AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?

‘ಲಕ್ಕಿ ಮ್ಯಾನ್’​ ಸಿನಿಮಾದ ಶೂಟಿಂಗ್​ ಮುಗಿದಿದೆ. ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇದ್ದು ಅದನ್ನೂ ಈಗ ಪೂರ್ಣಗೊಳಿಸಲಾಗಿದೆ. ಸದ್ಯ, ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ಗಳಿಗೆ ಚಾಲನೆ ನೀಡಿದೆ.

Puneeth Rajkumar: ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?
ಪ್ರಭುದೇವ ಜತೆ ಸ್ಟೆಪ್​ ಹಾಕಿದ ಪುನೀತ್​ ರಾಜ್​ಕುಮಾರ್​; ಏನಿದು ಸಮಾಚಾರ?
TV9 Web
| Edited By: |

Updated on: Sep 16, 2021 | 5:38 PM

Share

ಪ್ರಭುದೇವ ಹಾಗೂ ಪುನೀತ್​ ರಾಜ್​ಕುಮಾರ್​ ಡ್ಯಾನ್ಸ್​ ಕಲೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅದ್ಭುತ ಸ್ಟೆಪ್​ ಹಾಕುವುದರಲ್ಲಿ ಇವರನ್ನು ಮೀರಿಸುವವರು ಯಾರೂ ಇಲ್ಲ. ಇಬ್ಬರೂ ಒಟ್ಟಿಗೆ ಸೇರಿ ಸ್ಟೆಪ್​ ಹಾಕಿದರೆ ಹೇಗಿರುತ್ತದೆ? ಹೀಗೊಂದು ಸದಾವಕಾಶ ಒದಗಿ ಬಂದಿದೆ. ಪುನೀತ್​ ರಾಜ್​ಕುಮಾರ್​ ಹಾಗೂ ಪ್ರಭುದೇವ ಒಟ್ಟಾಗಿ ಹೆಜ್ಜೆ ಹಾಕಿದ್ದಾರೆ. ಈ ಖುಷಿಯ ಕ್ಷಣವನ್ನು ಪುನೀತ್​ ರಾಜ್​ಕುಮಾರ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಡಾರ್ಲಿಂಗ್​ ಕೃಷ್ಣ ಅವರು ‘ಲಕ್ಕಿ ಮ್ಯಾನ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನ ‘ಓಹ್ ಮೈ ಕಡವುಳೆ’ ಸಿನಿಮಾದ ರಿಮೇಕ್​ ಇದು. ಈ ಚಿತ್ರದಲ್ಲಿ ಪುನೀತ್​​ ರಾಜ್​ಕುಮಾರ್​ ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾರ್​ ಒಟ್ಟಿಗೆ ಹೆಜ್ಜೆ ಹಾಕುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಈ ಸಿನಿಮಾದಲ್ಲಿ ಪ್ರಭುದೇವ ಹೆಜ್ಜೆ ಹಾಕೋಕು ಒಂದು ಕಾರಣ ಇದೆ. ಈ ಸಿನಿಮಾ ನಿರ್ದೇಶನ ಮಾಡುತ್ತಿರುವುದು ನಾಗೇಂದ್ರ ಪ್ರಸಾದ್​. ‘ಮನಸೆಲ್ಲಾ ನೀನೆ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಇವರು ಕೋರಿಯೋಗ್ರಾಫರ್​ ಕೂಡ ಹೌದು. ಇತ್ತೀಚೆಗೆ ತೆರೆಗೆ ಬಂದ ‘ತಲೈವಿ’ ಸೇರಿ ಸಾಕಷ್ಟು ಸಿನಿಮಾಗಳಿಗೆ ಅವರು ಕೋರಿಯೋಗ್ರಾಫಿ ಮಾಡಿದ್ದಾರೆ. ಈಗ ‘ಲಕ್ಕಿ ಮ್ಯಾನ್​’ ಸಿನಿಮಾ ಮೂಲಕ ಅವರು ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ನಾಗೇಂದ್ರ ಪ್ರಸಾದ್ ಅವರ ಅಣ್ಣನೇ ಪ್ರಭುದೇವ​. ತಮ್ಮನ ಸಿನಿಮಾದಲ್ಲಿ ಅಣ್ಣ ಪ್ರಭುದೇವ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ.

‘ಲಕ್ಕಿ ಮ್ಯಾನ್’​ ಸಿನಿಮಾದ ಶೂಟಿಂಗ್​ ಮುಗಿದಿದೆ. ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇದ್ದು ಅದನ್ನೂ ಈಗ ಪೂರ್ಣಗೊಳಿಸಲಾಗಿದೆ. ಸದ್ಯ, ಚಿತ್ರತಂಡ ಪೋಸ್ಟ್​ ಪ್ರೊಡಕ್ಷನ್​ಗಳಿಗೆ ಚಾಲನೆ ನೀಡಿದೆ. ಡಾರ್ಲಿಂಗ್​ ಕೃಷ್ಣ ನಟನೆಯ ‘ಲವ್​ ಮಾಕ್ಟೇಲ್​’ ಸಿನಿಮಾ ಹಿಟ್​ ಆಗಿತ್ತು. ಇದಾದ ನಂತರದಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

ಇನ್ನು, ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರಗಳ ಬಗ್ಗೆ ದೊಡ್ಡ ಭರವಸೆಯನ್ನು ಅಭಿಮಾನಿಗಳು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್

ಶೂಟಿಂಗ್​ ವೇಳೆ ಎಡವಟ್ಟು ಮಾಡಿಕೊಂಡ ತ್ರಿಶಾ ಕೃಷ್ಣನ್​; ಪುನೀತ್​ ಸಿನಿಮಾ ನಟಿಗೆ ಕಾಡುತ್ತಿದೆ ಬಂಧನ ಭೀತಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ