AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ

Happy Birthday Puneeth: ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾದ ಪುನೀತ್​ ರಾಜ್​ಕುಮಾರ್​ ಅವರಿಗೆ ಇಂದು (ಮಾ.17) ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಸ್ನೇಹಿತರು ‘ಪವರ್​ ಸ್ಟಾರ್​’ಗೆ ಶುಭಕೋರುತ್ತಿದ್ದಾರೆ.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ
ದರ್ಶನ್​ - ಪುನೀತ್​ ರಾಜ್​ಕುಮಾರ್​- ಸುದೀಪ್​
ಮದನ್​ ಕುಮಾರ್​
|

Updated on: Mar 17, 2021 | 10:36 AM

Share

ಸ್ಯಾಂಡಲ್​ವುಡ್​ನಲ್ಲಿ ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿರುವ ನಟ ಪುನೀತ್​ ರಾಜ್​ಕುಮಾರ್​ ಬುಧವಾರ (ಮಾ.17) 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲರಿಂದ ಶುಭ ಹಾರೈಕೆಗಳು ಹರಿದುಬರುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ಪವರ್​ ಸ್ಟಾರ್​’ಗೆ ವಿಶ್​ ಮಾಡುತ್ತಿದ್ದಾರೆ.

ಡಾ. ರಾಜ್​ ಕುಟುಂಬದವರನ್ನು ಕಂಡರೆ ಇಡೀ ಚಿತ್ರರಂಗಕ್ಕೆ ಎಲ್ಲಿಲ್ಲದ ಅಭಿಮಾನ. ಬಾಲನಟ ಆಗಿದ್ದಾಗಿನಿಂದಲೂ ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯವಾಗಿರುವ ಪುನೀತ್​ ರಾಜ್​ಕುಮಾರ್​ ಹಲವಾರು ಸ್ನೇಹಿತರನ್ನು ಸಂಪಾದಿಸಿದ್ದಾರೆ. ಇಂದು ಅವರ ಜನ್ಮದಿನಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಟ್ವೀಟ್​ ಮಾಡುವ ಮೂಲಕ ಪುನೀತ್​ಗೆ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಪುನೀತ್​ ರಾಜ್​ಕುಮಾರ್​’ ಎಂದು ಅಭಿಮಾನಿಗಳ ಪ್ರೀತಿಯ ‘ದಾಸ’ ಟ್ವೀಟ್​ ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಚ್ಚುಮೆಚ್ಚು. ಇಬ್ಬರ ನಡುವೆ ಒಳ್ಳೆಯ ಒಡನಾಟ ಇದೆ. ಅವರು ಕೂಡ ಸೋಶಿಯಲ್​ ಮೀಡಿಯಾ ಮೂಲಕ ಅಪ್ಪುಗೆ ಶುಭ ಕೋರಿದ್ದಾರೆ. ಸುದೀಪ್​ ಮತ್ತು ದರ್ಶನ್​ ಮಾತ್ರವಲ್ಲದೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ಗೆ ವಿಶ್​ ಮಾಡಿದ್ದಾರೆ.

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಪುನೀತ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಜಾತ್ರೆಯ ರೀತಿ ಆಚರಿಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಆ ಸಂಭ್ರಮಕ್ಕೆ ಬ್ರೇಕ್​ ಹಾಕಲಾಗಿದೆ. ಕಳೆದ ವರ್ಷ ಕೂಡ ಕೋವಿಡ್​-19 ಭೀತಿಯಿಂದ ಪುನೀತ್​ ಬರ್ತ್​ಡೇ ಕ್ಯಾನ್ಸಲ್​ ಮಾಡಲಾಗಿತ್ತು. ‘ಈ ಬಾರಿಯೂ ನಾನು ಮನೆಯಲ್ಲಿ ಇರುವುದಿಲ್ಲ. ಹಾಗಾಗಿ ಯಾರೂ ಕೂಡ ಮನೆ ಬಳಿ ಬರುವುದು ಬೇಡ’ ಎಂದು ಪುನೀತ್​ ಎರಡು ದಿನ ಮುನ್ನವೇ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದರು.

ಕುಟುಂಬದವರ ಜೊತೆ ಸೇರಿ ಪುನೀತ್​ ಇಂದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೇ ತಿಂಗಳ 23ರಿಂದ ಪ್ರತಿ ಜಿಲ್ಲೆಗಳಿಗೂ ತೆರಳಿ ಅಭಿಮಾನಿಗಳ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಪುನೀತ್ ತಿಳಿಸಿದ್ದಾರೆ. ಏ.1ರಂದು ಅವರ ಯುವರತ್ನ ಸಿನಿಮಾ ಬಿಡುಗಡೆ ಆಗಲಿದ್ದು, ಈಗಾಗಲೇ ದೊಡ್ಡಮಟ್ಟದ ಹೈಪ್​ ಸೃಷ್ಟಿ ಮಾಡಿದೆ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ