AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?

‘ಲಕ್ಕಿ ಮ್ಯಾನ್’​ ಸಿನಿಮಾದ ಶೂಟಿಂಗ್​ ಮುಗಿದಿದೆ. ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇದ್ದು ಅದನ್ನೂ ಈಗ ಪೂರ್ಣಗೊಳಿಸಲಾಗಿದೆ. ಸದ್ಯ, ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ಗಳಿಗೆ ಚಾಲನೆ ನೀಡಿದೆ.

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?
ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?
TV9 Web
| Edited By: |

Updated on: Sep 16, 2021 | 5:38 PM

Share

ಪ್ರಭುದೇವ ಹಾಗೂ ಪುನೀತ್​ ರಾಜ್​ಕುಮಾರ್​ ಡ್ಯಾನ್ಸ್​ ಕಲೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅದ್ಭುತ ಸ್ಟೆಪ್​ ಹಾಕುವುದರಲ್ಲಿ ಇವರನ್ನು ಮೀರಿಸುವವರು ಯಾರೂ ಇಲ್ಲ. ಇಬ್ಬರೂ ಒಟ್ಟಿಗೆ ಸೇರಿ ಸ್ಟೆಪ್​ ಹಾಕಿದರೆ ಹೇಗಿರುತ್ತದೆ? ಹೀಗೊಂದು ಸದಾವಕಾಶ ಒದಗಿ ಬಂದಿದೆ. ಪುನೀತ್​ ರಾಜ್​ಕುಮಾರ್​ ಹಾಗೂ ಪ್ರಭುದೇವ ಒಟ್ಟಾಗಿ ಹೆಜ್ಜೆ ಹಾಕಿದ್ದಾರೆ. ಈ ಖುಷಿಯ ಕ್ಷಣವನ್ನು ಪುನೀತ್​ ರಾಜ್​ಕುಮಾರ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಡಾರ್ಲಿಂಗ್​ ಕೃಷ್ಣ ಅವರು ‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನ ‘ಓಹ್ ಮೈ ಕಡವುಳೆ’ ಸಿನಿಮಾದ ರಿಮೇಕ್​ ಇದು. ಈ ಚಿತ್ರದಲ್ಲಿ ಪುನೀತ್​​ ರಾಜ್​ಕುಮಾರ್​ ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾರ್​ ಒಟ್ಟಿಗೆ ಹೆಜ್ಜೆ ಹಾಕುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಸಿನಿಮಾದಲ್ಲಿ ಪ್ರಭುದೇವ ಹೆಜ್ಜೆ ಹಾಕೋಕು ಒಂದು ಕಾರಣ ಇದೆ. ಈ ಸಿನಿಮಾ ನಿರ್ದೇಶನ ಮಾಡುತ್ತಿರುವುದು ನಾಗೇಂದ್ರ ಪ್ರಸಾದ್​. ‘ಮನಸೆಲ್ಲಾ ನೀನೆ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಇವರು ಕೋರಿಯೋಗ್ರಾಫರ್​ ಕೂಡ ಹೌದು. ಇತ್ತೀಚೆಗೆ ತೆರೆಗೆ ಬಂದ ‘ತಲೈವಿ’ ಸೇರಿ ಸಾಕಷ್ಟು ಸಿನಿಮಾಗಳಿಗೆ ಅವರು ಕೋರಿಯೋಗ್ರಾಫಿ ಮಾಡಿದ್ದಾರೆ. ಈಗ ‘ಲಕ್ಕಿ ಮ್ಯಾನ್​’ ಸಿನಿಮಾ ಮೂಲಕ ಅವರು ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ನಾಗೇಂದ್ರ ಪ್ರಸಾದ್ ಅವರ ಅಣ್ಣನೇ ಪ್ರಭುದೇವ​. ತಮ್ಮನ ಸಿನಿಮಾದಲ್ಲಿ ಅಣ್ಣ ಪ್ರಭುದೇವ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ.

‘ಲಕ್ಕಿ ಮ್ಯಾನ್’​ ಸಿನಿಮಾದ ಶೂಟಿಂಗ್​ ಮುಗಿದಿದೆ. ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇದ್ದು ಅದನ್ನೂ ಈಗ ಪೂರ್ಣಗೊಳಿಸಲಾಗಿದೆ. ಸದ್ಯ, ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ಗಳಿಗೆ ಚಾಲನೆ ನೀಡಿದೆ. ಡಾರ್ಲಿಂಗ್​ ಕೃಷ್ಣ ನಟನೆಯ ‘ಲವ್​ ಮಾಕ್ಟೇಲ್​’ ಸಿನಿಮಾ ಹಿಟ್​ ಆಗಿತ್ತು. ಇದಾದ ನಂತರದಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

ಇನ್ನು, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರಗಳ ಬಗ್ಗೆ ದೊಡ್ಡ ಭರವಸೆಯನ್ನು ಅಭಿಮಾನಿಗಳು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್

ಶೂಟಿಂಗ್​ ವೇಳೆ ಎಡವಟ್ಟು ಮಾಡಿಕೊಂಡ ತ್ರಿಶಾ ಕೃಷ್ಣನ್​; ಪುನೀತ್​ ಸಿನಿಮಾ ನಟಿಗೆ ಕಾಡುತ್ತಿದೆ ಬಂಧನ ಭೀತಿ

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು