Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?

‘ಲಕ್ಕಿ ಮ್ಯಾನ್’​ ಸಿನಿಮಾದ ಶೂಟಿಂಗ್​ ಮುಗಿದಿದೆ. ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇದ್ದು ಅದನ್ನೂ ಈಗ ಪೂರ್ಣಗೊಳಿಸಲಾಗಿದೆ. ಸದ್ಯ, ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ಗಳಿಗೆ ಚಾಲನೆ ನೀಡಿದೆ.

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?
ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 16, 2021 | 5:38 PM

ಪ್ರಭುದೇವ ಹಾಗೂ ಪುನೀತ್​ ರಾಜ್​ಕುಮಾರ್​ ಡ್ಯಾನ್ಸ್​ ಕಲೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅದ್ಭುತ ಸ್ಟೆಪ್​ ಹಾಕುವುದರಲ್ಲಿ ಇವರನ್ನು ಮೀರಿಸುವವರು ಯಾರೂ ಇಲ್ಲ. ಇಬ್ಬರೂ ಒಟ್ಟಿಗೆ ಸೇರಿ ಸ್ಟೆಪ್​ ಹಾಕಿದರೆ ಹೇಗಿರುತ್ತದೆ? ಹೀಗೊಂದು ಸದಾವಕಾಶ ಒದಗಿ ಬಂದಿದೆ. ಪುನೀತ್​ ರಾಜ್​ಕುಮಾರ್​ ಹಾಗೂ ಪ್ರಭುದೇವ ಒಟ್ಟಾಗಿ ಹೆಜ್ಜೆ ಹಾಕಿದ್ದಾರೆ. ಈ ಖುಷಿಯ ಕ್ಷಣವನ್ನು ಪುನೀತ್​ ರಾಜ್​ಕುಮಾರ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಡಾರ್ಲಿಂಗ್​ ಕೃಷ್ಣ ಅವರು ‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನ ‘ಓಹ್ ಮೈ ಕಡವುಳೆ’ ಸಿನಿಮಾದ ರಿಮೇಕ್​ ಇದು. ಈ ಚಿತ್ರದಲ್ಲಿ ಪುನೀತ್​​ ರಾಜ್​ಕುಮಾರ್​ ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾರ್​ ಒಟ್ಟಿಗೆ ಹೆಜ್ಜೆ ಹಾಕುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಸಿನಿಮಾದಲ್ಲಿ ಪ್ರಭುದೇವ ಹೆಜ್ಜೆ ಹಾಕೋಕು ಒಂದು ಕಾರಣ ಇದೆ. ಈ ಸಿನಿಮಾ ನಿರ್ದೇಶನ ಮಾಡುತ್ತಿರುವುದು ನಾಗೇಂದ್ರ ಪ್ರಸಾದ್​. ‘ಮನಸೆಲ್ಲಾ ನೀನೆ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಇವರು ಕೋರಿಯೋಗ್ರಾಫರ್​ ಕೂಡ ಹೌದು. ಇತ್ತೀಚೆಗೆ ತೆರೆಗೆ ಬಂದ ‘ತಲೈವಿ’ ಸೇರಿ ಸಾಕಷ್ಟು ಸಿನಿಮಾಗಳಿಗೆ ಅವರು ಕೋರಿಯೋಗ್ರಾಫಿ ಮಾಡಿದ್ದಾರೆ. ಈಗ ‘ಲಕ್ಕಿ ಮ್ಯಾನ್​’ ಸಿನಿಮಾ ಮೂಲಕ ಅವರು ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ನಾಗೇಂದ್ರ ಪ್ರಸಾದ್ ಅವರ ಅಣ್ಣನೇ ಪ್ರಭುದೇವ​. ತಮ್ಮನ ಸಿನಿಮಾದಲ್ಲಿ ಅಣ್ಣ ಪ್ರಭುದೇವ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ.

‘ಲಕ್ಕಿ ಮ್ಯಾನ್’​ ಸಿನಿಮಾದ ಶೂಟಿಂಗ್​ ಮುಗಿದಿದೆ. ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇದ್ದು ಅದನ್ನೂ ಈಗ ಪೂರ್ಣಗೊಳಿಸಲಾಗಿದೆ. ಸದ್ಯ, ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ಗಳಿಗೆ ಚಾಲನೆ ನೀಡಿದೆ. ಡಾರ್ಲಿಂಗ್​ ಕೃಷ್ಣ ನಟನೆಯ ‘ಲವ್​ ಮಾಕ್ಟೇಲ್​’ ಸಿನಿಮಾ ಹಿಟ್​ ಆಗಿತ್ತು. ಇದಾದ ನಂತರದಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

ಇನ್ನು, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರಗಳ ಬಗ್ಗೆ ದೊಡ್ಡ ಭರವಸೆಯನ್ನು ಅಭಿಮಾನಿಗಳು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್

ಶೂಟಿಂಗ್​ ವೇಳೆ ಎಡವಟ್ಟು ಮಾಡಿಕೊಂಡ ತ್ರಿಶಾ ಕೃಷ್ಣನ್​; ಪುನೀತ್​ ಸಿನಿಮಾ ನಟಿಗೆ ಕಾಡುತ್ತಿದೆ ಬಂಧನ ಭೀತಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್