Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ

Happy Birthday Puneeth: ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟರಲ್ಲಿ ಒಬ್ಬರಾದ ಪುನೀತ್​ ರಾಜ್​ಕುಮಾರ್​ ಅವರಿಗೆ ಇಂದು (ಮಾ.17) ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸೆಲೆಬ್ರಿಟಿಗಳು ಹಾಗೂ ಸ್ನೇಹಿತರು ‘ಪವರ್​ ಸ್ಟಾರ್​’ಗೆ ಶುಭಕೋರುತ್ತಿದ್ದಾರೆ.

Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ
ದರ್ಶನ್​ - ಪುನೀತ್​ ರಾಜ್​ಕುಮಾರ್​- ಸುದೀಪ್​
Follow us
ಮದನ್​ ಕುಮಾರ್​
|

Updated on: Mar 17, 2021 | 10:36 AM

ಸ್ಯಾಂಡಲ್​ವುಡ್​ನಲ್ಲಿ ಎಲ್ಲರ ಜೊತೆಗೂ ಉತ್ತಮ ಒಡನಾಟ ಹೊಂದಿರುವ ನಟ ಪುನೀತ್​ ರಾಜ್​ಕುಮಾರ್​ ಬುಧವಾರ (ಮಾ.17) 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲರಿಂದ ಶುಭ ಹಾರೈಕೆಗಳು ಹರಿದುಬರುತ್ತಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ಪವರ್​ ಸ್ಟಾರ್​’ಗೆ ವಿಶ್​ ಮಾಡುತ್ತಿದ್ದಾರೆ.

ಡಾ. ರಾಜ್​ ಕುಟುಂಬದವರನ್ನು ಕಂಡರೆ ಇಡೀ ಚಿತ್ರರಂಗಕ್ಕೆ ಎಲ್ಲಿಲ್ಲದ ಅಭಿಮಾನ. ಬಾಲನಟ ಆಗಿದ್ದಾಗಿನಿಂದಲೂ ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯವಾಗಿರುವ ಪುನೀತ್​ ರಾಜ್​ಕುಮಾರ್​ ಹಲವಾರು ಸ್ನೇಹಿತರನ್ನು ಸಂಪಾದಿಸಿದ್ದಾರೆ. ಇಂದು ಅವರ ಜನ್ಮದಿನಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರು ಟ್ವೀಟ್​ ಮಾಡುವ ಮೂಲಕ ಪುನೀತ್​ಗೆ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಪುನೀತ್​ ರಾಜ್​ಕುಮಾರ್​’ ಎಂದು ಅಭಿಮಾನಿಗಳ ಪ್ರೀತಿಯ ‘ದಾಸ’ ಟ್ವೀಟ್​ ಮಾಡಿದ್ದಾರೆ.

ಕಿಚ್ಚ ಸುದೀಪ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಚ್ಚುಮೆಚ್ಚು. ಇಬ್ಬರ ನಡುವೆ ಒಳ್ಳೆಯ ಒಡನಾಟ ಇದೆ. ಅವರು ಕೂಡ ಸೋಶಿಯಲ್​ ಮೀಡಿಯಾ ಮೂಲಕ ಅಪ್ಪುಗೆ ಶುಭ ಕೋರಿದ್ದಾರೆ. ಸುದೀಪ್​ ಮತ್ತು ದರ್ಶನ್​ ಮಾತ್ರವಲ್ಲದೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ಗೆ ವಿಶ್​ ಮಾಡಿದ್ದಾರೆ.

ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಪುನೀತ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಜಾತ್ರೆಯ ರೀತಿ ಆಚರಿಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಆ ಸಂಭ್ರಮಕ್ಕೆ ಬ್ರೇಕ್​ ಹಾಕಲಾಗಿದೆ. ಕಳೆದ ವರ್ಷ ಕೂಡ ಕೋವಿಡ್​-19 ಭೀತಿಯಿಂದ ಪುನೀತ್​ ಬರ್ತ್​ಡೇ ಕ್ಯಾನ್ಸಲ್​ ಮಾಡಲಾಗಿತ್ತು. ‘ಈ ಬಾರಿಯೂ ನಾನು ಮನೆಯಲ್ಲಿ ಇರುವುದಿಲ್ಲ. ಹಾಗಾಗಿ ಯಾರೂ ಕೂಡ ಮನೆ ಬಳಿ ಬರುವುದು ಬೇಡ’ ಎಂದು ಪುನೀತ್​ ಎರಡು ದಿನ ಮುನ್ನವೇ ಅಭಿಮಾನಿಗಳಲ್ಲಿ ವಿನಂತಿ ಮಾಡಿಕೊಂಡಿದ್ದರು.

ಕುಟುಂಬದವರ ಜೊತೆ ಸೇರಿ ಪುನೀತ್​ ಇಂದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೇ ತಿಂಗಳ 23ರಿಂದ ಪ್ರತಿ ಜಿಲ್ಲೆಗಳಿಗೂ ತೆರಳಿ ಅಭಿಮಾನಿಗಳ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಪುನೀತ್ ತಿಳಿಸಿದ್ದಾರೆ. ಏ.1ರಂದು ಅವರ ಯುವರತ್ನ ಸಿನಿಮಾ ಬಿಡುಗಡೆ ಆಗಲಿದ್ದು, ಈಗಾಗಲೇ ದೊಡ್ಡಮಟ್ಟದ ಹೈಪ್​ ಸೃಷ್ಟಿ ಮಾಡಿದೆ.

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ