮೂಲಕ ಅಪ್ಪುಗೆ ಶುಭ ಕೋರಿದ್ದಾರೆ. ಸುದೀಪ್​ ಮತ್ತು ದರ್ಶನ್​ ಮಾತ್ರವಲ್ಲದೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ಗೆ ವಿಶ್​ ಮಾಡಿದ್ದಾರೆ.

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಪುನೀತ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಜಾತ್ರೆಯ ರೀತಿ ಆಚರಿಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಆ ಸಂಭ್ರಮಕ್ಕೆ ಬ್ರೇಕ್​ ಹಾಕಲಾಗಿದೆ. ಕಳೆದ ವರ್ಷ ಕೂಡ ಕೋವಿಡ್​-19 ಭೀತಿಯಿಂದ ಪುನೀತ್​ ಬರ್ತ್​ಡೇ ಕ್ಯಾನ್ಸಲ್​ ಮಾಡಲಾಗಿತ್ತು. ‘ಈ ಬಾರಿಯೂ ನಾನು ಮನೆಯಲ್ಲಿ ಇರುವುದಿಲ್ಲ. ಹಾಗಾಗಿ ಯಾರೂ ಕೂಡ ಮನೆ ಬಳಿ ಬರುವುದು ಬೇಡ’ ಎಂದು ಪುನೀತ್​ ಎರಡು ದಿನ ಮುನ್ನವೇ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದರು.

ಕುಟುಂಬದವರ ಜೊತೆ ಸೇರಿ ಪುನೀತ್​ ಇಂದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೇ ತಿಂಗಳ 23ರಿಂದ ಪ್ರತಿ ಜಿಲ್ಲೆಗಳಿಗೂ ತೆರಳಿ ಅಭಿಮಾನಿಗಳ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಪುನೀತ್ ತಿಳಿಸಿದ್ದಾರೆ. ಏ.1ರಂದು ಅವರ ಯುವರತ್ನ ಸಿನಿಮಾ ಬಿಡುಗಡೆ ಆಗಲಿದ್ದು, ಈಗಾಗಲೇ ದೊಡ್ಡಮಟ್ಟದ ಹೈಪ್​ ಸೃಷ್ಟಿ ಮಾಡಿದೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ