AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಅಣ್ಣಾವ್ರ ಜತೆ ತೂಗುದೀಪ ಶ್ರೀನಿವಾಸ್​; ಇಂದು ಅಪ್ಪು ಜತೆ ದಿನಕರ್​ ತೂಗುದೀಪ! ಇಲ್ಲಿದೆ ಗುಡ್​ ನ್ಯೂಸ್​

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರಿಗೆ ಇಂದು (ಮಾ.17) ಜನ್ಮದಿನ ಸಂಭ್ರಮ. ಆ ಸಲುವಾಗಿ ಹೊಸ ಸಿನಿಮಾಗಳು ಅನೌನ್ಸ್​ ಆಗಿವೆ. ಪೋಸ್ಟರ್​ಗಳು, ಪ್ರೋಮೋಗಳು ಬಿಡುಗಡೆ ಆಗಿವೆ.

ಅಂದು ಅಣ್ಣಾವ್ರ ಜತೆ ತೂಗುದೀಪ ಶ್ರೀನಿವಾಸ್​; ಇಂದು ಅಪ್ಪು ಜತೆ ದಿನಕರ್​ ತೂಗುದೀಪ! ಇಲ್ಲಿದೆ ಗುಡ್​ ನ್ಯೂಸ್​
ದಿನಕರ್​ - ಪುನೀತ್​ - ಶ್ರೀನಿವಾಸ್​ - ಡಾ. ರಾಜ್​
ಮದನ್​ ಕುಮಾರ್​
|

Updated on: Mar 17, 2021 | 12:32 PM

Share

ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಸಂಭ್ರಮಿಸಲು ಇಂದು ಹಲವಾರು ಕಾರಣಗಳು ಸಿಕ್ಕಿವೆ. ಅಪ್ಪು ಜನ್ಮದಿನದ ಪ್ರಯುಕ್ತ ಹಲವು ಹೊಸ ನ್ಯೂಸ್​ಗಳು ಹೊರಬಂದಿವೆ. ಅದರಲ್ಲಿ ಹೆಚ್ಚು ಎಕ್ಸೈಟಿಂಗ್​ ಆಗಿರುವುದು ನಿರ್ದೇಶಕ ದಿನಕರ್​ ತೂಗುದೀಪ ಕೊಟ್ಟಿರುವ ನ್ಯೂಸ್​. ಅಪ್ಪು ಜೊತೆ ತಾವು ಹೊಸ ಸಿನಿಮಾ ಮಾಡುವುದಾಗಿ ದಿನಕರ್​ ಘೋಷಿಸಿದ್ದಾರೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಸಹೋದರ ದಿನಕರ್​ ತೂಗುದೀಪ ಅವರು ಸ್ಯಾಂಡಲ್​ವುಡ್​ನಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಲವ್ಲೀ ಸ್ಟಾರ್​ ಪ್ರೇಮ್​ ಮತ್ತು ರಮ್ಯಾ ಜೋಡಿಯಾಗಿ ನಟಿಸಿದ್ದ ‘ಜೊತೆ ಜೊತೆಯಲಿ’, ದರ್ಶನ್​ ನಟನೆಯ ‘ನವಗ್ರಹ’, ‘ಸಾರಥಿ’ ಮುಂತಾದ ಸಿನಿಮಾಗಳಿಗೆ ದಿನಕರ್​ ನಿರ್ದೇಶನ ಮಾಡಿ ಗೆದ್ದಿದ್ದಾರೆ. ಈಗ ಅವರ ಹೊಸ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಪುನೀತ್​ ಜೊತೆ ದಿನಕರ್​ ಸಿನಿಮಾ ಮಾಡುತ್ತಾರೆ ಎಂಬ ಗುಸುಗುಸು ಕಳೆದ ಹಲವು ದಿನಗಳಿಂದಲೂ ಕೇಳಿಬರುತ್ತಿತ್ತು. ಅದು ಈಗ ಅಧಿಕೃತವಾಗಿದೆ.

ತಾವು ಪುನೀತ್​ಗೆ ನಿರ್ದೇಶನ ಮಾಡುವ ಕುರಿತು ಟ್ವಿಟರ್​ ಮೂಲಕ ದಿನಕರ್​ ಮಾಹಿತಿ ಹಂಚಿಕೊಂಡಿದ್ದಾರೆ. ‘ಮೊದಲನೆಯದಾಗಿ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಸುಮಾರು 5 ದಶಕಗಳು ನನ್ನ ತಂದೆ ತೂಗುದೀಪ ಶ್ರೀನಿವಾಸ್​ ಅವರು ಮತ್ತು ನಟಸಾರ್ವಭೌಮ ಡಾಕ್ಟರ್ ರಾಜ್​ಕುಮಾರ್ ಅಣ್ಣಾವ್ರ ಸ್ನೇಹವಿತ್ತು. ಅವರಿಬ್ಬರು ಜೊತೆಯಾಗಿ ಮಾಡಿದ ಚಿತ್ರಗಳಿಗೆ ಪ್ರೀತಿ-ಪ್ರೋತ್ಸಾಹ ನೀಡಿ ಆಶೀರ್ವದಿಸಿದ್ದೀರಿ. ಅದೇ ರೀತಿ ಈಗ ಮತ್ತೆ ನನ್ನ ಹಾಗು ಅಪ್ಪು ಸರ್ ರವರ ಕಾಂಬಿನೇಷನ್​ನಲ್ಲಿ ಬರುತ್ತಿರುವ ಚಿತ್ರಕ್ಕೂ ನಿಮ್ಮ ಪ್ರೋತ್ಸಾಹವಿರಲಿ. ಒಂದೊಳ್ಳೆಯ ಚಿತ್ರವನ್ನು ಕನ್ನಡಿಗರಿಗೆ ನೀಡುವ ಹಂಬಲದಲ್ಲಿದೆ ಚಿತ್ರತಂಡ’ ಎಂದು ದಿನಕರ್ ಟ್ವೀಟ್​ ಮಾಡಿದ್ದಾರೆ.

ಡಾ. ರಾಜ್​ಕುಮಾರ್​ ಮತ್ತು ದರ್ಶನ್​ ತಂದೆ ತೂಗುದೀಪ ಶ್ರೀನಿವಾಸ್​ ನಡುವೆ ಉತ್ತಮ ಬಾಂಧವ್ಯ ಇತ್ತು. ರಾಜ್​ಕುಮಾರ್​ ನಟನೆಯ ಹಲವಾರು ಸಿನಿಮಾಗಳಲ್ಲಿ ಶ್ರೀನಿವಾಸ್​ ಅವರು ವಿಲನ್​ ಆಗಿ ಅಭಿನಯಿಸಿದ್ದರು. ಆ ಕಾಲದಿಂದಲೂ ಈ ಎರಡು ಫ್ಯಾಮಿಲಿ ನಡುವೆ ಸ್ನೇಹಿವಿದೆ. ಈಗ ಅವರ ಮಕ್ಕಳು ಒಂದೇ ಸಿನಿಮಾಗಾಗಿ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಸಿನಿಮಾದ ಶೀರ್ಷಿಕೆ ಏನು? ಪುನೀತ್​ ಗೆಟಪ್​ ಹೇಗಿರಲಿದೆ? ಅಪ್ಪುಗೆ ಜೋಡಿಯಾಗಿ ಯಾರು ನಟಿಸುತ್ತಾರೆ? ಈ ಎಲ್ಲ ಪ್ರಶ್ನೆಗಳಿಗೂ ಮುಂದಿನ ದಿನಗಳಲ್ಲಿ ಉತ್ತರ ಸಿಗಬೇಕಿದೆ.

ಇಂದು ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನಕ್ಕೆ ಎಲ್ಲರೂ ಶುಭಕೋರುತ್ತಿದ್ದಾರೆ. ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಕೂಡ ಟ್ವೀಟ್​ ಮಾಡುವ ಮೂಲಕ ಪುನೀತ್​ಗೆ ಶುಭ ಹಾರೈಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಪುನೀತ್​ ರಾಜ್​ಕುಮಾರ್​’ ಎಂದು ಅಭಿಮಾನಿಗಳ ಪ್ರೀತಿಯ ‘ದಾಸ’ ಟ್ವೀಟ್​ ಮಾಡಿದ್ದಾರೆ.

Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು